Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...