Homeಕರ್ನಾಟಕಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಹೋರಾಟಕ್ಕೆ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ 'ಸಂಯುಕ್ತ ಹೋರಾಟ - ಕರ್ನಾಟಕ' ಬೆಂಬಲ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮೇ 20ರಂದು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಬಲ ನೀಡಲಿದ್ದು, ರಾಜ್ಯದ ಗ್ರಾಮೀಣ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕರು, ರೈತರು ತಮ್ಮ ಕೆಲಸಗಳನ್ನು ನಿಲ್ಲಿಸಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ದ ಸಂಯೋಜಕ ಟಿ. ಯಶವಂತ ಅವರು ಹೇಳಿದರು. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮೇ 20 ಸಾರ್ವತ್ರಿಕ ಮುಷ್ಕರ

‘ಸಂಯುಕ್ತ ಹೋರಾಟ ಕರ್ನಾಟಕ’ ಎಂಬುದು ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಮೇ 20ರಂದು ದೇಶದಾದ್ಯಂತ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಭಾಗವಹಿಸಲಿದ್ದೇವೆ ಎಂದು ಅವರು ತಿಳಿಸಿದರು.

ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “2020ರ ಈಚೆಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂದುವರಿದ ಹೋರಾಟ ನಡೆಯುತ್ತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜೆಸಿಟಿಯು ಸಾರ್ವತ್ರಿಕ ಮುಷ್ಕರಕ್ಕೆ ಜಂಟಿಯಾಗಿ ತೀರ್ಮಾನಿಸಿವೆ. ರೈತರು ನಡೆಸಿದ್ದ ಒಂದು ವರ್ಷಗಳ ಕಾಲದ ಹೋರಾಟದ ವೇಳೆ, ಕೇಂದ್ರ ಸರ್ಕಾರ ರೈತರಿಗೆ ನೀಡಿದ ಮಾತನ್ನು ಇನ್ನೂ ಈಡೇಡಿಸಿಲ್ಲ. ನಮ್ಮ ಈ ಹೋರಾಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನಡೆಯುತ್ತಿದೆ” ಎಂದರು.

“ಬಿಜೆಪಿ ತಂದ ಕಾನೂನನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಚಾಚು ತಪ್ಪದೆ ಜಾರಿ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ವಿದ್ಯುತ್ ನೀತಿಯನ್ನು ವಿರೋಧ ಮಾಡಿದ್ದ ಕಾಂಗ್ರೆಸ್ ಈಗ ಅದನ್ನು ಜಾರಿ ಮಾಡುತ್ತಿದೆ. ಭೂ ಮಸೂದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರೂ ಅದನ್ನು ಇನ್ನೂ ಮಾಡಿಲ್ಲ. ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ನಿಷೇಧ ಮತ್ತು ತಿದ್ದುಪಡಿ ಕಾಯ್ದೆಯಿಂದ ರೈತರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಸ್ವಾಮಿನಾಥನ್ ವರದಿ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಆದರೆ ಇಲ್ಲಿನ ಸರ್ಕಾರ ಅದರ ಬಗ್ಗೆ ಮಾತನಾಡುತ್ತಲೆ ಇಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಬದಲಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರಬಹುದು, ಆದರೆ ನೀತಿಗಳು ಹಾಗೆ ಇವೆ. ಮೇ 20ರಂದು ನಡೆಯಲಿರುವ ಮುಷ್ಕರದಲ್ಲಿ ರಾಜ್ಯದ ಎಲ್ಲಾ ಕಡೆ ಲಕ್ಷಾಂತರ ಜನರು ಬೀದಿಗೆ ಇಳಿಯುತ್ತಾರೆ. ಬಂಧನಕ್ಕೆ ಒಳಗಾಗುತ್ತಾರೆ. ಜೈಲ್ ಭರೋ ನಡೆಯುತ್ತದೆ. ಕೇಂದ್ರ ಮತ್ತು ಸರ್ಕಾರ ಈಗಾದರೂ ಕಾನೂನನ್ನು ವಾಪಾಸು ತೆಗೆದುಕೊಂಡರೆ ನಾವು ಹೋರಾಟದ ಬಗ್ಗೆ ಮರುಪರಿಶೀಲನೆ ಮಾಡುತ್ತೇವೆ.” ಎಂದು ಅವರು ಹೇಳಿದರು.

ಕಾರ್ಮಿಕ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, “ಸಂಪತ್ತು ಸೃಷ್ಟಿಸುವ ರೈತ ಮತ್ತು ಕಾರ್ಮಿಕರಿಗಾಗಿ ಇದ್ದ ಕಾನೂನುಗಳನ್ನು ವ್ಯಾಪಾರವನ್ನು ಸುಲಭ ಮಾಡಲು ಬೇಕಾಗಿ ಸರ್ಕಾರ ಬದಲಾವಣೆ ಮಾಡುತ್ತಿವೆ. ಅದರ ಬದಲಾಗಿ ನಾಲ್ಕು ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ಜಾರಿ ಮಾಡುತ್ತಿದೆ. ಈ ಬದಲಾವಣೆಯಿಂದ 80% ಕಾರ್ಮಿಕರು ಯಾವುದೇ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಬರುವುದಿಲ್ಲ. ಸಂಘ ಕಟ್ಟುವ ಹಕ್ಕು, ಸಾಮೂಹಿಕ ಚೌಕಾಶಿಯ, ಮುಷ್ಕರದ ಹಕ್ಕನ್ನು ಈ ಕೋಡ್‌ಗಳ ಕಿತ್ತುಕೊಳ್ಳುತ್ತವೆ” ಎಂದು ಹೇಳಿದರು.

“ಈ ಕಾನೂನಿನ ಪ್ರಕಾರ ಮುಷ್ಕರಕ್ಕೆ 60 ದಿನಗಳ ಮುಂಚೆ ನೋಟಿಸ್ ನೀಡಬೇಕು. ಈ ಹಿಂದೆ 14 ದಿನಗಳ ಮುಂಚೆ ನೋಟಿಸ್ ನೀಡಿದರೆ ಹೇಳಿದರೆ ಸಾಕಿತ್ತು. ಈ ವೇಳೆ ಮುಷ್ಕರಕ್ಕೆ ಹೋಗುವ ಕಾರ್ಮಿಕರಿಗೆ ಸೆರೆಮನೆ ವಾಸ ಶಿಕ್ಷೆ, ದಂಡ ಹಾಕಿ ಹಕ್ಕು ಕೇಳುವ ಕಾರ್ಮಿಕರನ್ನು ಬೆದರಿಸಲಾಗುತ್ತದೆ. 70% ಕಾರ್ಮಿಕರು ಈಗ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಇಎಸ್ಐ ಮತ್ತು ಪಿಎಫ್ಐ ಐಚ್ಛಿಕವಾಗಿ ಮಾಡಲಾಗಿದೆ. ಕಟ್ಟಡ ಕಾರ್ಮಿಕರ ಸೆಸ್‌ಗಳನ್ನು ರದ್ದು ಮಾಡಲಾಗಿದೆ. ಈ ಕಾನೂನಿನ ಮೂಲಕ ಕಾರ್ಮಿಕರ ಎಲ್ಲಾ ಸವಲತ್ತುಗಳನ್ನು ಕಿತ್ತುಕೊಂಡಿದ್ದಾರೆ.” ಎಂದು ಅವರು ಹೇಳಿದರು.

“ಹೊಸ ಕಾರ್ಮಿಕ ಕೋಡ್‌ನಲ್ಲಿ ಕೆಲಸದ ಅವಧಿಯನ್ನು 8ರಿಂದ 12ಕ್ಕೆ ಹೆಚ್ಚಿಸುತ್ತಿದ್ದಾರೆ. ಅದಾಗ್ಯೂ ಓವರ್‌ ಟೈಮ್ ಕೆಲಸಕ್ಕೆ ಹೆಚ್ಚುವರಿ ವೇತನ ಕೊಡುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಲೇಬರ್ ಕೋಡ್ ಕಾರ್ಮಿಕರ ಮರಣ ಶಾಸನ. ಇದು ಜಾರಿಗೆ ಬಂದರೆ ರಾಜ-ಮಹಾರಾಜರ ಕಾಲದಲ್ಲಿ ಇದ್ದಂತೆ ಕಾರ್ಮಿಕರು ದಾಸ್ಯಕ್ಕೆ ಒಳಗಾಗುತ್ತಾರೆ” ಎಂದು ಅವರು ಎಚ್ಚರಿಸಿದರು.

“ರಾಜ್ಯದ ಸಿದ್ದರಾಮಯ್ಯ ಸರ್ಕಾರದ ಮೇಲೆ ಕಾರ್ಮಿಕ ಸಂಘಟನೆಗಳಿಗೆ ಹೆಚ್ಚು ತೀರಾ ಬೇಸರವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟ್‌ಗಳ ಪರವಾಗಿದೆ ಎಂಬುವು ಎಲ್ಲರಿಗೂ ತಿಳಿದಿರುವಂತದ್ದೆ. ಅವರಿಂದ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಹೇಳುವುದನ್ನು ಮಾಡುತ್ತಿರುವುದು ನಮಗೆ ತೀರಾ ಬೇಸರದ ವಿಚಾರ. ಅದಾಗ್ಯೂ, ಒಂದು ದಿನದ ಮುಷ್ಕರಕ್ಕೆ ಈ ಹೋರಾಟ ನಿಲ್ಲುವುದಿಲ್ಲ.‌ ಬೆವರು ಸುರಿಸಿ ದುಡಿಯುವ ಜನರ ಕೋಪ ಒಮ್ಮೆ ಸ್ಪೋಟ ಆಯಿತು ಎಂದರೆ ಅದನ್ನು ನಿಮಗೆ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಅವರು ಎಚ್ಚರಿಕೆ ನೀಡಿದರು.

ಕಾರ್ಮಿಕ ಮುಖಂಡ ಕೆ.ವಿ.ಭಟ್ ಮಾತನಾಡಿ, “ಕೇಂದ್ರ ಕಾರ್ಮಿಕ ಜಂಟಿ ಸಮಿತಿ ದೇಶದಲ್ಲಿ ಕಳೆದ 30 ವರ್ಷಗಳಿಂದ ಒಟ್ಟಾಗಿ ಹೋರಾಟ ಮಾಡುತ್ತಲೇ ಬಂದಿದೆ. ಆ ಎಲ್ಲಾ ಹೋರಾಟಗಳ ಮುಂದುವರಿಕೆಯಾಗಿ ಈ ಮುಷ್ಕರ ನಡೆಯುತ್ತಿದೆ. ಕೇಂದ್ರ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಕರಣ ಮಾಡಲು ಮತ್ತು ಅದನ್ನು ಬಿಡಿಗಾಸಿಗೆ ಮಾರಾಟ ಮಾಡಲು ಹೊರಟಿದೆ. ಇದನ್ನು ಕೈ ಬಿಡಬೇಕು ಎಂಬುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ಮೇಲೆ ಬೆಲೆ ಏರಿಕೆ ಮಾಡುತ್ತಿವೆ. ಎರಡು ಸರ್ಕಾರಗಳು ಅದಕ್ಕೆ ಕಡಿವಾಣ ಹಾಕಬೇಕು ಎಂಬುವುದು ನಮ್ಮ ಬೇಡಿಕೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಿಂದ ಕಟ್ಟಿರುವ ವಿದ್ಯುತ್ ವಲಯವನ್ನು ಬಿಡಿಗಾಸಿಗೆ ಖಾಸಗಿಗೆ ವಹಿಸಲಾಗುತ್ತಿದೆ. ಕೇಂದ್ರ ಸರ್ಕಾರ ತನ್ನ ನೀತಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರದೊಂದಿಗೆ ತಿಕ್ಕಾಟ ನಡೆಸುತ್ತಿದೆ. ತನ್ನ ನೀತಿ ಜಾರಿ ಮಾಡಿದರೆ ಮಾತ್ರ ಅನುದಾನ ನೀಡುತ್ತೇವೆ ಎಂದು ಹಿಂಬಾಗಿಲ ಮೂಲಕ ಕಾನೂನು ಜಾರಿಗೆ ತರುವ ಪ್ರಯತ್ನ ನಡೆಸುತ್ತಿದೆ” ಎಂದು ಹೇಳಿದರು.

ಈ ಹಿಂದೆ ಕೇಂದ್ರದ ನೀತಿ, ನಿಲುವುಗಳನ್ನು ವಿರೋಧ ಮಾಡಿಕೊಂಡು ಬಂದ ರಾಜ್ಯ ಸರ್ಕಾರ ಈಗ ವಚನ ಭ್ರಷ್ಟವಾಗಿದೆ. ಈ ಎಲ್ಲಾ ಬೇಡಿಕೆಗಾಗಿ ನಮ್ಮ ಹೋರಾಟ ನಡೆಯುತ್ತಿದ್ದು, ಅದರ ಭಾಗವಾಗಿ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾ ಸಮಾವೇಶ ನಡೆಯುತ್ತಿವೆ ಎಂದು ಅವರು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಉಭಯ ದೇಶಗಳ ರೈತರು ಮತ್ತು ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. “ದೇಶದಲ್ಲಿ ರೈತರ ಭೂಮಿಯನ್ನು, ಕಾರ್ಮಿಕರಿಂದ ಅವರ ಬದುಕುವ ಹಕ್ಕು ಮತ್ತು ಅವರ ಹೋರಾಟದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ದುಡಿವ ಜನರ ಮೇಲೆ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ದಾಳಿ ಮಾಡುತ್ತಿವೆ. ಕೇಂದ್ರ ಸರ್ಕಾರಕ್ಕಿಂತ ನಮಗೆ ನಿರೀಕ್ಷೆಗಳಿದ್ದ ರಾಜ್ಯ ಸರ್ಕಾರದ ಬಗ್ಗೆ ಹೆಚ್ಚು ಭ್ರಮನಿರಸನ ಆಗಿದ್ದೇವೆ” ಎಂದು ಹೇಳಿದರು. ಮೇ 20 ಸಾರ್ವತ್ರಿಕ ಮುಷ್ಕರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....