Homeಕರ್ನಾಟಕಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ...

ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು

- Advertisement -
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ  ವಿಲ್ಸನ್ ಬೆಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ. ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ. ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ  ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ  ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆ ಮಾಡಿ, ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು. ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು  ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ರಾಜಕಾರಣಿಗಳಿಂದ ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ. ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ. ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ. ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ. ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಇದೆ ಅಂತ ಆಗಿನ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ. ಆಗ ನಾನು ಹೇಳಿದ್ದೆ ಹಾಗಾದರೆ ನೀವು‌ ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು. ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು. ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ, ನೀನು ಹುಟ್ಟಿದ ಜಾತಿ ಎಂದು. ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ. ಅಂಧಶ್ರದ್ಧೆಗಳನ್ನು  ನಮ್ಮ ಮೆದುಳಿನಲ್ಲಿ ತುರುಕುತ್ತಾರೆ. ನಿರಂತರ ಹೋರಾಟಗಳ ನಂತರ ಮ್ಯಾನ್ ಹೋಲ್ ಕ್ಲೀನ್ ಮಾಡಲು ಸೇಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ, ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಇಲ್ಲಿ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ. ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ಯಾಕೆ?
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದು ಬಿಟ್ಟು ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ
– ದಿನೇಶ್ ಅಮೀನ್ ಮಟ್ಟು
ಈ ಮೇ‌ ಸಾಹಿತ್ಯ  ಕಾರ್ಯಕ್ರಮದಲ್ಲಿ ತಿಳಿದುಕೊಂಡದ್ದನ್ನು ನಿಮ್ಮೂರುಗಳಲ್ಲಿ ನಡೆಸುವ ಹಾಗೆ ಆಗಬೇಕು. ಚುನಾವಣೆಗೆ ಮಾತ್ರ ನಮ್ಮ ಕೆಲಸಗಳು ಸೀಮಿತವಾಗಬಾರದು, ಬೆಂಗಳೂರಿನಲ್ಲಿ ಕಾಣುವ ಭಾರತ ಬೇರೆ, ಗದಗದಲ್ಲಿ ಕಾಣುವ ಭಾರತ ಬೇರೆ.  ವೈದ್ಯರಿಲ್ಲದ ,ನೀರು ಬಾರದ ಭಾರತ ಗದಗಿನಲ್ಲಿ ಕಂಡರೆ ಬೆಂಗಳೂರಿನಲ್ಲಿ ವಿಶ್ವಭಾರತ ಮಾಡುವವರನ್ನು ನಾವು ಕಾಣಬಹುದು. ಅಂಕಿ ಅಂಶಗಳನ್ನು ನೋಡಿಯೇ ಯಾವುದೇ ತೀರ್ಮಾನಗಳನ್ನು ಮಾಡಬೇಕು, ಸಮಿಕ್ಷೆಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ. ರೈತರ ಸಂಖ್ಯೆ ಏಳೂ ವರ್ಷಗಳಲ್ಲಿ ಶೇ7% ಕಡಿಮೆಯಾಗಿದೆ. ಕೆಲ ಮುಕ್ಕಾಲು ರೈತರು ರೈತನಾಗಲು ಬಯಸುವುದಿಲ್ಲ.
ಒಬ್ಬ ನಿರೋದ್ಯೋಗಿ ಉದ್ಯೋಗದ ಬಗ್ಗೆ ಮಾತಾನಾಡುವುದಿಲ್ಲ ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಅಷ್ಟರ ಮಟ್ಟಿಗೆ ಧರ್ಮವನ್ನು ತಲೆ ಹೊಕ್ಕಿಸಲಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಮತ್ತು ನಾವು ಅರ್ಥ ಮಾಡಿಕೊಂಡ ಸಂವಿಧಾನವೇನೆಂಬುದು ನಮಗೆ ಗೊತ್ತಿರಬೇಕು, ಇವತ್ತಿನ ಚುನಾವಣೆ ವ್ಯವಸ್ಥೇಯಲ್ಲೂ ಪ್ರಾಮಾಣಿಕವಾಗಿ ಏನಾದರೂ ಕೆಲಸ ಮಾಡಬೇಕೆಂದರೂ ಕೂಡ ಮಾಡಲಾರದ ವ್ಯವಸ್ಥ ಇದೆ. ಅಂಬೇಡ್ಕರ್ ಬಯಸಿದ ಸಂವಿಧಾನವನ್ನು ಚಿಂತನೆಗಳನ್ನು ಸೇರಿಸಿದರೆ ಅಭಿವೃದ್ಧಿ ಭಾರತ ಮಾಡಲು ಸಾಧ್ಯ. ಮೇ ಸಾಹಿತ್ಯ ಮೇಳದಂತಹ ಕಾರ್ಯಕ್ರಮಗಳು  ಚುನಾವಣೆಗಿಂತ ಮುಂಚೆ ನಡೆಯಬೇಕಿತ್ತು, ಇಲ್ಲಿ ಸೇರಿದ ಯುವಜನರು ಇಲ್ಲಿನ ಮಾತುಗಳು ಕೇಳಿ ವೈಚಾರಿಕ ತಿಳುವಳಿಕೆ ಪಡೆಯಬೇಕು
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಂಬೆಯ ಪ್ರಗತಿಪರ ಚಿಂತಕರಾದ ರಾವ್ ಸಾಹೇಬ್ ಕಸಬೆಯವರ ಮಾತುಗಳು 
ಕನ್ನಡ ಭಾಷೆ ನನಗೆ ಬರುವುದಿಲ್ಲ. ಇದು ಒಂದು ರಿದಮ್ ಇರೋ ಭಾಷೆ. ನಾನು ಮೊದಲ ಸಲ ಕರ್ನಾಟಕಕ್ಕೆ ಬಂದಾಗ ಬಹಳ ಖುಷಿಯಾಗಿತ್ತು. ಯಾಕೆಂದರೆ ನಾನು ಬಸವಣ್ಣನ ನೆಲಕ್ಕೆ ಬಂದಿದ್ದೆ. ಇಲ್ಲಿ ಬಂದ ನಾವೆಲ್ಲಾ ಹೊಸ ಭಾರತ ಕಟ್ಟುವ ಕನಸು ಕಾಣುತ್ತಿದ್ದೇವೆ , ಕನಸಾದ್ರೂ ಕಾಣುತ್ತಿದ್ದೇವಲ್ಲಾ ಎಂಬುದು ಖುಷಿಯ  ವಿಚಾರ. ಇಲ್ಲಿ ಬೇರೆ ಬೇರೆ ಜನಾಂಗಗಳಿವೆ, ಧರ್ಮಗಳಿವೆ, ವರ್ಣಗಳಿವೆ, ಭಾಷೆಗಳಿವೆ ಇದೆಯಲ್ಲವೇ ಭಾರತದೇಶದ ಸೌಂದರ್ಯ?. ಈಗೀಗ ಭಾರತದಲ್ಲಿ ಭಾರತ ಮಾತಾ ಕಿ ಜೈ ಅನ್ನುವ ಸದ್ದು ಕೇಳಿ ಬರುತ್ತಿದೆ, ಇಲ್ಲದ ರಾಷ್ಟ್ರವನ್ನು ಜೈಕಾರ ಹಾಕುವುದೇನು ? ಮೊದಲ ರಾಷ್ಟ್ರ ನಿರ್ಮಿಸೋಣ, ಯಾರ್ಯಾರೋ ರಾಜರುಗಳು, ಮೊಗಲರು, ಸುಲ್ತಾನರು ರಾಜರು ಬಂದರೂ ರಾಷ್ಟ್ರವನ್ನು ಮಾಡಲಾಗಲಿಲ್ಲ. ಸಮಾಜವಾದ, ಸಮಾನತೆ, ನಾಡು ಕಟ್ಟುವ ಕನಸು ನನಸಾಗಿದ್ದೆ ಬಾಬಾಸಾಹೇಬರು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಭಾರತ ನನ್ನ ದೇಶವೆಂದು ಹೇಳುವಂತೆ ಮಾಡಿದರು.
ಸ್ವಾತಂತ್ರ್ಯ ಬಂದ ಮೇಲೆ ಗಾಂಧೀಜಿಯೂ ಚರಕ ಬಳಸುತ್ತಿದ್ದರು. ಮೋದಿಯೂ ಬಳಸುತ್ತಿದ್ದಾರೆ ಪ್ರಚಾರಕ್ಕಾಗಿ. ಆದರೆ ಗಾಂಧೀಜಿಯ ಪಕ್ಕಕ್ಕೆ ಕಸ್ತೂರಬಾ ಇದ್ದರು ಆದರೆ ಇವರು ಒಬ್ಬರೇ ಇದ್ದದ್ದು ಇದನ್ನು ನಾವು ಗಮನಿಸಬೇಕು. ನಾವು ಏಕೆ ಬದುಕುತ್ತಿದ್ದೇವೆ ಎಂದು ನನ್ನನ್ನೂ ಪ್ರಶ್ನೆ ಕಾಡುತ್ತಿತ್ತು ಅದಕ್ಕೆ ಬಾಲಕನೊಬ್ಬ ಉತ್ತರಿಸಿದ್ದ ನಮಗೆ ಸಾಯಲು ಆಗುವುದಿಲ್ಲ ಹಾಗಾಗಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದ್ದ. ಮನುಷ್ಯ ಮತ್ತು ಪ್ರಾಣಿಗಳ ಜೀವನಕ್ಕೆ ವ್ಯತ್ಯಾಸವನ್ನು ತಿಳಿದವನ ಮಾತುಗಳಾಗಿದ್ದವು. ನಮ್ಮ ಜೀವನಕ್ಕ ಅರ್ಥ ಕೊಡಲು ನಾವು ಬದುಕಬೇಕಿದೆ ನಮ್ಮ ಜೀವನವನ್ನು ತುಂಬಾ ಅದ್ಭುತವಾಗಿ ಜೀವಿಸಿ ಮುಂದಿನ ಭವಿಷ್ಯವನ್ನು ಸುಂದರಗೊಳಿಸುವುದಾಗಿರಬೇಕು. ಎಂತಹ ದುರಂತವೆಂದರೆ ಭಾರತದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗುತ್ತದೆ. ಮನಸ್ಸಿನಿಂದ ಯಾವುದೇ ಹುಡುಗಿಗೆ ನೀವು ಪ್ರೀತಿಸಿದ್ದರೆ ನೀವು ಹೆಣ್ಣನ್ನು ಗೌರವಿಸುತ್ತಿದ್ದಿರಿ. ಅರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದಿದ್ದರೆ ಮುಂದೆ ದೊಡ್ಡ ಆಘಾತ ಕಾದಿದೆ ಹಾಗಾಗಿ ಸಂವಿಧಾನವನ್ನು ಉಳಿಸುವ ಅಗತ್ಯವಿದೆ. ಇದರಲ್ಲಿ ನಾವು ಎಡವಿದರೆ ಪ್ರಜಾಪ್ರಭುತ್ವಕ್ಕೆ ಕುತ್ತು ಬರಲಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವುದರಲ್ಲಿ ಅನುಮಾನವಿಲ್ಲ, ಸೃಷ್ಟಿಯಾದರೆ ಮಹಿಳೆಯರ ಮೇಲೆ ಅದು ಕೆಟ್ಟ ಪರಿಣಾಮ ಬೀರಲಿದೆ, ದೇಶ ಫ್ಯಾಸಿಸಂ ಕಡೆ ವಾಲುವುದು ಕಟ್ಟಿಟ್ಟ ಬುತ್ತಿ. ಮುಂದೆ ಯೋಚಿಸಿ ಹೆಜ್ಜೆಗಳನ್ನಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...