Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...