Homeಕರ್ನಾಟಕಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ...

ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು

- Advertisement -
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ  ವಿಲ್ಸನ್ ಬೆಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ. ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ. ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ  ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ  ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆ ಮಾಡಿ, ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು. ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು  ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ರಾಜಕಾರಣಿಗಳಿಂದ ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ. ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ. ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ. ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ. ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಇದೆ ಅಂತ ಆಗಿನ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ. ಆಗ ನಾನು ಹೇಳಿದ್ದೆ ಹಾಗಾದರೆ ನೀವು‌ ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು. ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು. ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ, ನೀನು ಹುಟ್ಟಿದ ಜಾತಿ ಎಂದು. ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ. ಅಂಧಶ್ರದ್ಧೆಗಳನ್ನು  ನಮ್ಮ ಮೆದುಳಿನಲ್ಲಿ ತುರುಕುತ್ತಾರೆ. ನಿರಂತರ ಹೋರಾಟಗಳ ನಂತರ ಮ್ಯಾನ್ ಹೋಲ್ ಕ್ಲೀನ್ ಮಾಡಲು ಸೇಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ, ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಇಲ್ಲಿ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ. ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ಯಾಕೆ?
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದು ಬಿಟ್ಟು ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ
– ದಿನೇಶ್ ಅಮೀನ್ ಮಟ್ಟು
ಈ ಮೇ‌ ಸಾಹಿತ್ಯ  ಕಾರ್ಯಕ್ರಮದಲ್ಲಿ ತಿಳಿದುಕೊಂಡದ್ದನ್ನು ನಿಮ್ಮೂರುಗಳಲ್ಲಿ ನಡೆಸುವ ಹಾಗೆ ಆಗಬೇಕು. ಚುನಾವಣೆಗೆ ಮಾತ್ರ ನಮ್ಮ ಕೆಲಸಗಳು ಸೀಮಿತವಾಗಬಾರದು, ಬೆಂಗಳೂರಿನಲ್ಲಿ ಕಾಣುವ ಭಾರತ ಬೇರೆ, ಗದಗದಲ್ಲಿ ಕಾಣುವ ಭಾರತ ಬೇರೆ.  ವೈದ್ಯರಿಲ್ಲದ ,ನೀರು ಬಾರದ ಭಾರತ ಗದಗಿನಲ್ಲಿ ಕಂಡರೆ ಬೆಂಗಳೂರಿನಲ್ಲಿ ವಿಶ್ವಭಾರತ ಮಾಡುವವರನ್ನು ನಾವು ಕಾಣಬಹುದು. ಅಂಕಿ ಅಂಶಗಳನ್ನು ನೋಡಿಯೇ ಯಾವುದೇ ತೀರ್ಮಾನಗಳನ್ನು ಮಾಡಬೇಕು, ಸಮಿಕ್ಷೆಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ. ರೈತರ ಸಂಖ್ಯೆ ಏಳೂ ವರ್ಷಗಳಲ್ಲಿ ಶೇ7% ಕಡಿಮೆಯಾಗಿದೆ. ಕೆಲ ಮುಕ್ಕಾಲು ರೈತರು ರೈತನಾಗಲು ಬಯಸುವುದಿಲ್ಲ.
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದಿಲ್ಲ ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಅಷ್ಟರ ಮಟ್ಟಿಗೆ ಧರ್ಮವನ್ನು ತಲೆ ಹೊಕ್ಕಿಸಲಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಮತ್ತು ನಾವು ಅರ್ಥ ಮಾಡಿಕೊಂಡ ಸಂವಿಧಾನವೇನೆಂಬುದು ನಮಗೆ ಗೊತ್ತಿರಬೇಕು, ಇವತ್ತಿನ ಚುನಾವಣೆ ವ್ಯವಸ್ಥೇಯಲ್ಲೂ ಪ್ರಾಮಾಣಿಕವಾಗಿ ಏನಾದರೂ ಕೆಲಸ ಮಾಡಬೇಕೆಂದರೂ ಕೂಡ ಮಾಡಲಾರದ ವ್ಯವಸ್ಥ ಇದೆ. ಅಂಬೇಡ್ಕರ್ ಬಯಸಿದ ಸಂವಿಧಾನವನ್ನು ಚಿಂತನೆಗಳನ್ನು ಸೇರಿಸಿದರೆ ಅಭಿವೃದ್ಧಿ ಭಾರತ ಮಾಡಲು ಸಾಧ್ಯ. ಮೇ ಸಾಹಿತ್ಯ ಮೇಳದಂತಹ ಕಾರ್ಯಕ್ರಮಗಳು  ಚುನಾವಣೆಗಿಂತ ಮುಂಚೆ ನಡೆಯಬೇಕಿತ್ತು, ಇಲ್ಲಿ ಸೇರಿದ ಯುವಜನರು ಇಲ್ಲಿನ ಮಾತುಗಳು ಕೇಳಿ ವೈಚಾರಿಕ ತಿಳುವಳಿಕೆ ಪಡೆಯಬೇಕು
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಂಬೆಯ ಪ್ರಗತಿಪರ ಚಿಂತಕರಾದ ರಾವ್ ಸಾಹೇಬ್ ಕಸಬೆಯವರ ಮಾತುಗಳು 
ಕನ್ನಡ ಭಾಷೆ ನನಗೆ ಬರುವುದಿಲ್ಲ. ಇದು ಒಂದು ರಿದಮ್ ಇರೋ ಭಾಷೆ. ನಾನು ಮೊದಲ ಸಲ ಕರ್ನಾಟಕಕ್ಕೆ ಬಂದಾಗ ಬಹಳ ಖುಷಿಯಾಗಿತ್ತು. ಯಾಕೆಂದರೆ ನಾನು ಬಸವಣ್ಣನ ನೆಲಕ್ಕೆ ಬಂದಿದ್ದೆ. ಇಲ್ಲಿ ಬಂದ ನಾವೆಲ್ಲಾ ಹೊಸ ಭಾರತ ಕಟ್ಟುವ ಕನಸು ಕಾಣುತ್ತಿದ್ದೇವೆ , ಕನಸಾದ್ರೂ ಕಾಣುತ್ತಿದ್ದೇವಲ್ಲಾ ಎಂಬುದು ಖುಷಿಯ  ವಿಚಾರ. ಇಲ್ಲಿ ಬೇರೆ ಬೇರೆ ಜನಾಂಗಗಳಿವೆ, ಧರ್ಮಗಳಿವೆ, ವರ್ಣಗಳಿವೆ, ಭಾಷೆಗಳಿವೆ ಇದೆಯಲ್ಲವೇ ಭಾರತದೇಶದ ಸೌಂದರ್ಯ?. ಈಗೀಗ ಭಾರತದಲ್ಲಿ ಭಾರತ ಮಾತಾ ಕಿ ಜೈ ಅನ್ನುವ ಸದ್ದು ಕೇಳಿ ಬರುತ್ತಿದೆ, ಇಲ್ಲದ ರಾಷ್ಟ್ರವನ್ನು ಜೈಕಾರ ಹಾಕುವುದೇನು ? ಮೊದಲ ರಾಷ್ಟ್ರ ನಿರ್ಮಿಸೋಣ, ಯಾರ್ಯಾರೋ ರಾಜರುಗಳು, ಮೊಗಲರು, ಸುಲ್ತಾನರು ರಾಜರು ಬಂದರೂ ರಾಷ್ಟ್ರವನ್ನು ಮಾಡಲಾಗಲಿಲ್ಲ. ಸಮಾಜವಾದ, ಸಮಾನತೆ, ನಾಡು ಕಟ್ಟುವ ಕನಸು ನನಸಾಗಿದ್ದೆ ಬಾಬಾಸಾಹೇಬರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಭಾರತ ನನ್ನ ದೇಶವೆಂದು ಹೇಳುವಂತೆ ಮಾಡಿದರು.
ಸ್ವಾತಂತ್ರ್ಯ ಬಂದ ಮೇಲೆ ಗಾಂಧೀಜಿಯೂ ಚರಕ ಬಳಸುತ್ತಿದ್ದರು. ಮೋದಿಯೂ ಬಳಸುತ್ತಿದ್ದಾರೆ ಪ್ರಚಾರಕ್ಕಾಗಿ. ಆದರೆ ಗಾಂಧೀಜಿಯ ಪಕ್ಕಕ್ಕೆ ಕಸ್ತೂರಬಾ ಇದ್ದರು ಆದರೆ ಇವರು ಒಬ್ಬರೇ ಇದ್ದದ್ದು ಇದನ್ನು ನಾವು ಗಮನಿಸಬೇಕು. ನಾವು ಏಕೆ ಬದುಕುತ್ತಿದ್ದೇವೆ ಎಂದು ನನ್ನನ್ನೂ ಪ್ರಶ್ನೆ ಕಾಡುತ್ತಿತ್ತು ಅದಕ್ಕೆ ಬಾಲಕನೊಬ್ಬ ಉತ್ತರಿಸಿದ್ದ ನಮಗೆ ಸಾಯಲು ಆಗುವುದಿಲ್ಲ ಹಾಗಾಗಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದ್ದ. ಮನುಷ್ಯ ಮತ್ತು ಪ್ರಾಣಿಗಳ ಜೀವನಕ್ಕೆ ವ್ಯತ್ಯಾಸವನ್ನು ತಿಳಿದವನ ಮಾತುಗಳಾಗಿದ್ದವು. ನಮ್ಮ ಜೀವನಕ್ಕ ಅರ್ಥ ಕೊಡಲು ನಾವು ಬದುಕಬೇಕಿದೆ ನಮ್ಮ ಜೀವನವನ್ನು ತುಂಬಾ ಅದ್ಭುತವಾಗಿ ಜೀವಿಸಿ ಮುಂದಿನ ಭವಿಷ್ಯವನ್ನು ಸುಂದರಗೊಳಿಸುವುದಾಗಿರಬೇಕು. ಎಂತಹ ದುರಂತವೆಂದರೆ ಭಾರತದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗುತ್ತದೆ. ಮನಸ್ಸಿನಿಂದ ಯಾವುದೇ ಹುಡುಗಿಗೆ ನೀವು ಪ್ರೀತಿಸಿದ್ದರೆ ನೀವು ಹೆಣ್ಣನ್ನು ಗೌರವಿಸುತ್ತಿದ್ದಿರಿ. ಅರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದಿದ್ದರೆ ಮುಂದೆ ದೊಡ್ಡ ಆಘಾತ ಕಾದಿದೆ ಹಾಗಾಗಿ ಸಂವಿಧಾನವನ್ನು ಉಳಿಸುವ ಅಗತ್ಯವಿದೆ. ಇದರಲ್ಲಿ ನಾವು ಎಡವಿದರೆ ಪ್ರಜಾಪ್ರಭುತ್ವಕ್ಕೆ ಕುತ್ತು ಬರಲಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವುದರಲ್ಲಿ ಅನುಮಾನವಿಲ್ಲ, ಸೃಷ್ಟಿಯಾದರೆ ಮಹಿಳೆಯರ ಮೇಲೆ ಅದು ಕೆಟ್ಟ ಪರಿಣಾಮ ಬೀರಲಿದೆ, ದೇಶ ಫ್ಯಾಸಿಸಂ ಕಡೆ ವಾಲುವುದು ಕಟ್ಟಿಟ್ಟ ಬುತ್ತಿ. ಮುಂದೆ ಯೋಚಿಸಿ ಹೆಜ್ಜೆಗಳನ್ನಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...