Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...