Homeಮುಖಪುಟಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

ಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

- Advertisement -
- Advertisement -

ಯೆಮೆನ್‌ನಲ್ಲಿ ಕೊಲೆ ಪ್ರಕರಣವೊಂದರಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಮಗಳನ್ನು ಗಲ್ಲುಶಿಕ್ಷೆಯಿಂದ ಪಾರು ಮಾಡಲು ಯೆಮೆನ್‌ಗೆ ತೆರಳಿ 2017ರಲ್ಲಿ ತನ್ನ ಮಗಳಿಂದ ಹತ್ಯೆಗೀಡಾದ ಯೆಮೆನ್ ಪ್ರಜೆಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ನಿಮಿಷಾ ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರು ಬಯಸಿದ್ದರು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆ ದೇಶಕ್ಕೆ ಹೋಗುವುದು ಸೂಕ್ತವಲ್ಲ ಎಂದು ಅವರಿಗೆ ತಿಳಿಸಿದ್ದು, ಮಗಳನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಲು ಮುಂದಾಗಿದ್ದ ತಾಯಿಗೆ ನಿರಾಶೆಯಾಗಿದೆ.

ಕಳೆದ ತಿಂಗಳು ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಒಂದು ವಾರದೊಳಗೆ ಈ ಕುರಿತು ಪ್ರತಿಕ್ರಿಯಿಸುವಂತೆ ಸಚಿವಾಲಯಕ್ಕೆ ಸೂಚಿಸಿತ್ತು. ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಿಯಾ ಅವರ 10 ವರ್ಷದ ಮಗಳು ಸೇರಿದಂತೆ ತಾಯಿ ಪ್ರೇಮಾ ಕುಮಾರಿ ಮತ್ತು ಇತರ ನಾಲ್ವರು ಯೆಮನ್‌ಗೆ ಪ್ರಯಾಣಕ್ಕೆ ಅನುಮತಿ ಕೋರಿ ಸಚಿವಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದರು.

ಡಿ.1ರಂದು ಸಚಿವಾಲಯದ ಗಲ್ಫ್ ವ್ಯವಹಾರಗಳ ನಿರ್ದೇಶಕ ತನುಜ್ ಶಂಕರ್ ಪ್ರತಿಕ್ರಿಯಿಸಿದ್ದು, ಈ ಕುರಿತು  ಸಚಿವಾಲಯವು ಎಚ್ಚರಿಕೆಯಿಂದ ನಡೆಯುತ್ತಿದೆ. ಪ್ರಕ್ಷುಬ್ಧ ಪರಿಸ್ಥಿತಿಗಳಿಂದಾಗಿ ಆ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಜಿಬೌಟಿಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ನಾವು ನಿಮ್ಮ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ರಾಜತಾಂತ್ರಿಕ ಉಪಸ್ಥಿತಿಯನ್ನು ಹೊಂದಿಲ್ಲ. ಇದಲ್ಲದೆ ಸನಾದಲ್ಲಿ ಪ್ರಸ್ತುತ ಯಾವುದೆ ಔಪಚಾರಿಕ ಸಂಬಂಧಗಳನ್ನು ಸ್ಥಾಪಿಸಲಾಗಿಲ್ಲ. ಇತ್ತೀಚಿಗೆ ಪ್ರಾದೇಶಿಕ ಬೆಳವಣಿಗೆಗಳು ಹೆಚ್ಚು ಸವಾಲಾಗಿವೆ ಮತ್ತು ಪ್ರಯಾಣದ ಸುರಕ್ಷತೆಯು ಮುಖ್ಯವಾಗಿದೆ ಎಂದು ನಿಮಗೆ ತಿಳಿದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಧ್ಯ ಯೆಮೆನ್‌ಗೆ ಹೋಗುವುದು ಸೂಕ್ತವಲ್ಲ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಿಮಿಷಾ ಪ್ರಿಯಾ ತನ್ನ ವ್ಯಾಪಾರ ಪಾಲುದಾರ ತಲಾಲ್ ಅಬ್ದೋ ಮಹದಿ ಹತ್ಯೆಗೆ ಸಂಬಂಧಿಸಿದಂತೆ 2017 ರಿಂದ ಯೆಮೆನ್ ಜೈಲಿನಲ್ಲಿದ್ದಾರೆ. ನ್ಯಾಯಾಲಯವು 2020ರಲ್ಲಿ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆಕ್ಷನ್ ಕೌನ್ಸಿಲ್‌ನ ಉಪಾಧ್ಯಕ್ಷೆ ಮತ್ತು ದೆಹಲಿ ಮೂಲದ ವಕೀಲೆ ದೀಪಾ ಜೋಸೆಫ್ ಅವರು ತಮ್ಮ ಕುಟುಂಬದೊಂದಿಗೆ ಯೆಮೆನ್‌ಗೆ ಹೋಗಲು ಪ್ರಯತ್ನಿಸಿದ್ದರು. ಆದರೆ ಕೇಂದ್ರ ಸರಕಾರದ ಬೆಂಬಲವಿಲ್ಲದೆ ನಮಗೆ ಸಂತ್ರಸ್ತನ ಕುಟುಂಬದ ಜೊತೆ ಮಾತುಕತೆಗೆ ಸಾಧ್ಯವಿಲ್ಲ. ಅವಕಾಶ ನಿರಾಕರಣೆಯಿಂದ ಮುಂದಿನ ಕ್ರಮದ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...