Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...