Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...