Homeಕರ್ನಾಟಕಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ...

ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು

- Advertisement -
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ  ವಿಲ್ಸನ್ ಬೆಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ. ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ. ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ  ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ  ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆ ಮಾಡಿ, ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು. ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು  ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ರಾಜಕಾರಣಿಗಳಿಂದ ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ. ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ. ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ. ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ. ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಇದೆ ಅಂತ ಆಗಿನ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ. ಆಗ ನಾನು ಹೇಳಿದ್ದೆ ಹಾಗಾದರೆ ನೀವು‌ ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು. ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು. ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ, ನೀನು ಹುಟ್ಟಿದ ಜಾತಿ ಎಂದು. ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ. ಅಂಧಶ್ರದ್ಧೆಗಳನ್ನು  ನಮ್ಮ ಮೆದುಳಿನಲ್ಲಿ ತುರುಕುತ್ತಾರೆ. ನಿರಂತರ ಹೋರಾಟಗಳ ನಂತರ ಮ್ಯಾನ್ ಹೋಲ್ ಕ್ಲೀನ್ ಮಾಡಲು ಸೇಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ, ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಇಲ್ಲಿ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ. ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ಯಾಕೆ?
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದು ಬಿಟ್ಟು ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ
– ದಿನೇಶ್ ಅಮೀನ್ ಮಟ್ಟು
ಈ ಮೇ‌ ಸಾಹಿತ್ಯ  ಕಾರ್ಯಕ್ರಮದಲ್ಲಿ ತಿಳಿದುಕೊಂಡದ್ದನ್ನು ನಿಮ್ಮೂರುಗಳಲ್ಲಿ ನಡೆಸುವ ಹಾಗೆ ಆಗಬೇಕು. ಚುನಾವಣೆಗೆ ಮಾತ್ರ ನಮ್ಮ ಕೆಲಸಗಳು ಸೀಮಿತವಾಗಬಾರದು, ಬೆಂಗಳೂರಿನಲ್ಲಿ ಕಾಣುವ ಭಾರತ ಬೇರೆ, ಗದಗದಲ್ಲಿ ಕಾಣುವ ಭಾರತ ಬೇರೆ.  ವೈದ್ಯರಿಲ್ಲದ ,ನೀರು ಬಾರದ ಭಾರತ ಗದಗಿನಲ್ಲಿ ಕಂಡರೆ ಬೆಂಗಳೂರಿನಲ್ಲಿ ವಿಶ್ವಭಾರತ ಮಾಡುವವರನ್ನು ನಾವು ಕಾಣಬಹುದು. ಅಂಕಿ ಅಂಶಗಳನ್ನು ನೋಡಿಯೇ ಯಾವುದೇ ತೀರ್ಮಾನಗಳನ್ನು ಮಾಡಬೇಕು, ಸಮಿಕ್ಷೆಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ. ರೈತರ ಸಂಖ್ಯೆ ಏಳೂ ವರ್ಷಗಳಲ್ಲಿ ಶೇ7% ಕಡಿಮೆಯಾಗಿದೆ. ಕೆಲ ಮುಕ್ಕಾಲು ರೈತರು ರೈತನಾಗಲು ಬಯಸುವುದಿಲ್ಲ.
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದಿಲ್ಲ ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಅಷ್ಟರ ಮಟ್ಟಿಗೆ ಧರ್ಮವನ್ನು ತಲೆ ಹೊಕ್ಕಿಸಲಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಮತ್ತು ನಾವು ಅರ್ಥ ಮಾಡಿಕೊಂಡ ಸಂವಿಧಾನವೇನೆಂಬುದು ನಮಗೆ ಗೊತ್ತಿರಬೇಕು, ಇವತ್ತಿನ ಚುನಾವಣೆ ವ್ಯವಸ್ಥೇಯಲ್ಲೂ ಪ್ರಾಮಾಣಿಕವಾಗಿ ಏನಾದರೂ ಕೆಲಸ ಮಾಡಬೇಕೆಂದರೂ ಕೂಡ ಮಾಡಲಾರದ ವ್ಯವಸ್ಥ ಇದೆ. ಅಂಬೇಡ್ಕರ್ ಬಯಸಿದ ಸಂವಿಧಾನವನ್ನು ಚಿಂತನೆಗಳನ್ನು ಸೇರಿಸಿದರೆ ಅಭಿವೃದ್ಧಿ ಭಾರತ ಮಾಡಲು ಸಾಧ್ಯ. ಮೇ ಸಾಹಿತ್ಯ ಮೇಳದಂತಹ ಕಾರ್ಯಕ್ರಮಗಳು  ಚುನಾವಣೆಗಿಂತ ಮುಂಚೆ ನಡೆಯಬೇಕಿತ್ತು, ಇಲ್ಲಿ ಸೇರಿದ ಯುವಜನರು ಇಲ್ಲಿನ ಮಾತುಗಳು ಕೇಳಿ ವೈಚಾರಿಕ ತಿಳುವಳಿಕೆ ಪಡೆಯಬೇಕು
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಂಬೆಯ ಪ್ರಗತಿಪರ ಚಿಂತಕರಾದ ರಾವ್ ಸಾಹೇಬ್ ಕಸಬೆಯವರ ಮಾತುಗಳು 
ಕನ್ನಡ ಭಾಷೆ ನನಗೆ ಬರುವುದಿಲ್ಲ. ಇದು ಒಂದು ರಿದಮ್ ಇರೋ ಭಾಷೆ. ನಾನು ಮೊದಲ ಸಲ ಕರ್ನಾಟಕಕ್ಕೆ ಬಂದಾಗ ಬಹಳ ಖುಷಿಯಾಗಿತ್ತು. ಯಾಕೆಂದರೆ ನಾನು ಬಸವಣ್ಣನ ನೆಲಕ್ಕೆ ಬಂದಿದ್ದೆ. ಇಲ್ಲಿ ಬಂದ ನಾವೆಲ್ಲಾ ಹೊಸ ಭಾರತ ಕಟ್ಟುವ ಕನಸು ಕಾಣುತ್ತಿದ್ದೇವೆ , ಕನಸಾದ್ರೂ ಕಾಣುತ್ತಿದ್ದೇವಲ್ಲಾ ಎಂಬುದು ಖುಷಿಯ  ವಿಚಾರ. ಇಲ್ಲಿ ಬೇರೆ ಬೇರೆ ಜನಾಂಗಗಳಿವೆ, ಧರ್ಮಗಳಿವೆ, ವರ್ಣಗಳಿವೆ, ಭಾಷೆಗಳಿವೆ ಇದೆಯಲ್ಲವೇ ಭಾರತದೇಶದ ಸೌಂದರ್ಯ?. ಈಗೀಗ ಭಾರತದಲ್ಲಿ ಭಾರತ ಮಾತಾ ಕಿ ಜೈ ಅನ್ನುವ ಸದ್ದು ಕೇಳಿ ಬರುತ್ತಿದೆ, ಇಲ್ಲದ ರಾಷ್ಟ್ರವನ್ನು ಜೈಕಾರ ಹಾಕುವುದೇನು ? ಮೊದಲ ರಾಷ್ಟ್ರ ನಿರ್ಮಿಸೋಣ, ಯಾರ್ಯಾರೋ ರಾಜರುಗಳು, ಮೊಗಲರು, ಸುಲ್ತಾನರು ರಾಜರು ಬಂದರೂ ರಾಷ್ಟ್ರವನ್ನು ಮಾಡಲಾಗಲಿಲ್ಲ. ಸಮಾಜವಾದ, ಸಮಾನತೆ, ನಾಡು ಕಟ್ಟುವ ಕನಸು ನನಸಾಗಿದ್ದೆ ಬಾಬಾಸಾಹೇಬರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಭಾರತ ನನ್ನ ದೇಶವೆಂದು ಹೇಳುವಂತೆ ಮಾಡಿದರು.
ಸ್ವಾತಂತ್ರ್ಯ ಬಂದ ಮೇಲೆ ಗಾಂಧೀಜಿಯೂ ಚರಕ ಬಳಸುತ್ತಿದ್ದರು. ಮೋದಿಯೂ ಬಳಸುತ್ತಿದ್ದಾರೆ ಪ್ರಚಾರಕ್ಕಾಗಿ. ಆದರೆ ಗಾಂಧೀಜಿಯ ಪಕ್ಕಕ್ಕೆ ಕಸ್ತೂರಬಾ ಇದ್ದರು ಆದರೆ ಇವರು ಒಬ್ಬರೇ ಇದ್ದದ್ದು ಇದನ್ನು ನಾವು ಗಮನಿಸಬೇಕು. ನಾವು ಏಕೆ ಬದುಕುತ್ತಿದ್ದೇವೆ ಎಂದು ನನ್ನನ್ನೂ ಪ್ರಶ್ನೆ ಕಾಡುತ್ತಿತ್ತು ಅದಕ್ಕೆ ಬಾಲಕನೊಬ್ಬ ಉತ್ತರಿಸಿದ್ದ ನಮಗೆ ಸಾಯಲು ಆಗುವುದಿಲ್ಲ ಹಾಗಾಗಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದ್ದ. ಮನುಷ್ಯ ಮತ್ತು ಪ್ರಾಣಿಗಳ ಜೀವನಕ್ಕೆ ವ್ಯತ್ಯಾಸವನ್ನು ತಿಳಿದವನ ಮಾತುಗಳಾಗಿದ್ದವು. ನಮ್ಮ ಜೀವನಕ್ಕ ಅರ್ಥ ಕೊಡಲು ನಾವು ಬದುಕಬೇಕಿದೆ ನಮ್ಮ ಜೀವನವನ್ನು ತುಂಬಾ ಅದ್ಭುತವಾಗಿ ಜೀವಿಸಿ ಮುಂದಿನ ಭವಿಷ್ಯವನ್ನು ಸುಂದರಗೊಳಿಸುವುದಾಗಿರಬೇಕು. ಎಂತಹ ದುರಂತವೆಂದರೆ ಭಾರತದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗುತ್ತದೆ. ಮನಸ್ಸಿನಿಂದ ಯಾವುದೇ ಹುಡುಗಿಗೆ ನೀವು ಪ್ರೀತಿಸಿದ್ದರೆ ನೀವು ಹೆಣ್ಣನ್ನು ಗೌರವಿಸುತ್ತಿದ್ದಿರಿ. ಅರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದಿದ್ದರೆ ಮುಂದೆ ದೊಡ್ಡ ಆಘಾತ ಕಾದಿದೆ ಹಾಗಾಗಿ ಸಂವಿಧಾನವನ್ನು ಉಳಿಸುವ ಅಗತ್ಯವಿದೆ. ಇದರಲ್ಲಿ ನಾವು ಎಡವಿದರೆ ಪ್ರಜಾಪ್ರಭುತ್ವಕ್ಕೆ ಕುತ್ತು ಬರಲಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವುದರಲ್ಲಿ ಅನುಮಾನವಿಲ್ಲ, ಸೃಷ್ಟಿಯಾದರೆ ಮಹಿಳೆಯರ ಮೇಲೆ ಅದು ಕೆಟ್ಟ ಪರಿಣಾಮ ಬೀರಲಿದೆ, ದೇಶ ಫ್ಯಾಸಿಸಂ ಕಡೆ ವಾಲುವುದು ಕಟ್ಟಿಟ್ಟ ಬುತ್ತಿ. ಮುಂದೆ ಯೋಚಿಸಿ ಹೆಜ್ಜೆಗಳನ್ನಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...