Homeಮುಖಪುಟರಾಮ ಎಲ್ಲರಿಗೂ ಸೇರಿದವನು, ಅಯೋಧ್ಯೆ ಕಾರ್ಯಕ್ರಮ ರಾಷ್ಟ್ರೀಯ ಏಕತೆಗೆ ದಾರಿಯಾಗಲಿ: ಪ್ರಿಯಾಂಕ ಗಾಂಧಿ

ರಾಮ ಎಲ್ಲರಿಗೂ ಸೇರಿದವನು, ಅಯೋಧ್ಯೆ ಕಾರ್ಯಕ್ರಮ ರಾಷ್ಟ್ರೀಯ ಏಕತೆಗೆ ದಾರಿಯಾಗಲಿ: ಪ್ರಿಯಾಂಕ ಗಾಂಧಿ

ದೇವಾಲಯದ ಭೂಮಿಪೂಜೆ ಸಮಾರಂಭವು ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಕೂಟವಾಗಿ" ಮಾರ್ಪಡಲಿ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಮ ಎಲ್ಲರಿಗೂ ಸೇರಿದವನು, ಆಗಸ್ಟ್‌ 5 ರಂದು ನಡೆಯುವ ಅಯೋಧ್ಯೆಯ ರಾಮಮಂದಿರದ ಭೂಮಿ ಪೂಜೆ ಕಾರ್ಯಕ್ರಮ ರಾಷ್ಟ್ರೀಯ ಏಕತೆಗೆ ದಾರಿಯಾಗಲಿ ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಗವಾನ್ ರಾಮ ಎಲ್ಲರೊಂದಿಗೂ ಇದ್ದಾರೆ. ನಾಳೆ ರಾಮ ಜನ್ಮಭೂಮಿಯಲ್ಲಿ ನಡೆಯುವ ಸಮಾರಂಭವು “ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಸಭೆಯ ಸಂದರ್ಭವಾಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ಸರಳತೆ, ಧೈರ್ಯ, ಸಂಯಮ, ತ್ಯಾಗ, ಬದ್ಧತೆ, ದೀನಬಂಧು ಎಂಬುದು ರಾಮ ಎಂಬ ಹೆಸರಿನ ಮೂಲತತ್ವ. ರಾಮ ಎಲ್ಲರೊಂದಿಗೂ ಇದ್ದಾನೆ” ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

“ರಾಮ ಮತ್ತು ತಾಯಿ ಸೀತಾ ಅವರ ಸಂದೇಶ ಮತ್ತು ಅನುಗ್ರಹದಿಂದ, ರಾಮಲಲ್ಲಾ ದೇವಾಲಯದ ಭೂಮಿಪೂಜೆ ಸಮಾರಂಭವು ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಕೂಟವಾಗಿ” ಮಾರ್ಪಡಲಿ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ರಾಮಾಯಣವು ವಿಶ್ವದ ಸಂಸ್ಕೃತಿ ಮತ್ತು ಭಾರತೀಯ ಉಪಖಂಡದಲ್ಲಿ ಆಳವಾದ ಮತ್ತು ಅಳಿಸಲಾಗದ ಗುರುತು ಹೊಂದಿದೆ. ಭಗವಾನ್ ರಾಮ, ತಾಯಿ ಸೀತಾ ಮತ್ತು ರಾಮಾಯಣದ ಕಥೆ ಸಾವಿರಾರು ವರ್ಷಗಳಿಂದ ನಮ್ಮ ಸಾಂಸ್ಕೃತಿಕ ಮತ್ತು ಧಾರ್ಮಿಕ ನೆನಪುಗಳಲ್ಲಿದೆ. ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮಕ್ಕೆ, ರಾಮಕಥನವು ರಾಮ ಕಥಾ, ಹರಿ ಕಥಾ, ಶ್ರೀಹರಿಯ ಅಸಂಖ್ಯಾತ ರೂಪಗಳಂತೆ ಅನಂತ ಅನೇಕ ರೂಪಗಳಲ್ಲಿ ತನ್ನನ್ನು ತಾನು ವ್ಯಕ್ತಪಡಿಸುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯುಗಯುಗದಿಂದಲೂ ಭಗವಾನ್ ರಾಮನ ಪಾತ್ರವು ಭಾರತೀಯ ಭೂಪ್ರದೇಶದಲ್ಲಿ ಮಾನವೀಯತೆಯನ್ನು ಸಂಪರ್ಕಿಸುವ ಎಳೆಯಾಗಿದೆ. ಭಗವಾನ್ ರಾಮನನ್ನು ‘ಶಕ್ತಿಯ ಮೂಲಭೂತ ಕಲ್ಪನೆ’ ಎಂದು ಕರೆಯಲಾಗುತ್ತದೆ. ರಾಮ ಎಲ್ಲರಿಗೂ ಸೇರಿದವನು. ಭಗವಾನ್ ರಾಮನು ಎಲ್ಲರ ಕಲ್ಯಾಣವನ್ನು ಬಯಸುತ್ತಾನೆ. ಅದಕ್ಕಾಗಿಯೇ ಅವರು ಘನತೆಯ ವ್ಯಕ್ತಿ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...