Homeಮುಖಪುಟಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮತ್ತು ಯುಪಿ ಮಾಜಿ ಸಿಎಂ ಮಾಯಾವತಿ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದು, ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಮತ್ತು ಬಿಎಸ್ಪಿಯ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ತೆಗೆದು ಹಾಕಿದ್ದಾರೆ.

ಆಕಾಶ್ ಆನಂದ್ ‘ರಾಜಕೀಯವಾಗಿ ಪ್ರಬುದ್ಧರಾಗುವವರೆಗೆ’ ಅವರನ್ನು ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದೇನೆ ಎಂದು ಮಾಯಾವತಿ ಈ ಕುರಿತು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಾಯಾವತಿ, ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ಉತ್ತರಾಧಿಕಾರಿ ಎಂದು ಘೋಷಿಸಿದ್ದೆ, ಆದರೆ ಪಕ್ಷ ಮತ್ತು ಚಳವಳಿಯ ದೊಡ್ಡ ಹಿತಾಸಕ್ತಿಯಿಂದ ಅವರು ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ಅವರನ್ನು ವಜಾಗೊಳಿಸುವುದಾಗಿ ಹೇಳಿದ್ದಾರೆ.

ಬಿಎಸ್ಪಿ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಆತ್ಮಗೌರವ ಮತ್ತು ಸ್ವಾಭಿಮಾನದ ಸಂಕೇತ ಹಾಗೂ ಸಾಮಾಜಿಕ ಬದಲಾವಣೆಗಾಗಿ ಕಾನ್ಶಿರಾಂ ಅವರು ಕಟ್ಟಿದ ಚಳವಳಿ. ಇದಕ್ಕಾಗಿ ನಾನು ನನ್ನ ಇಡೀ ಜೀವನವನ್ನು ಸಮರ್ಪಿಸಿಕೊಂಡಿದ್ದೇನೆ ಮತ್ತು ಹೊಸ ಪೀಳಿಗೆ ಕೂಡಾ ಈ ಚಳವಳಿಗೆ ವೇಗ ನೀಡಲು ಸಜ್ಜಾಗಬೇಕು. ಆಕಾಶ್ ಅವರ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ ಎಂದು ಹೇಳಿದ್ದಾರೆ.

ಏಪ್ರಿಲ್ 28ರಂದು,ಸೀತಾಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಹಿನ್ನೆಲೆ ಆಕಾಶ್ ಆನಂದ್ ಮತ್ತು ಇತರ ನಾಲ್ವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ  ದಾಖಲಾಗಿತ್ತು. ರ್ಯಾಲಿಯಲ್ಲಿ ಆನಂದ್ ಭಾಷಣದ ವಿರುದ್ಧ ಜಿಲ್ಲಾಡಳಿತ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಆನಂದ್ ಅಲ್ಲದೆ, ಬಿಎಸ್‌ಪಿ ಅಭ್ಯರ್ಥಿ ಮಹೇಂದ್ರ ಯಾದವ್, ಶ್ಯಾಮ್ ಅವಸ್ತಿ ಮತ್ತು ಅಕ್ಷಯ್ ಕಲ್ರಾ ಮತ್ತು ರ್ಯಾಲಿ ಆಯೋಜಕ ವಿಕಾಸ್ ರಾಜವಂಶಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಈ ಸರ್ಕಾರ ಬುಲ್ಡೋಜರ್ ಸರ್ಕಾರ ಮತ್ತು ದೇಶದ್ರೋಹಿ ಸರ್ಕಾರ, ಯುವಕರನ್ನು ಹಸಿವಿನಿಂದ ಬಿಡುವ ಮತ್ತು ತನ್ನ ಹಿರಿಯರನ್ನು ತನ್ನ ಗುಲಾಮರನ್ನಾಗಿ ಮಾಡುವ ಪಕ್ಷವು ಭಯೋತ್ಪಾದಕ ಸರ್ಕಾರವಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಇಂತಹ ಸರ್ಕಾರವನ್ನು ನಡೆಸುತ್ತಿದೆ ಎಂದು ಅವರು ಬಿಜೆಪಿ ನೇತೃತ್ವದ ಉತ್ತರಪ್ರದೇಶ ಸರ್ಕಾರದ ವಿರುದ್ಧ ಟೀಕೆ ಮಾಡುವ ವೇಳೆ ಹೇಳಿದ್ದರು.

ಕಳೆದ ಡಿಸೆಂಬರ್‌ನಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿ ಅವರಿಗೆ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ನೀಡಿದ್ದರು. ಆಕಾಶ್ ಆನಂದ್ ಅವರು ಮಾಯಾವತಿಯ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿದ್ದಾರೆ. ಅವರು ಬಿಎಸ್ಪಿಯಲ್ಲಿ ಬೆಹೆನ್ ಜಿ(ಮಾಯಾವತಿಯ) ನಂತರದ ಸ್ಥಾನದಲ್ಲಿದ್ದರು.

ಇದನ್ನು ಓದಿ: ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...