Homeಕರ್ನಾಟಕಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ...

ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು

- Advertisement -
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ  ವಿಲ್ಸನ್ ಬೆಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ. ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ. ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ  ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ  ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆ ಮಾಡಿ, ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು. ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು  ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ರಾಜಕಾರಣಿಗಳಿಂದ ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ. ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ. ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ. ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ. ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಇದೆ ಅಂತ ಆಗಿನ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ. ಆಗ ನಾನು ಹೇಳಿದ್ದೆ ಹಾಗಾದರೆ ನೀವು‌ ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು. ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು. ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ, ನೀನು ಹುಟ್ಟಿದ ಜಾತಿ ಎಂದು. ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ. ಅಂಧಶ್ರದ್ಧೆಗಳನ್ನು  ನಮ್ಮ ಮೆದುಳಿನಲ್ಲಿ ತುರುಕುತ್ತಾರೆ. ನಿರಂತರ ಹೋರಾಟಗಳ ನಂತರ ಮ್ಯಾನ್ ಹೋಲ್ ಕ್ಲೀನ್ ಮಾಡಲು ಸೇಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ, ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಇಲ್ಲಿ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ. ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ಯಾಕೆ?
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದು ಬಿಟ್ಟು ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ
– ದಿನೇಶ್ ಅಮೀನ್ ಮಟ್ಟು
ಈ ಮೇ‌ ಸಾಹಿತ್ಯ  ಕಾರ್ಯಕ್ರಮದಲ್ಲಿ ತಿಳಿದುಕೊಂಡದ್ದನ್ನು ನಿಮ್ಮೂರುಗಳಲ್ಲಿ ನಡೆಸುವ ಹಾಗೆ ಆಗಬೇಕು. ಚುನಾವಣೆಗೆ ಮಾತ್ರ ನಮ್ಮ ಕೆಲಸಗಳು ಸೀಮಿತವಾಗಬಾರದು, ಬೆಂಗಳೂರಿನಲ್ಲಿ ಕಾಣುವ ಭಾರತ ಬೇರೆ, ಗದಗದಲ್ಲಿ ಕಾಣುವ ಭಾರತ ಬೇರೆ.  ವೈದ್ಯರಿಲ್ಲದ ,ನೀರು ಬಾರದ ಭಾರತ ಗದಗಿನಲ್ಲಿ ಕಂಡರೆ ಬೆಂಗಳೂರಿನಲ್ಲಿ ವಿಶ್ವಭಾರತ ಮಾಡುವವರನ್ನು ನಾವು ಕಾಣಬಹುದು. ಅಂಕಿ ಅಂಶಗಳನ್ನು ನೋಡಿಯೇ ಯಾವುದೇ ತೀರ್ಮಾನಗಳನ್ನು ಮಾಡಬೇಕು, ಸಮಿಕ್ಷೆಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ. ರೈತರ ಸಂಖ್ಯೆ ಏಳೂ ವರ್ಷಗಳಲ್ಲಿ ಶೇ7% ಕಡಿಮೆಯಾಗಿದೆ. ಕೆಲ ಮುಕ್ಕಾಲು ರೈತರು ರೈತನಾಗಲು ಬಯಸುವುದಿಲ್ಲ.
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದಿಲ್ಲ ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಅಷ್ಟರ ಮಟ್ಟಿಗೆ ಧರ್ಮವನ್ನು ತಲೆ ಹೊಕ್ಕಿಸಲಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಮತ್ತು ನಾವು ಅರ್ಥ ಮಾಡಿಕೊಂಡ ಸಂವಿಧಾನವೇನೆಂಬುದು ನಮಗೆ ಗೊತ್ತಿರಬೇಕು, ಇವತ್ತಿನ ಚುನಾವಣೆ ವ್ಯವಸ್ಥೇಯಲ್ಲೂ ಪ್ರಾಮಾಣಿಕವಾಗಿ ಏನಾದರೂ ಕೆಲಸ ಮಾಡಬೇಕೆಂದರೂ ಕೂಡ ಮಾಡಲಾರದ ವ್ಯವಸ್ಥ ಇದೆ. ಅಂಬೇಡ್ಕರ್ ಬಯಸಿದ ಸಂವಿಧಾನವನ್ನು ಚಿಂತನೆಗಳನ್ನು ಸೇರಿಸಿದರೆ ಅಭಿವೃದ್ಧಿ ಭಾರತ ಮಾಡಲು ಸಾಧ್ಯ. ಮೇ ಸಾಹಿತ್ಯ ಮೇಳದಂತಹ ಕಾರ್ಯಕ್ರಮಗಳು  ಚುನಾವಣೆಗಿಂತ ಮುಂಚೆ ನಡೆಯಬೇಕಿತ್ತು, ಇಲ್ಲಿ ಸೇರಿದ ಯುವಜನರು ಇಲ್ಲಿನ ಮಾತುಗಳು ಕೇಳಿ ವೈಚಾರಿಕ ತಿಳುವಳಿಕೆ ಪಡೆಯಬೇಕು
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಂಬೆಯ ಪ್ರಗತಿಪರ ಚಿಂತಕರಾದ ರಾವ್ ಸಾಹೇಬ್ ಕಸಬೆಯವರ ಮಾತುಗಳು 
ಕನ್ನಡ ಭಾಷೆ ನನಗೆ ಬರುವುದಿಲ್ಲ. ಇದು ಒಂದು ರಿದಮ್ ಇರೋ ಭಾಷೆ. ನಾನು ಮೊದಲ ಸಲ ಕರ್ನಾಟಕಕ್ಕೆ ಬಂದಾಗ ಬಹಳ ಖುಷಿಯಾಗಿತ್ತು. ಯಾಕೆಂದರೆ ನಾನು ಬಸವಣ್ಣನ ನೆಲಕ್ಕೆ ಬಂದಿದ್ದೆ. ಇಲ್ಲಿ ಬಂದ ನಾವೆಲ್ಲಾ ಹೊಸ ಭಾರತ ಕಟ್ಟುವ ಕನಸು ಕಾಣುತ್ತಿದ್ದೇವೆ , ಕನಸಾದ್ರೂ ಕಾಣುತ್ತಿದ್ದೇವಲ್ಲಾ ಎಂಬುದು ಖುಷಿಯ  ವಿಚಾರ. ಇಲ್ಲಿ ಬೇರೆ ಬೇರೆ ಜನಾಂಗಗಳಿವೆ, ಧರ್ಮಗಳಿವೆ, ವರ್ಣಗಳಿವೆ, ಭಾಷೆಗಳಿವೆ ಇದೆಯಲ್ಲವೇ ಭಾರತದೇಶದ ಸೌಂದರ್ಯ?. ಈಗೀಗ ಭಾರತದಲ್ಲಿ ಭಾರತ ಮಾತಾ ಕಿ ಜೈ ಅನ್ನುವ ಸದ್ದು ಕೇಳಿ ಬರುತ್ತಿದೆ, ಇಲ್ಲದ ರಾಷ್ಟ್ರವನ್ನು ಜೈಕಾರ ಹಾಕುವುದೇನು ? ಮೊದಲ ರಾಷ್ಟ್ರ ನಿರ್ಮಿಸೋಣ, ಯಾರ್ಯಾರೋ ರಾಜರುಗಳು, ಮೊಗಲರು, ಸುಲ್ತಾನರು ರಾಜರು ಬಂದರೂ ರಾಷ್ಟ್ರವನ್ನು ಮಾಡಲಾಗಲಿಲ್ಲ. ಸಮಾಜವಾದ, ಸಮಾನತೆ, ನಾಡು ಕಟ್ಟುವ ಕನಸು ನನಸಾಗಿದ್ದೆ ಬಾಬಾಸಾಹೇಬರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಭಾರತ ನನ್ನ ದೇಶವೆಂದು ಹೇಳುವಂತೆ ಮಾಡಿದರು.
ಸ್ವಾತಂತ್ರ್ಯ ಬಂದ ಮೇಲೆ ಗಾಂಧೀಜಿಯೂ ಚರಕ ಬಳಸುತ್ತಿದ್ದರು. ಮೋದಿಯೂ ಬಳಸುತ್ತಿದ್ದಾರೆ ಪ್ರಚಾರಕ್ಕಾಗಿ. ಆದರೆ ಗಾಂಧೀಜಿಯ ಪಕ್ಕಕ್ಕೆ ಕಸ್ತೂರಬಾ ಇದ್ದರು ಆದರೆ ಇವರು ಒಬ್ಬರೇ ಇದ್ದದ್ದು ಇದನ್ನು ನಾವು ಗಮನಿಸಬೇಕು. ನಾವು ಏಕೆ ಬದುಕುತ್ತಿದ್ದೇವೆ ಎಂದು ನನ್ನನ್ನೂ ಪ್ರಶ್ನೆ ಕಾಡುತ್ತಿತ್ತು ಅದಕ್ಕೆ ಬಾಲಕನೊಬ್ಬ ಉತ್ತರಿಸಿದ್ದ ನಮಗೆ ಸಾಯಲು ಆಗುವುದಿಲ್ಲ ಹಾಗಾಗಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದ್ದ. ಮನುಷ್ಯ ಮತ್ತು ಪ್ರಾಣಿಗಳ ಜೀವನಕ್ಕೆ ವ್ಯತ್ಯಾಸವನ್ನು ತಿಳಿದವನ ಮಾತುಗಳಾಗಿದ್ದವು. ನಮ್ಮ ಜೀವನಕ್ಕ ಅರ್ಥ ಕೊಡಲು ನಾವು ಬದುಕಬೇಕಿದೆ ನಮ್ಮ ಜೀವನವನ್ನು ತುಂಬಾ ಅದ್ಭುತವಾಗಿ ಜೀವಿಸಿ ಮುಂದಿನ ಭವಿಷ್ಯವನ್ನು ಸುಂದರಗೊಳಿಸುವುದಾಗಿರಬೇಕು. ಎಂತಹ ದುರಂತವೆಂದರೆ ಭಾರತದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗುತ್ತದೆ. ಮನಸ್ಸಿನಿಂದ ಯಾವುದೇ ಹುಡುಗಿಗೆ ನೀವು ಪ್ರೀತಿಸಿದ್ದರೆ ನೀವು ಹೆಣ್ಣನ್ನು ಗೌರವಿಸುತ್ತಿದ್ದಿರಿ. ಅರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದಿದ್ದರೆ ಮುಂದೆ ದೊಡ್ಡ ಆಘಾತ ಕಾದಿದೆ ಹಾಗಾಗಿ ಸಂವಿಧಾನವನ್ನು ಉಳಿಸುವ ಅಗತ್ಯವಿದೆ. ಇದರಲ್ಲಿ ನಾವು ಎಡವಿದರೆ ಪ್ರಜಾಪ್ರಭುತ್ವಕ್ಕೆ ಕುತ್ತು ಬರಲಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವುದರಲ್ಲಿ ಅನುಮಾನವಿಲ್ಲ, ಸೃಷ್ಟಿಯಾದರೆ ಮಹಿಳೆಯರ ಮೇಲೆ ಅದು ಕೆಟ್ಟ ಪರಿಣಾಮ ಬೀರಲಿದೆ, ದೇಶ ಫ್ಯಾಸಿಸಂ ಕಡೆ ವಾಲುವುದು ಕಟ್ಟಿಟ್ಟ ಬುತ್ತಿ. ಮುಂದೆ ಯೋಚಿಸಿ ಹೆಜ್ಜೆಗಳನ್ನಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...