Homeಕರ್ನಾಟಕಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ...

ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು

- Advertisement -
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ  ವಿಲ್ಸನ್ ಬೆಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ. ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ. ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ  ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ  ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆ ಮಾಡಿ, ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು. ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು  ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ರಾಜಕಾರಣಿಗಳಿಂದ ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ. ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ. ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ. ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ. ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಇದೆ ಅಂತ ಆಗಿನ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ. ಆಗ ನಾನು ಹೇಳಿದ್ದೆ ಹಾಗಾದರೆ ನೀವು‌ ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು. ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು. ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ, ನೀನು ಹುಟ್ಟಿದ ಜಾತಿ ಎಂದು. ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ. ಅಂಧಶ್ರದ್ಧೆಗಳನ್ನು  ನಮ್ಮ ಮೆದುಳಿನಲ್ಲಿ ತುರುಕುತ್ತಾರೆ. ನಿರಂತರ ಹೋರಾಟಗಳ ನಂತರ ಮ್ಯಾನ್ ಹೋಲ್ ಕ್ಲೀನ್ ಮಾಡಲು ಸೇಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ, ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಇಲ್ಲಿ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ. ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ಯಾಕೆ?
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದು ಬಿಟ್ಟು ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ
– ದಿನೇಶ್ ಅಮೀನ್ ಮಟ್ಟು
ಈ ಮೇ‌ ಸಾಹಿತ್ಯ  ಕಾರ್ಯಕ್ರಮದಲ್ಲಿ ತಿಳಿದುಕೊಂಡದ್ದನ್ನು ನಿಮ್ಮೂರುಗಳಲ್ಲಿ ನಡೆಸುವ ಹಾಗೆ ಆಗಬೇಕು. ಚುನಾವಣೆಗೆ ಮಾತ್ರ ನಮ್ಮ ಕೆಲಸಗಳು ಸೀಮಿತವಾಗಬಾರದು, ಬೆಂಗಳೂರಿನಲ್ಲಿ ಕಾಣುವ ಭಾರತ ಬೇರೆ, ಗದಗದಲ್ಲಿ ಕಾಣುವ ಭಾರತ ಬೇರೆ.  ವೈದ್ಯರಿಲ್ಲದ ,ನೀರು ಬಾರದ ಭಾರತ ಗದಗಿನಲ್ಲಿ ಕಂಡರೆ ಬೆಂಗಳೂರಿನಲ್ಲಿ ವಿಶ್ವಭಾರತ ಮಾಡುವವರನ್ನು ನಾವು ಕಾಣಬಹುದು. ಅಂಕಿ ಅಂಶಗಳನ್ನು ನೋಡಿಯೇ ಯಾವುದೇ ತೀರ್ಮಾನಗಳನ್ನು ಮಾಡಬೇಕು, ಸಮಿಕ್ಷೆಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ. ರೈತರ ಸಂಖ್ಯೆ ಏಳೂ ವರ್ಷಗಳಲ್ಲಿ ಶೇ7% ಕಡಿಮೆಯಾಗಿದೆ. ಕೆಲ ಮುಕ್ಕಾಲು ರೈತರು ರೈತನಾಗಲು ಬಯಸುವುದಿಲ್ಲ.
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದಿಲ್ಲ ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಅಷ್ಟರ ಮಟ್ಟಿಗೆ ಧರ್ಮವನ್ನು ತಲೆ ಹೊಕ್ಕಿಸಲಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಮತ್ತು ನಾವು ಅರ್ಥ ಮಾಡಿಕೊಂಡ ಸಂವಿಧಾನವೇನೆಂಬುದು ನಮಗೆ ಗೊತ್ತಿರಬೇಕು, ಇವತ್ತಿನ ಚುನಾವಣೆ ವ್ಯವಸ್ಥೇಯಲ್ಲೂ ಪ್ರಾಮಾಣಿಕವಾಗಿ ಏನಾದರೂ ಕೆಲಸ ಮಾಡಬೇಕೆಂದರೂ ಕೂಡ ಮಾಡಲಾರದ ವ್ಯವಸ್ಥ ಇದೆ. ಅಂಬೇಡ್ಕರ್ ಬಯಸಿದ ಸಂವಿಧಾನವನ್ನು ಚಿಂತನೆಗಳನ್ನು ಸೇರಿಸಿದರೆ ಅಭಿವೃದ್ಧಿ ಭಾರತ ಮಾಡಲು ಸಾಧ್ಯ. ಮೇ ಸಾಹಿತ್ಯ ಮೇಳದಂತಹ ಕಾರ್ಯಕ್ರಮಗಳು  ಚುನಾವಣೆಗಿಂತ ಮುಂಚೆ ನಡೆಯಬೇಕಿತ್ತು, ಇಲ್ಲಿ ಸೇರಿದ ಯುವಜನರು ಇಲ್ಲಿನ ಮಾತುಗಳು ಕೇಳಿ ವೈಚಾರಿಕ ತಿಳುವಳಿಕೆ ಪಡೆಯಬೇಕು
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಂಬೆಯ ಪ್ರಗತಿಪರ ಚಿಂತಕರಾದ ರಾವ್ ಸಾಹೇಬ್ ಕಸಬೆಯವರ ಮಾತುಗಳು 
ಕನ್ನಡ ಭಾಷೆ ನನಗೆ ಬರುವುದಿಲ್ಲ. ಇದು ಒಂದು ರಿದಮ್ ಇರೋ ಭಾಷೆ. ನಾನು ಮೊದಲ ಸಲ ಕರ್ನಾಟಕಕ್ಕೆ ಬಂದಾಗ ಬಹಳ ಖುಷಿಯಾಗಿತ್ತು. ಯಾಕೆಂದರೆ ನಾನು ಬಸವಣ್ಣನ ನೆಲಕ್ಕೆ ಬಂದಿದ್ದೆ. ಇಲ್ಲಿ ಬಂದ ನಾವೆಲ್ಲಾ ಹೊಸ ಭಾರತ ಕಟ್ಟುವ ಕನಸು ಕಾಣುತ್ತಿದ್ದೇವೆ , ಕನಸಾದ್ರೂ ಕಾಣುತ್ತಿದ್ದೇವಲ್ಲಾ ಎಂಬುದು ಖುಷಿಯ  ವಿಚಾರ. ಇಲ್ಲಿ ಬೇರೆ ಬೇರೆ ಜನಾಂಗಗಳಿವೆ, ಧರ್ಮಗಳಿವೆ, ವರ್ಣಗಳಿವೆ, ಭಾಷೆಗಳಿವೆ ಇದೆಯಲ್ಲವೇ ಭಾರತದೇಶದ ಸೌಂದರ್ಯ?. ಈಗೀಗ ಭಾರತದಲ್ಲಿ ಭಾರತ ಮಾತಾ ಕಿ ಜೈ ಅನ್ನುವ ಸದ್ದು ಕೇಳಿ ಬರುತ್ತಿದೆ, ಇಲ್ಲದ ರಾಷ್ಟ್ರವನ್ನು ಜೈಕಾರ ಹಾಕುವುದೇನು ? ಮೊದಲ ರಾಷ್ಟ್ರ ನಿರ್ಮಿಸೋಣ, ಯಾರ್ಯಾರೋ ರಾಜರುಗಳು, ಮೊಗಲರು, ಸುಲ್ತಾನರು ರಾಜರು ಬಂದರೂ ರಾಷ್ಟ್ರವನ್ನು ಮಾಡಲಾಗಲಿಲ್ಲ. ಸಮಾಜವಾದ, ಸಮಾನತೆ, ನಾಡು ಕಟ್ಟುವ ಕನಸು ನನಸಾಗಿದ್ದೆ ಬಾಬಾಸಾಹೇಬರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಭಾರತ ನನ್ನ ದೇಶವೆಂದು ಹೇಳುವಂತೆ ಮಾಡಿದರು.
ಸ್ವಾತಂತ್ರ್ಯ ಬಂದ ಮೇಲೆ ಗಾಂಧೀಜಿಯೂ ಚರಕ ಬಳಸುತ್ತಿದ್ದರು. ಮೋದಿಯೂ ಬಳಸುತ್ತಿದ್ದಾರೆ ಪ್ರಚಾರಕ್ಕಾಗಿ. ಆದರೆ ಗಾಂಧೀಜಿಯ ಪಕ್ಕಕ್ಕೆ ಕಸ್ತೂರಬಾ ಇದ್ದರು ಆದರೆ ಇವರು ಒಬ್ಬರೇ ಇದ್ದದ್ದು ಇದನ್ನು ನಾವು ಗಮನಿಸಬೇಕು. ನಾವು ಏಕೆ ಬದುಕುತ್ತಿದ್ದೇವೆ ಎಂದು ನನ್ನನ್ನೂ ಪ್ರಶ್ನೆ ಕಾಡುತ್ತಿತ್ತು ಅದಕ್ಕೆ ಬಾಲಕನೊಬ್ಬ ಉತ್ತರಿಸಿದ್ದ ನಮಗೆ ಸಾಯಲು ಆಗುವುದಿಲ್ಲ ಹಾಗಾಗಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದ್ದ. ಮನುಷ್ಯ ಮತ್ತು ಪ್ರಾಣಿಗಳ ಜೀವನಕ್ಕೆ ವ್ಯತ್ಯಾಸವನ್ನು ತಿಳಿದವನ ಮಾತುಗಳಾಗಿದ್ದವು. ನಮ್ಮ ಜೀವನಕ್ಕ ಅರ್ಥ ಕೊಡಲು ನಾವು ಬದುಕಬೇಕಿದೆ ನಮ್ಮ ಜೀವನವನ್ನು ತುಂಬಾ ಅದ್ಭುತವಾಗಿ ಜೀವಿಸಿ ಮುಂದಿನ ಭವಿಷ್ಯವನ್ನು ಸುಂದರಗೊಳಿಸುವುದಾಗಿರಬೇಕು. ಎಂತಹ ದುರಂತವೆಂದರೆ ಭಾರತದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗುತ್ತದೆ. ಮನಸ್ಸಿನಿಂದ ಯಾವುದೇ ಹುಡುಗಿಗೆ ನೀವು ಪ್ರೀತಿಸಿದ್ದರೆ ನೀವು ಹೆಣ್ಣನ್ನು ಗೌರವಿಸುತ್ತಿದ್ದಿರಿ. ಅರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದಿದ್ದರೆ ಮುಂದೆ ದೊಡ್ಡ ಆಘಾತ ಕಾದಿದೆ ಹಾಗಾಗಿ ಸಂವಿಧಾನವನ್ನು ಉಳಿಸುವ ಅಗತ್ಯವಿದೆ. ಇದರಲ್ಲಿ ನಾವು ಎಡವಿದರೆ ಪ್ರಜಾಪ್ರಭುತ್ವಕ್ಕೆ ಕುತ್ತು ಬರಲಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವುದರಲ್ಲಿ ಅನುಮಾನವಿಲ್ಲ, ಸೃಷ್ಟಿಯಾದರೆ ಮಹಿಳೆಯರ ಮೇಲೆ ಅದು ಕೆಟ್ಟ ಪರಿಣಾಮ ಬೀರಲಿದೆ, ದೇಶ ಫ್ಯಾಸಿಸಂ ಕಡೆ ವಾಲುವುದು ಕಟ್ಟಿಟ್ಟ ಬುತ್ತಿ. ಮುಂದೆ ಯೋಚಿಸಿ ಹೆಜ್ಜೆಗಳನ್ನಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...