Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...