Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...