Homeಮುಖಪುಟಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

ಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

- Advertisement -
- Advertisement -

ಯೆಮೆನ್‌ನಲ್ಲಿ ಕೊಲೆ ಪ್ರಕರಣವೊಂದರಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಮಗಳನ್ನು ಗಲ್ಲುಶಿಕ್ಷೆಯಿಂದ ಪಾರು ಮಾಡಲು ಯೆಮೆನ್‌ಗೆ ತೆರಳಿ 2017ರಲ್ಲಿ ತನ್ನ ಮಗಳಿಂದ ಹತ್ಯೆಗೀಡಾದ ಯೆಮೆನ್ ಪ್ರಜೆಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ನಿಮಿಷಾ ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರು ಬಯಸಿದ್ದರು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆ ದೇಶಕ್ಕೆ ಹೋಗುವುದು ಸೂಕ್ತವಲ್ಲ ಎಂದು ಅವರಿಗೆ ತಿಳಿಸಿದ್ದು, ಮಗಳನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಲು ಮುಂದಾಗಿದ್ದ ತಾಯಿಗೆ ನಿರಾಶೆಯಾಗಿದೆ.

ಕಳೆದ ತಿಂಗಳು ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಒಂದು ವಾರದೊಳಗೆ ಈ ಕುರಿತು ಪ್ರತಿಕ್ರಿಯಿಸುವಂತೆ ಸಚಿವಾಲಯಕ್ಕೆ ಸೂಚಿಸಿತ್ತು. ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಿಯಾ ಅವರ 10 ವರ್ಷದ ಮಗಳು ಸೇರಿದಂತೆ ತಾಯಿ ಪ್ರೇಮಾ ಕುಮಾರಿ ಮತ್ತು ಇತರ ನಾಲ್ವರು ಯೆಮನ್‌ಗೆ ಪ್ರಯಾಣಕ್ಕೆ ಅನುಮತಿ ಕೋರಿ ಸಚಿವಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದರು.

ಡಿ.1ರಂದು ಸಚಿವಾಲಯದ ಗಲ್ಫ್ ವ್ಯವಹಾರಗಳ ನಿರ್ದೇಶಕ ತನುಜ್ ಶಂಕರ್ ಪ್ರತಿಕ್ರಿಯಿಸಿದ್ದು, ಈ ಕುರಿತು  ಸಚಿವಾಲಯವು ಎಚ್ಚರಿಕೆಯಿಂದ ನಡೆಯುತ್ತಿದೆ. ಪ್ರಕ್ಷುಬ್ಧ ಪರಿಸ್ಥಿತಿಗಳಿಂದಾಗಿ ಆ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಜಿಬೌಟಿಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ನಾವು ನಿಮ್ಮ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ರಾಜತಾಂತ್ರಿಕ ಉಪಸ್ಥಿತಿಯನ್ನು ಹೊಂದಿಲ್ಲ. ಇದಲ್ಲದೆ ಸನಾದಲ್ಲಿ ಪ್ರಸ್ತುತ ಯಾವುದೆ ಔಪಚಾರಿಕ ಸಂಬಂಧಗಳನ್ನು ಸ್ಥಾಪಿಸಲಾಗಿಲ್ಲ. ಇತ್ತೀಚಿಗೆ ಪ್ರಾದೇಶಿಕ ಬೆಳವಣಿಗೆಗಳು ಹೆಚ್ಚು ಸವಾಲಾಗಿವೆ ಮತ್ತು ಪ್ರಯಾಣದ ಸುರಕ್ಷತೆಯು ಮುಖ್ಯವಾಗಿದೆ ಎಂದು ನಿಮಗೆ ತಿಳಿದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಧ್ಯ ಯೆಮೆನ್‌ಗೆ ಹೋಗುವುದು ಸೂಕ್ತವಲ್ಲ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಿಮಿಷಾ ಪ್ರಿಯಾ ತನ್ನ ವ್ಯಾಪಾರ ಪಾಲುದಾರ ತಲಾಲ್ ಅಬ್ದೋ ಮಹದಿ ಹತ್ಯೆಗೆ ಸಂಬಂಧಿಸಿದಂತೆ 2017 ರಿಂದ ಯೆಮೆನ್ ಜೈಲಿನಲ್ಲಿದ್ದಾರೆ. ನ್ಯಾಯಾಲಯವು 2020ರಲ್ಲಿ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆಕ್ಷನ್ ಕೌನ್ಸಿಲ್‌ನ ಉಪಾಧ್ಯಕ್ಷೆ ಮತ್ತು ದೆಹಲಿ ಮೂಲದ ವಕೀಲೆ ದೀಪಾ ಜೋಸೆಫ್ ಅವರು ತಮ್ಮ ಕುಟುಂಬದೊಂದಿಗೆ ಯೆಮೆನ್‌ಗೆ ಹೋಗಲು ಪ್ರಯತ್ನಿಸಿದ್ದರು. ಆದರೆ ಕೇಂದ್ರ ಸರಕಾರದ ಬೆಂಬಲವಿಲ್ಲದೆ ನಮಗೆ ಸಂತ್ರಸ್ತನ ಕುಟುಂಬದ ಜೊತೆ ಮಾತುಕತೆಗೆ ಸಾಧ್ಯವಿಲ್ಲ. ಅವಕಾಶ ನಿರಾಕರಣೆಯಿಂದ ಮುಂದಿನ ಕ್ರಮದ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...