Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...