Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...