Homeಮುಖಪುಟಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

ಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

- Advertisement -
- Advertisement -

ಯೆಮೆನ್‌ನಲ್ಲಿ ಕೊಲೆ ಪ್ರಕರಣವೊಂದರಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಮಗಳನ್ನು ಗಲ್ಲುಶಿಕ್ಷೆಯಿಂದ ಪಾರು ಮಾಡಲು ಯೆಮೆನ್‌ಗೆ ತೆರಳಿ 2017ರಲ್ಲಿ ತನ್ನ ಮಗಳಿಂದ ಹತ್ಯೆಗೀಡಾದ ಯೆಮೆನ್ ಪ್ರಜೆಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ನಿಮಿಷಾ ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರು ಬಯಸಿದ್ದರು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆ ದೇಶಕ್ಕೆ ಹೋಗುವುದು ಸೂಕ್ತವಲ್ಲ ಎಂದು ಅವರಿಗೆ ತಿಳಿಸಿದ್ದು, ಮಗಳನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಲು ಮುಂದಾಗಿದ್ದ ತಾಯಿಗೆ ನಿರಾಶೆಯಾಗಿದೆ.

ಕಳೆದ ತಿಂಗಳು ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಒಂದು ವಾರದೊಳಗೆ ಈ ಕುರಿತು ಪ್ರತಿಕ್ರಿಯಿಸುವಂತೆ ಸಚಿವಾಲಯಕ್ಕೆ ಸೂಚಿಸಿತ್ತು. ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಿಯಾ ಅವರ 10 ವರ್ಷದ ಮಗಳು ಸೇರಿದಂತೆ ತಾಯಿ ಪ್ರೇಮಾ ಕುಮಾರಿ ಮತ್ತು ಇತರ ನಾಲ್ವರು ಯೆಮನ್‌ಗೆ ಪ್ರಯಾಣಕ್ಕೆ ಅನುಮತಿ ಕೋರಿ ಸಚಿವಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದರು.

ಡಿ.1ರಂದು ಸಚಿವಾಲಯದ ಗಲ್ಫ್ ವ್ಯವಹಾರಗಳ ನಿರ್ದೇಶಕ ತನುಜ್ ಶಂಕರ್ ಪ್ರತಿಕ್ರಿಯಿಸಿದ್ದು, ಈ ಕುರಿತು  ಸಚಿವಾಲಯವು ಎಚ್ಚರಿಕೆಯಿಂದ ನಡೆಯುತ್ತಿದೆ. ಪ್ರಕ್ಷುಬ್ಧ ಪರಿಸ್ಥಿತಿಗಳಿಂದಾಗಿ ಆ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಜಿಬೌಟಿಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ನಾವು ನಿಮ್ಮ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ರಾಜತಾಂತ್ರಿಕ ಉಪಸ್ಥಿತಿಯನ್ನು ಹೊಂದಿಲ್ಲ. ಇದಲ್ಲದೆ ಸನಾದಲ್ಲಿ ಪ್ರಸ್ತುತ ಯಾವುದೆ ಔಪಚಾರಿಕ ಸಂಬಂಧಗಳನ್ನು ಸ್ಥಾಪಿಸಲಾಗಿಲ್ಲ. ಇತ್ತೀಚಿಗೆ ಪ್ರಾದೇಶಿಕ ಬೆಳವಣಿಗೆಗಳು ಹೆಚ್ಚು ಸವಾಲಾಗಿವೆ ಮತ್ತು ಪ್ರಯಾಣದ ಸುರಕ್ಷತೆಯು ಮುಖ್ಯವಾಗಿದೆ ಎಂದು ನಿಮಗೆ ತಿಳಿದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಧ್ಯ ಯೆಮೆನ್‌ಗೆ ಹೋಗುವುದು ಸೂಕ್ತವಲ್ಲ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಿಮಿಷಾ ಪ್ರಿಯಾ ತನ್ನ ವ್ಯಾಪಾರ ಪಾಲುದಾರ ತಲಾಲ್ ಅಬ್ದೋ ಮಹದಿ ಹತ್ಯೆಗೆ ಸಂಬಂಧಿಸಿದಂತೆ 2017 ರಿಂದ ಯೆಮೆನ್ ಜೈಲಿನಲ್ಲಿದ್ದಾರೆ. ನ್ಯಾಯಾಲಯವು 2020ರಲ್ಲಿ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆಕ್ಷನ್ ಕೌನ್ಸಿಲ್‌ನ ಉಪಾಧ್ಯಕ್ಷೆ ಮತ್ತು ದೆಹಲಿ ಮೂಲದ ವಕೀಲೆ ದೀಪಾ ಜೋಸೆಫ್ ಅವರು ತಮ್ಮ ಕುಟುಂಬದೊಂದಿಗೆ ಯೆಮೆನ್‌ಗೆ ಹೋಗಲು ಪ್ರಯತ್ನಿಸಿದ್ದರು. ಆದರೆ ಕೇಂದ್ರ ಸರಕಾರದ ಬೆಂಬಲವಿಲ್ಲದೆ ನಮಗೆ ಸಂತ್ರಸ್ತನ ಕುಟುಂಬದ ಜೊತೆ ಮಾತುಕತೆಗೆ ಸಾಧ್ಯವಿಲ್ಲ. ಅವಕಾಶ ನಿರಾಕರಣೆಯಿಂದ ಮುಂದಿನ ಕ್ರಮದ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...