Homeಕರ್ನಾಟಕಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

ಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

”ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಈ ನಿರ್ಬಂಧವಿದ್ದು, ದಿನಾಂಕ 9 ಮತ್ತು 10 ಮೇ 2023 ರಂದು (ಚುನಾವಣೆಯ ದಿನದ ಒಂದು ದಿನ ಮೊದಲು ಮತ್ತು ಮತದಾನದ ದಿನದಂದು) ಪ್ರಕಟಿಸಲು ಉದ್ದೇಶಿಸಿರುವ ರಾಜಕೀಯ ಜಾಹೀರಾತಿನ ವಿಷಯವನ್ನು ಆಯಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಇತ್ಯಾದಿ ಸಂಸ್ಥೆಗಳು ಸಂದರ್ಭಾನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ MCMC (ಮಾಧ್ಯಮ ಪ್ರಮಾಣೀಕರಣ ಮತ್ತು ಮಾನಿಟರಿಂಗ್ ಸಮಿತಿ) ಸಮಿತಿಯಿಂದ ಪೂರ್ವ-ಪ್ರಮಾಣೀಕರಣ ಪಡೆದು ಪ್ರಕಟಿಸಬಹುದಾಗಿದೆ” ಎಂದು ತಿಳಿಸಲಾಗಿದೆ.

”ಮೇ 9 ಮತ್ತು 10 ರಂದು ಮುದ್ರಣ ಮಾಧ್ಯಮದಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಬಯಸುವ ಯಾವುದೇ ರಾಜಕೀಯ ಪಕ್ಷಗಳು ಉದ್ದೇಶಿತ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅನುಬಂಧ-ಸಿ ನಮೂನೆಯಲ್ಲಿ 07.05.2023 ರೊಳಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು 560001 ರಲ್ಲಿ ಇರುವ ರಾಜ್ಯ ಪೂರ್ವ ಪಮಾಣೀಕರಣ ಸಮಿತಿ ಅಥವಾ ಆಯಾ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಪೂರ್ವ ಪ್ರಮಾಣೀಕರಣ ಸಮಿತಿಗೆ ಸಲ್ಲಿಸಿ ಪೂರ್ವ ಪ್ರಮಾಣೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

”ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ಪ್ರಕಾರ ಮತದಾನದ 48 ಗಂಟೆಗಳ ಮೊದಲು ಮಾಧ್ಯಮಗಳಲ್ಲಿ ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ನಿಷೇಧಿಸಲಾಗಿದೆ. ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಎಂದರೆ ಚುನಾವಣೆಯ ಫಲಿತಾಂಶದ ಮೇಲೆ ಪುಭಾವ ಬೀರಲು ಅಥವಾ ಪರಿಣಾಮ ಬೀರಲು ಉದ್ದೇಶಿಸಿರುವ ಅಥವಾ ಲೆಕ್ಕಹಾಕಿದ ಯಾವುದೇ ವಿಷಯವಾಗಿರುತ್ತದೆ. ಈ ನಿಬಂಧನೆಯನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿರುತ್ತದೆ” ಎಂದು ಎಚ್ಚರಿಸಿದೆ.

”ಟಿವಿ, ರೇಡಿಯೋ ಚಾನೆಲ್‌ಗಳು, ಕೇಬಲ್ ನೆಟ್‌ವರ್ಕ್‌ಗಳು ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮಕೈಗೊಳ್ಳಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ಪುಚಾರ ಮಾಡುವುದು, ಪೂರ್ವಾಗ್ರಹ ಪಡಿಸುವುದು ಅಥವಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮ ಪ್ರಸಾರ ನಿಷೇಧಿಸಲಾಗಿದೆ” ಎಂದು ತಿಳಿಸಲಾಗಿದೆ.

”ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶಗಳ ಪ್ರದರ್ಶನ ಮತ್ತು ಪ್ರಮಾಣಿತ ಚರ್ಚೆಗಳು, ವಿಶ್ಲೇಷಣೆ, ದೃಶ್ಯಗಳು ಮತ್ತು ಧ್ವನಿ ಬ್ಲೆಟ್‌ಗಳನ್ನು ಒಳಗೊಂಡಿರುತ್ತದೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾದಾಗಿನಿಂದ ಮತ್ತು ಮತದಾನ ಮುಗಿದ ಅರ್ಧ ಗಂಟೆಯ ಅವಧಿಯಲ್ಲಿ ಎಕ್ಸಿಟ್ ಪೋಲ್ ನಡೆಸುವುದನ್ನು ಮತ್ತು ಅವುಗಳ ಫಲಿತಾಂಶಗಳನ್ನು ಪ್ರಸಾರ ಮಾಡುವುದನ್ನು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 A ರ ಪ್ರಕಾರ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...