Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...