HomeಮುಖಪುಟINDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

INDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ INDIA ಬಣದ ಜೊತೆ ಮೈತ್ರಿ ಮಾಡಿಕೊಳ್ಳುವ ವದಂತಿಗಳನ್ನು ತಳ್ಳಿಹಾಕಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, ತಮ್ಮ ಪಕ್ಷವು ಸ್ವಂತ ಬಲದಿಂದ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ,  ಬಿಎಸ್ಪಿ ಕಾರ್ಯಕರ್ತರು ಇಂತಹ ವದಂತಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಯಾವತಿ, ಮುಂಬರುವ ಲೋಕಸಭೆ ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ಪದೇ ಪದೇ ಘೋಷಿಸುತ್ತಿದ್ದರೂ, ಪ್ರತಿದಿನ ಮೈತ್ರಿ ಬಗ್ಗೆ ವದಂತಿಗಳು ಹರಡುತ್ತಿವೆ. ಬಿಎಸ್‌ಪಿ ಇಲ್ಲದೆ ಕೆಲವು ಪಕ್ಷಗಳು ಚೆನ್ನಾಗಿ ನಡೆಯುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಮಾಜದ ಹಿತಾಸಕ್ತಿ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಬಡವರು, ಶೋಷಿತರು ಮತ್ತು ನಿರ್ಲಕ್ಷ್ಯಕ್ಕೊಳಗಾದವರನ್ನು ಗಮನದಲ್ಲಿಟ್ಟುಕೊಂಡು ತನ್ನ ಜನರ ಬಲದೊಂದಿಗೆ ಲೋಕಸಭೆ ಚುನಾವಣೆಯನ್ನು ಬಿಎಸ್ಪಿಯು ಏಕಾಂಗಿಯಾಗಿ ಎದುರಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

ಬಿಎಸ್‌ಪಿ 2019ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಈ ಮೊದಲು ಬಿಎಸ್ಪಿ INDIA ಬಣದ ಜೊತೆ ಸೇರಿಕೊಂಡರೆ ಎಸ್ಪಿ ಮೈತ್ರಿಯಿಂದ ಹೊರಗುಳಿಯಲಿದೆ ಎಂಬ ಬಗ್ಗೆ ಕೂಡ ಸುದ್ದಿಯಾಗಿತ್ತು.

ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿಕೆ:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಿರುವ ಐಕ್ಯ ಹೋರಾಟಕ್ಕೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸೇರಬೇಕು, ಅವರಿಗೆ ಇಂಡಿಯಾ ಬಣದ ಬಾಗಿಲು ತೆರೆದಿದೆ ಎಂದು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಭಾನುವಾರ ಹೇಳಿದ್ದರು. ಬಿಎಸ್‌ಪಿಯ ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ, ಕಾಂಗ್ರೆಸ್-ಎಸ್‌ಪಿ ಒಕ್ಕೂಟವು ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಇಂಡಿಯಾ ಬ್ಲಾಕ್‌ಗೆ ಸೇರುವ ಕುರಿತು ಮಾತುಕತೆ ನಡೆಸುತ್ತಿದೆ. ಕೆಲವು ಪಕ್ಷಗಳು  ಮೈತ್ರಿ ಕೂಟದ ಜೊತೆ ಸೇರುತ್ತಿದೆ ಮತ್ತು ಕೆಲವು ಸೇರುವ ನಿರೀಕ್ಷೆಗಳಿದೆ. ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಆದರೆ, ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಬಗೆಹರಿಯಲಿದೆ ಎಂದು ಪಾಂಡೆ ಹೇಳಿದ್ದರು.

ಲೋಕಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆ ಬಿಎಸ್ಪಿ INDIA ಮೈತ್ರಿ ಕೂಟ ಅಥವಾ ಎನ್‌ಡಿಎ ಮೈತ್ರಿ ಪಕ್ಷಗಳ ಜೊತೆ ಸೇರಿಕೊಂಡಿಲ್ಲ. ಎರಡೂ ಮೈತ್ರಿ ಪಕ್ಷಗಳಿಂದ ದೂರ ಉಳಿದುಕೊಂಡಿದೆ. ಈ ಮೊದಲು ಬಿಜೆಪಿ ಜೊತೆ ಬಿಎಸ್ಪಿ ಮೈತ್ರಿ ಬಗ್ಗೆ ಊಹಾಪೋಹಗಳು ಕೂಡ ಭುಗಿಲೆದ್ದಿದ್ದವು. ಬಳಿಕ INDIA ಮೈತ್ರಿ ಕೂಟದ ಜೊತೆ ಸೇರುವ ಬಗ್ಗೆಯೂ ಸುದ್ದಿಯಾಗಿತ್ತು. ಇದರ ಬೆನ್ನಲ್ಲಿ ಸ್ಪಷ್ಟನೆ ನೀಡಿದ್ದ ಬಿಎಸ್ಪಿ ವರಿಷ್ಠೆ ಮಾಯಾವತಿ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...