Homeಕರ್ನಾಟಕಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

ಮೇ ಸಾಹಿತ್ಯ ಮೇಳದ ಮಹತ್ವ: ‘ಅಭಿವೃದ್ಧಿ’ ವಿವಿಧ ನೆಲೆಗಳಿಂದ ಒಂದು ವಿಶ್ಲೇಷಣೆ

- Advertisement -
- Advertisement -

| ಡಾ. ಎಚ್.ಎಸ್. ಅನುಪಮಾ |

ಒಂದು ಪ್ರದೇಶದ ಜನ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿರತೆ ಮತ್ತು ಸುಸ್ಥಿತಿಯಲ್ಲಿ ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಮೂಲಸೌಕರ್ಯಗಳನ್ನು ಒದಗಿಸಿ ಜನರಿಗೆ ಘನತೆಯ ಬದುಕನ್ನು ಬದುಕಲು ಸಾಧ್ಯ ಮಾಡುವುದು ಅಭಿವೃದ್ಧಿ. ಸ್ವಾಯತ್ತ ಬದುಕಿಗೆ ಅವಕಾಶ ಕಲ್ಪಿಸಿಕೊಡುವುದು ಅಭಿವೃದ್ಧಿ. ಎಂದೇ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಒಂದು ದೇಶ, ಸಮಾಜ ತೊಡಗಿಕೊಳ್ಳುತ್ತ ಹೋದಂತೆ ಜನರ ಸುತ್ತಮುತ್ತಲ ಪರಿಸರ, ಸಾಮುದಾಯಿಕ ಅಂತರ್ ಸಂಬಂಧಗಳು, ಮನುಷ್ಯ-ಪ್ರಕೃತಿ ಸಂಬಂಧಗಳು ಸುಧಾರಿಸುತ್ತವೆ.

ಇಂಥ ಉದಾತ್ತ ವ್ಯಾಖ್ಯಾನವನ್ನಿಟ್ಟುಕೊಂಡು ಕಳೆದ ಶತಮಾನದಲ್ಲಿ ವಿಶ್ವಾದ್ಯಂತ ನಾನಾ ದೇಶಗಳಲ್ಲಿ ಅಭಿವೃದ್ಧಿ ಪ್ರಕ್ರಿಯೆ ಶುರುವಾಯಿತು. ಹಲವು ಅಳತೆಗೋಲುಗಳು ರೂಪುಗೊಂಡವು. ವಿಶ್ವಯುದ್ಧಗಳ ನಂತರ ಹಲವು ದೇಶಗಳಲ್ಲಿ ತಾಂಡವವಾಡುತ್ತಿದ್ದ ಅನಕ್ಷರತೆ, ಬಡತನ, ನಿರುದ್ಯೋಗ, ತಾಯಿ ಮರಣ, ಶಿಶು ಮರಣ, ರೋಗರುಜಿನಗಳೇ ಮುಂತಾದ ಅಂಶಗಳನ್ನು ಆಧಾರವಾಗಿಟ್ಟುಕೊಂಡು ದೇಶಗಳು ಅಭಿವೃದ್ಧಿ ಹೊಂದಿದ, ಅಭಿವೃದ್ಧಿಶೀಲ, ಹಿಂದುಳಿದ ಎಂದು ಗೆರೆಯೆಳೆದು ಗುರುತುಗೊಂಡವು. ಅಭಿವೃದ್ಧಿ ಹೊಂದುತ್ತಿರುವ ಮತ್ತು ಹಿಂದುಳಿದ ದೇಶಗಳಿಗೆ ತಾವೂ ಅಭಿವೃದ್ಧಿ ಹೊಂದುವ ಕನಸು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರತೊಡಗಿತು. ಹೆಚ್ಚುಕಡಿಮೆ ವಿಶ್ವದ ಎಲ್ಲ ದೇಶಗಳೂ ಅಭಿವೃದ್ಧಿ ಕಾರ್ಯಕ್ರಮಗಳಿಗೆಂದು ತಮ್ಮ ಆರ್ಥಿಕತೆಯನ್ನು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು, ಆದ್ಯತೆಗಳನ್ನು ಮರುರೂಪಿಸಿಕೊಂಡವು. ಆರ್ಥಿಕ ಸಹಾಯಕ್ಕಾಗಿ ಸಂಪನ್ಮೂಲ ಕ್ರೋಢೀಕರಿಸಿಕೊಳ್ಳಲು ಯತ್ನಿಸಿದವು. ದೇಶ ಕಟ್ಟುವ ಮಾದರಿಗಾಗಿ, ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲಿಕ್ಕಾಗಿ ವಿಶ್ವದ ದೊಡ್ಡಣ್ಣಂದಿರಂತೆ ವರ್ತಿಸುವ ಯಜಮಾನ ದೇಶಗಳ ಕಡೆಗೆ ನೋಡಿದವು.

ದಶಕಗಳು ಕಳೆದವು. ಅಭಿವೃದ್ಧಿಯ ನೆಪದಲ್ಲಿ, ಸಾಲ ಕೊಡುವ ನೆಪದಲ್ಲಿ, ಸಾಲ ಕೊಡುವ ಮುನ್ನ ಹೇರುವ ಷರತ್ತುಗಳ ನೆಪದಲ್ಲಿ ಬಡದೇಶಗಳ ನೆಲ-ಜಲ-ಜನಜೀವನದ ತಲೆಯ ಮೇಲೆ ನವ ವಸಾಹತುಶಾಹಿಗಳು ಅಂಕುಶ ಹಿಡಿದು ಕುಳಿತುಕೊಳ್ಳಲು ಇದೇ ಅಭಿವೃದ್ಧಿ ಮಾತುಗಳು ಕಾರಣವಾದವು. ಬಡವರು ಮತ್ತು ಸಿರಿವಂತರ ನಡುವಿನ ಕಂದಕ ಹಿಂದೆಂದಿಗಿಂತ ಇವತ್ತು ಹಿರಿದಾಗಿದೆ. ಒಂದಷ್ಟು ಜನ ಸಿರಿವಂತರು ಸೃಷ್ಟಿಯಾಗಲು ಅಸಂಖ್ಯ ಜನಸಮುದಾಯ ತನ್ನ ನೆಲೆ, ಸಂಪನ್ಮೂಲದಿಂದ ವಂಚಿತರಾಗಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಪರಿಸರ ಮತ್ತೆ ಮೊದಲ ಸ್ಥಿಗೆ ಎಂದೆಂದೂ ತಲುಪಲು ಸಾಧ್ಯವಾಗದಷ್ಟು ನಾಶವಾಗಿದೆ. ಜನಜೀವನದ ಮೇಲೆ ನಿರುದ್ಯೋಗ, ಸಾಂಸ್ಕøತಿಕ ಪಲ್ಲಟಗಳು, ರಾಜಕೀಯ ಅಸ್ಥಿರತೆ, ಬಡತನ, ಕೋಮುಘರ್ಷಣೆಯೇ ಮೊದಲಾದ ಬಿಕ್ಕಟ್ಟುಗಳು ಹೇರಲ್ಪಟ್ಟಿವೆ. ಅಭಿವೃದ್ಧಿ ಪ್ರಕ್ರಿಯೆ ಚುರುಕುಗೊಂಡಷ್ಟೂ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿರುವುದನ್ನು, ಜನಸಮುದಾಯಗಳು ತಮ್ಮ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ವೈರುಧ್ಯಕ್ಕೆ ಕಾರಣವೇನು? ಇದನ್ನು ವಿವರಿಸುವುದು ಹೇಗೆ?

‘ನಮ್ಮ ಆಯ್ಕೆಯಂತೆ, ನಮಗೆ ಮೌಲಿಕವೆನಿಸುವ ಬದುಕನ್ನು ಬದುಕಲು ಸಾಧ್ಯಮಾಡುವುದೇ ಅಭಿವೃದ್ಧಿ. ಸಮಾಜವೊಂದರ ಯಶಸ್ಸು ಅದರಲ್ಲಿರುವ ಜನರು ಅನುಭವಿಸುವ ಸ್ವಾತಂತ್ರ್ಯವೇ ಆಗಿದೆ. ಅಭಿವೃದ್ಧಿ ಎಂದರೆ ಜನಸಮುದಾಯಗಳ ಅನುಭವಕ್ಕೆ ನಿಲುಕುವ ಹಿಗ್ಗುತ್ತಿರುವ ಸ್ವಾತಂತ್ರ್ಯ. ವ್ಯಕ್ತಿ ತನ್ನ ಸಂಪೂರ್ಣ ಮಾನವ ಸಾಮಥ್ರ್ಯವನ್ನರಿಯಲು ಸಾಧ್ಯ ಮಾಡುವುದೇ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ.’ – ಅಮತ್ರ್ಯ ಸೆನ್

ನಿಜ. ಆದರೆ ನಮ್ಮ ಅಭಿವೃದ್ಧಿ ಮಾದರಿಗಳು ಇದನ್ನು ಸಾಧ್ಯಮಾಡಿವೆಯೆ? ಜನಸಮುದಾಯಗಳ ಮೇಲೆ, ಭಾಷೆ-ಶಿಕ್ಷಣ-ಕೃಷಿ-ಪರಿಸರದ ಮೇಲೆ, ದಮನಿತರ ಸಬಲೀಕರಣ ಪ್ರಕ್ರಿಯೆಯ ಮೇಲೆ ಅಭಿವೃದ್ಧಿ ಮಾದರಿಗಳ ಪ್ರಭಾವವೇನು? ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮುದಾಯಗಳ ನಡುವಿನ ಸಂಬಂಧದ ಸೂಕ್ಷ್ಮ ಒಳತೋಟಿಗಳೇನು? ಮಹಿಳೆಯರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಷ್ಟು ಪಾಲುದಾರರು? ಅವರ ಮೇಲಾದ ಪರಿಣಾಮಗಳೇನು?

ಅಭಿವೃದ್ಧಿಯ ದಾರಿಯಲ್ಲಿ ಇಷ್ಟು ದೂರ ನಡೆದು ಬಂದಿರುವಾಗ ಅದರ ಸಾಧಕ-ಬಾಧಕಗಳ ಕುರಿತು ವಸ್ತುನಿಷ್ಠವಾಗಿ ಚರ್ಚಿಸುವ ಹೊತ್ತು ಬಂದಿದೆ. ಫಲಾನುಭವಿಗಳ ದೃಷ್ಟಿಯಿಂದಲ್ಲ, ವಂಚಿತರ ದೃಷ್ಟಿಕೋನದಿಂದ ಅಭಿವೃದ್ಧಿಯ ಮಾನದಂಡಗಳು ಹಾಗೂ ಮಾರ್ಗಗಳನ್ನು ಮರುಪರಿಶೀಲಿಸಬೇಕಾದ ತುರ್ತು ಹುಟ್ಟಿಕೊಂಡಿದೆ. ಅದರ ಸಲುವಾಗಿ 6ನೇ ಮೇ ಸಾಹಿತ್ಯ ಮೇಳವನ್ನು ಗದಗದ ಅಂಬೇಡ್ಕರ್ ಭವನದಲ್ಲಿ ಇದೇ ಮೇ 4, 5ರಂದು ಏರ್ಪಡಿಸಲಾಗಿದೆ. `ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಎಂಬ ಶೀರ್ಷಿಕೆಯಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಕ್ರಮಿಸಿದ ದಾರಿಯನ್ನು ವಿಶ್ಲೇಷಿಸಲು, ಮರುಪರಿಶೀಲಿಸಲು, ಚರ್ಚಿಸಲು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...