Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...