Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...