Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...