Homeಮುಖಪುಟಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಿದ ಮಾಯಾವತಿ

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಸೋಮವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಬಿಎಸ್‌ಪಿಯ ಎಲ್ಲ ಪ್ರಮುಖ ಹುದ್ದೆಗಳಿಂದ ಅವರನ್ನು ತೆಗೆದುಹಾಕಲಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

“ಅತ್ಯಂತ ಗೌರವಾನ್ವಿತ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ, ಸ್ವಾಭಿಮಾನ ಚಳವಳಿಯ ಹಿತಾಸಕ್ತಿ ಮತ್ತು ಕಾನ್ಶಿರಾಮ್ ಅವರ ಶಿಸ್ತಿನ ಸಂಪ್ರದಾಯವನ್ನು ಅನುಸರಿಸಿ, ಆಕಾಶ್ ಆನಂದ್ ಅವರನ್ನು ಅವರ ಮಾವನಂತೆ ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ಮಾಯಾವತಿ ಎಕ್ಸ್‌ನಲ್ಲಿ ಘೋಷಿಸಿದರು.

ಮಾಯಾವತಿ ಭಾನುವಾರ ಆನಂದ್ ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದುಹಾಕಿದರು. ಅವರ ತಂದೆ ಆನಂದ್ ಕುಮಾರ್ ಮತ್ತು ರಾಜ್ಯಸಭಾ ಸಂಸದ ರಾಮ್‌ಜಿ ಗೌತಮ್ ಅವರನ್ನು ಅವರ ಸ್ಥಾನದಲ್ಲಿ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಿದರು.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೂಡ ತಮ್ಮ ಜೀವಿತಾವಧಿಯಲ್ಲಿ ಉತ್ತರಾಧಿಕಾರಿಯನ್ನು ಹೆಸರಿಸುವುದಿಲ್ಲ ಎಂದು ಹೇಳಿದರು.

ಸೋಮವಾರ ಆಕಾಶ್ ಆನಂದ್ ಅವರು ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ಪ್ರತಿಯೊಂದು ನಿರ್ಧಾರವನ್ನು ಗೌರವಿಸುತ್ತೇನೆ. ಅವರನ್ನು ‘ಪತ್ತರ್ ಕಿ ಲೇಕರ್’ ಅಥವಾ ಕಲ್ಲಿನಲ್ಲಿ ಕೆತ್ತಿದವರಂತೆ ಪರಿಗಣಿಸುತ್ತೇನೆ ಎಂದು ಹೇಳಿದರು.

ಈ ನಿರ್ಧಾರವು ತನ್ನ ಮೇಲೆ ಭಾವನಾತ್ಮಕ ಪರಿಣಾಮ ಬೀರಿದೆ ಎಂದು ಅವರು ಹೇಳಿದರು. ಆದರೆ, ಅದನ್ನು ಸವಾಲಾಗಿ ತೆಗೆದುಕೊಂಡಿದ್ದ, ತನ್ನ ಮುಂದೆ ದೀರ್ಘ ಹೋರಾಟವಿದೆ ಎಂದು ಪ್ರತಿಪಾದಿಸಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆನಂದ್, “ಪಕ್ಷದ ಈ ನಿರ್ಧಾರದಿಂದಾಗಿ ನನ್ನ ರಾಜಕೀಯ ಜೀವನ ಮುಗಿದಿದೆ ಎಂದು ವಿರೋಧ ಪಕ್ಷದ ಕೆಲವರು ಭಾವಿಸುತ್ತಿದ್ದಾರೆ. ಬಹುಜನ ಚಳುವಳಿಯು ವೃತ್ತಿಜೀವನವಲ್ಲ, ಬದಲಾಗಿ ಕೋಟ್ಯಂತರ ದಲಿತರು, ಶೋಷಿತರು, ವಂಚಿತರು ಮತ್ತು ಬಡ ಜನರ ಸ್ವಾಭಿಮಾನಕ್ಕಾಗಿ ಹೋರಾಟವಾಗಿದೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದಾರೆ.

ಮಾಯಾವತಿಯವರ ನಾಯಕತ್ವದಲ್ಲಿ ತ್ಯಾಗ, ನಿಷ್ಠೆ ಮತ್ತು ಸಮರ್ಪಣೆಯ ಅಮೂಲ್ಯ ಪಾಠಗಳನ್ನು ಕಲಿತಿದ್ದೇನೆ, ಈ ತತ್ವಗಳನ್ನು ಕೇವಲ ಒಂದು ಕಲ್ಪನೆಯಾಗಿ ಪರಿಗಣಿಸುವುದಿಲ್ಲ. ಆದರೆ, ಜೀವನ ವಿಧಾನವೆಂದು ಆಕಾಶ್ ಆನಂದ್ ಹೇಳಿದರು.

ಮಾಯಾವತಿ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವು ಬದ್ಧವಾಗಿದೆ ಎಂದು ಅವರು ಒಪ್ಪಿಕೊಂಡರು. ನಾನು ಪ್ರತಿಯೊಂದನ್ನು ಗೌರವಿಸಿ, ಬೆಂಬಲಿಸುತ್ತೇನೆ ಎಂದರು.

“ಇದು ಒಂದು ಕಲ್ಪನೆ, ಚಳುವಳಿ, ಇದನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಲಕ್ಷಾಂತರ ಆಕಾಶ್ ಆನಂದರು ಈ ಜ್ಯೋತಿಯನ್ನು ಉರಿಯುತ್ತಲೇ ಇಡಲು ಮತ್ತು ಅದಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಲು ಯಾವಾಗಲೂ ಸಿದ್ಧರಿದ್ದಾರೆ” ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...