Homeಕರ್ನಾಟಕಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

ಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

”ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಈ ನಿರ್ಬಂಧವಿದ್ದು, ದಿನಾಂಕ 9 ಮತ್ತು 10 ಮೇ 2023 ರಂದು (ಚುನಾವಣೆಯ ದಿನದ ಒಂದು ದಿನ ಮೊದಲು ಮತ್ತು ಮತದಾನದ ದಿನದಂದು) ಪ್ರಕಟಿಸಲು ಉದ್ದೇಶಿಸಿರುವ ರಾಜಕೀಯ ಜಾಹೀರಾತಿನ ವಿಷಯವನ್ನು ಆಯಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಇತ್ಯಾದಿ ಸಂಸ್ಥೆಗಳು ಸಂದರ್ಭಾನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ MCMC (ಮಾಧ್ಯಮ ಪ್ರಮಾಣೀಕರಣ ಮತ್ತು ಮಾನಿಟರಿಂಗ್ ಸಮಿತಿ) ಸಮಿತಿಯಿಂದ ಪೂರ್ವ-ಪ್ರಮಾಣೀಕರಣ ಪಡೆದು ಪ್ರಕಟಿಸಬಹುದಾಗಿದೆ” ಎಂದು ತಿಳಿಸಲಾಗಿದೆ.

”ಮೇ 9 ಮತ್ತು 10 ರಂದು ಮುದ್ರಣ ಮಾಧ್ಯಮದಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಬಯಸುವ ಯಾವುದೇ ರಾಜಕೀಯ ಪಕ್ಷಗಳು ಉದ್ದೇಶಿತ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅನುಬಂಧ-ಸಿ ನಮೂನೆಯಲ್ಲಿ 07.05.2023 ರೊಳಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು 560001 ರಲ್ಲಿ ಇರುವ ರಾಜ್ಯ ಪೂರ್ವ ಪಮಾಣೀಕರಣ ಸಮಿತಿ ಅಥವಾ ಆಯಾ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಪೂರ್ವ ಪ್ರಮಾಣೀಕರಣ ಸಮಿತಿಗೆ ಸಲ್ಲಿಸಿ ಪೂರ್ವ ಪ್ರಮಾಣೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

”ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ಪ್ರಕಾರ ಮತದಾನದ 48 ಗಂಟೆಗಳ ಮೊದಲು ಮಾಧ್ಯಮಗಳಲ್ಲಿ ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ನಿಷೇಧಿಸಲಾಗಿದೆ. ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಎಂದರೆ ಚುನಾವಣೆಯ ಫಲಿತಾಂಶದ ಮೇಲೆ ಪುಭಾವ ಬೀರಲು ಅಥವಾ ಪರಿಣಾಮ ಬೀರಲು ಉದ್ದೇಶಿಸಿರುವ ಅಥವಾ ಲೆಕ್ಕಹಾಕಿದ ಯಾವುದೇ ವಿಷಯವಾಗಿರುತ್ತದೆ. ಈ ನಿಬಂಧನೆಯನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿರುತ್ತದೆ” ಎಂದು ಎಚ್ಚರಿಸಿದೆ.

”ಟಿವಿ, ರೇಡಿಯೋ ಚಾನೆಲ್‌ಗಳು, ಕೇಬಲ್ ನೆಟ್‌ವರ್ಕ್‌ಗಳು ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮಕೈಗೊಳ್ಳಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ಪುಚಾರ ಮಾಡುವುದು, ಪೂರ್ವಾಗ್ರಹ ಪಡಿಸುವುದು ಅಥವಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮ ಪ್ರಸಾರ ನಿಷೇಧಿಸಲಾಗಿದೆ” ಎಂದು ತಿಳಿಸಲಾಗಿದೆ.

”ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶಗಳ ಪ್ರದರ್ಶನ ಮತ್ತು ಪ್ರಮಾಣಿತ ಚರ್ಚೆಗಳು, ವಿಶ್ಲೇಷಣೆ, ದೃಶ್ಯಗಳು ಮತ್ತು ಧ್ವನಿ ಬ್ಲೆಟ್‌ಗಳನ್ನು ಒಳಗೊಂಡಿರುತ್ತದೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾದಾಗಿನಿಂದ ಮತ್ತು ಮತದಾನ ಮುಗಿದ ಅರ್ಧ ಗಂಟೆಯ ಅವಧಿಯಲ್ಲಿ ಎಕ್ಸಿಟ್ ಪೋಲ್ ನಡೆಸುವುದನ್ನು ಮತ್ತು ಅವುಗಳ ಫಲಿತಾಂಶಗಳನ್ನು ಪ್ರಸಾರ ಮಾಡುವುದನ್ನು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 A ರ ಪ್ರಕಾರ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...