Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...