Homeಕರ್ನಾಟಕಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

ಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

”ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಈ ನಿರ್ಬಂಧವಿದ್ದು, ದಿನಾಂಕ 9 ಮತ್ತು 10 ಮೇ 2023 ರಂದು (ಚುನಾವಣೆಯ ದಿನದ ಒಂದು ದಿನ ಮೊದಲು ಮತ್ತು ಮತದಾನದ ದಿನದಂದು) ಪ್ರಕಟಿಸಲು ಉದ್ದೇಶಿಸಿರುವ ರಾಜಕೀಯ ಜಾಹೀರಾತಿನ ವಿಷಯವನ್ನು ಆಯಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಇತ್ಯಾದಿ ಸಂಸ್ಥೆಗಳು ಸಂದರ್ಭಾನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ MCMC (ಮಾಧ್ಯಮ ಪ್ರಮಾಣೀಕರಣ ಮತ್ತು ಮಾನಿಟರಿಂಗ್ ಸಮಿತಿ) ಸಮಿತಿಯಿಂದ ಪೂರ್ವ-ಪ್ರಮಾಣೀಕರಣ ಪಡೆದು ಪ್ರಕಟಿಸಬಹುದಾಗಿದೆ” ಎಂದು ತಿಳಿಸಲಾಗಿದೆ.

”ಮೇ 9 ಮತ್ತು 10 ರಂದು ಮುದ್ರಣ ಮಾಧ್ಯಮದಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಬಯಸುವ ಯಾವುದೇ ರಾಜಕೀಯ ಪಕ್ಷಗಳು ಉದ್ದೇಶಿತ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅನುಬಂಧ-ಸಿ ನಮೂನೆಯಲ್ಲಿ 07.05.2023 ರೊಳಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು 560001 ರಲ್ಲಿ ಇರುವ ರಾಜ್ಯ ಪೂರ್ವ ಪಮಾಣೀಕರಣ ಸಮಿತಿ ಅಥವಾ ಆಯಾ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಪೂರ್ವ ಪ್ರಮಾಣೀಕರಣ ಸಮಿತಿಗೆ ಸಲ್ಲಿಸಿ ಪೂರ್ವ ಪ್ರಮಾಣೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

”ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ಪ್ರಕಾರ ಮತದಾನದ 48 ಗಂಟೆಗಳ ಮೊದಲು ಮಾಧ್ಯಮಗಳಲ್ಲಿ ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ನಿಷೇಧಿಸಲಾಗಿದೆ. ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಎಂದರೆ ಚುನಾವಣೆಯ ಫಲಿತಾಂಶದ ಮೇಲೆ ಪುಭಾವ ಬೀರಲು ಅಥವಾ ಪರಿಣಾಮ ಬೀರಲು ಉದ್ದೇಶಿಸಿರುವ ಅಥವಾ ಲೆಕ್ಕಹಾಕಿದ ಯಾವುದೇ ವಿಷಯವಾಗಿರುತ್ತದೆ. ಈ ನಿಬಂಧನೆಯನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿರುತ್ತದೆ” ಎಂದು ಎಚ್ಚರಿಸಿದೆ.

”ಟಿವಿ, ರೇಡಿಯೋ ಚಾನೆಲ್‌ಗಳು, ಕೇಬಲ್ ನೆಟ್‌ವರ್ಕ್‌ಗಳು ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮಕೈಗೊಳ್ಳಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ಪುಚಾರ ಮಾಡುವುದು, ಪೂರ್ವಾಗ್ರಹ ಪಡಿಸುವುದು ಅಥವಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮ ಪ್ರಸಾರ ನಿಷೇಧಿಸಲಾಗಿದೆ” ಎಂದು ತಿಳಿಸಲಾಗಿದೆ.

”ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶಗಳ ಪ್ರದರ್ಶನ ಮತ್ತು ಪ್ರಮಾಣಿತ ಚರ್ಚೆಗಳು, ವಿಶ್ಲೇಷಣೆ, ದೃಶ್ಯಗಳು ಮತ್ತು ಧ್ವನಿ ಬ್ಲೆಟ್‌ಗಳನ್ನು ಒಳಗೊಂಡಿರುತ್ತದೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾದಾಗಿನಿಂದ ಮತ್ತು ಮತದಾನ ಮುಗಿದ ಅರ್ಧ ಗಂಟೆಯ ಅವಧಿಯಲ್ಲಿ ಎಕ್ಸಿಟ್ ಪೋಲ್ ನಡೆಸುವುದನ್ನು ಮತ್ತು ಅವುಗಳ ಫಲಿತಾಂಶಗಳನ್ನು ಪ್ರಸಾರ ಮಾಡುವುದನ್ನು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 A ರ ಪ್ರಕಾರ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...