Homeಮುಖಪುಟಬಿಜೆಪಿ ಸರಕಾರ ಉದ್ಯೋಗ ಗ್ಯಾರೆಂಟಿ ನೀಡಿ 'ದೇಶಭಕ್ತಿ'ಯನ್ನು ಪ್ರದರ್ಶಿಸಲಿ: ಮಾಯಾವತಿ

ಬಿಜೆಪಿ ಸರಕಾರ ಉದ್ಯೋಗ ಗ್ಯಾರೆಂಟಿ ನೀಡಿ ‘ದೇಶಭಕ್ತಿ’ಯನ್ನು ಪ್ರದರ್ಶಿಸಲಿ: ಮಾಯಾವತಿ

- Advertisement -
- Advertisement -

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ತರಾಟೆಗೆ ತೆಗೆದುಕೊಂಡಿದ್ದು, ಜನರಿಗೆ ಉದ್ಯೋಗ ಗ್ಯಾರೆಂಟಿ ನೀಡುವ ಮೂಲಕ ನಿಜವಾದ ದೇಶಭಕ್ತಿಯನ್ನು ಪ್ರದರ್ಶಿಸುವಂತೆ ಕೇಳಿಕೊಂಡಿದ್ದಾರೆ.

ಹಿಂದಿನ ಕಾಂಗ್ರೆಸ್ ಮತ್ತು ಈಗ ಬಿಜೆಪಿ ನೇತೃತ್ವದ ಜಾತಿವಾದಿ, ದುರಹಂಕಾರಿ ಸರ್ಕಾರಗಳಿಂದ ಕೋಟ್ಯಂತರ ಬಡವರ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದು, ಸಾರ್ವಜನಿಕ ಹಿತಾಸಕ್ತಿ ಮತ್ತು ಹಿಂದುಳಿದ ಜಾತಿಗಳ ಕಲ್ಯಾಣಕ್ಕಾಗಿ ಲೋಕಸಭೆಯಲ್ಲಿ ಬಿಎಸ್ಪಿ ಪಕ್ಷಕ್ಕೆ ಮತವನ್ನು ಹಾಕಲು ಜನರಲ್ಲಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಾಯಾವತಿ, ಇದೀಗ ಹೊಸ ವರ್ಷವಾಗಿದೆ. ಇನ್ನು ಮುಂದೆಯಾದರೂ ಸರ್ಕಾರ ಉದ್ಯೋಗ ಖಾತರಿಯನ್ನು ಖಾತ್ರಿಪಡಿಸುವ ಮೂಲಕ ನಿಜವಾದ ದೇಶಭಕ್ತಿ ಮತ್ತು ರಾಜಧರ್ಮವನ್ನು ಪ್ರದರ್ಶಿಸಬೇಕು. ಏಕೆಂದರೆ ಉಳಿದ ಸರ್ಕಾರಿ ಗ್ಯಾರೆಂಟಿಗಳು ಸುಳ್ಳು ಎಂದು ಸಾಬೀತಾಗಿದೆ ಎಂದು ಮಾಯಾವತಿ ಅವರು ಹೇಳಿದ್ದಾರೆ.

ದೇಶದಲ್ಲಿ ಸಾಧಾರಣ ತಲಾ ಆದಾಯವಿದ್ದರೆ, ಖರ್ಚು ಮಾಡಲು ಜನರ ಜೇಬಿನಲ್ಲಿ ಹಣವಿಲ್ಲದಿದ್ದರೆ ಅಭಿವೃದ್ಧಿಯ ಕಹಳೆ ಊದುವುದರಿಂದ ಏನು ಪ್ರಯೋಜನ? ಹಾಗೆಯೇ ಅಭಿವೃದ್ಧಿ ಹೊಂದಿದ ಭಾರತದಲ್ಲಿ ಬಹುಸಂಖ್ಯೆಯ ಯುವ ಜನರು ನಿರುದ್ಯೋಗಿಗಳಾಗಿರಲು ಹೇಗೆ ಸಾಧ್ಯ ಎಂದು ಮಾಯಾವತಿ ಪ್ರಶ್ನಿಸಿದ್ದಾರೆ.

ಮಾಯಾವತಿ ನೇತೃತ್ವದ ಬಿಎಸ್ಪಿ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟವಾಗಲೀ, INDIA ಒಕ್ಕೂಟಕ್ಕಾಗಲೀ ಸೇರದೆ ಅಂತರವನ್ನು ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ INDIA ಒಕ್ಕೂಟಕ್ಕೆ ಬಿಎಸ್ಪಿ ಸೇರುವ  ಕುರಿತು ಊಹಾಪೂಹಗಳು ಭುಗಿಲೆದ್ದಿದ್ದವು. ಇದರ ಬೆನ್ನಲ್ಲೇ ಎಸ್ಪಿ ನಾಯಕ ಅಖಿಲೇಶ್ ಯಾದವ್‌ ಅವರು ಬಿಎಸ್ಪಿಯನ್ನು INDIA ಒಕ್ಕೂಟಕ್ಕೆ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದು, ಮೈತ್ರಿಯಿಂದ ಹೊರ ಬರುವುದಾಗಿ INDIA ಸಭೆಯಲ್ಲಿ ಹೇಳಿರುವುದಾಗಿ ವರದಿಯಾಗಿತ್ತು.

ಇತ್ತೀಚೆಗೆ 2024ರ ಲೋಕಸಭೆ ಚುನಾವಣೆ ಹಿನ್ನೆಲೆ ನಡೆದ ಪಕ್ಷದ ಸಭೆಯಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ ಮತ್ತು ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಿದ್ದರು.

 

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...