Homeಮುಖಪುಟಮಾಂಸಹಾರ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ

ಮಾಂಸಹಾರ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ

- Advertisement -
- Advertisement -

ಟಿಫಿನ್ ಬಾಕ್ಸ್‌ನಲ್ಲಿ ಮಾಂಸಹಾರ ತಂದಿದ್ದಕ್ಕಾಗಿ ಖಾಸಗಿ ಶಾಲೆಯೊಂದು ನರ್ಸರಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಅಮ್ರೋಹಾ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ. ಅಲ್ಲದೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಹಿಲ್ಟನ್ ಕಾನ್ವೆಂಟ್ ಶಾಲೆಯ ಪ್ರಾಂಶುಪಾಲ ಅವಿನಾಶ್ ಕುಮಾರ್ ಶರ್ಮಾ ಅವರನ್ನು ಸಮಿತಿಯ ಮುಂದೆ ಹಾಜರಾಗುವಂತೆ ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದದ ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯದ ಹುಡುಗ ಶಾಲೆಯಲ್ಲಿ ಧಾರ್ಮಿಕ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರತಿದಿನ ಮಾಂಸಾಹಾರಿ ಆಹಾರವನ್ನು ತರುತ್ತಿದ್ದನು ಎಂದು ಪ್ರಾಂಶುಪಾಲರು ಆರೋಪಿಸಿದ್ದಾರೆ.

“ನಮ್ಮ ದೇವಸ್ಥಾನಗಳನ್ನು ಕೆಡವುವ, ಶಾಲೆಗೆ ಮಾಂಸಾಹಾರ ತರುವ ಇಂತಹ ನೈತಿಕತೆ ಇಲ್ಲದ ಮಕ್ಕಳಿಗೆ ಕಲಿಸಲು ನಾವು ಬಯಸುವುದಿಲ್ಲ,” ಎಂದು ಪ್ರಾಂಶುಪಾಲರು ಮಗುವಿನ ತಾಯಿಗೆ ಹೇಳಿದ್ದು ವೀಡಿಯೊದಲ್ಲಿ ದಾಖಲಾಗಿದೆ. ಜೊತೆಗೆ ವಿದ್ಯಾರ್ಥಿಯು ಸಹ ವಿದ್ಯಾರ್ಥಿಗಳಿಗೆ ಮಾಂಸಾಹಾರಿ ಆಹಾರವನ್ನು ತಿನ್ನಿಸುವ ಬಗ್ಗೆ ಮಾತನಾಡಿದ್ದು, “ಅವರನ್ನು ಇಸ್ಲಾಂಗೆ ಪರಿವರ್ತಿಸುತ್ತಾನೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿನ ಮದ್ಯ ನಿಷೇಧವು ಬಡವರ ಮೇಲೆ ಮಾತ್ರ ಪರಿಣಾಮ ಬೀರುತ್ತಿದೆ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ

ಈ ಮಧ್ಯೆ, ಈ ಕುರಿತು ಹೊಸದಾಗಿ ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಎನ್‌ಸಿಪಿಸಿಆರ್ ಗುರುವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ಕುಮಾರ್ ತ್ಯಾಗಿ ಅವರಿಗೆ ಆದೇಶಿಸಿದೆ. ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015 ರ ಅಡಿಯಲ್ಲಿ ಸಿಡಬ್ಲ್ಯೂಸಿ ಈ ಘಟನೆಯ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತ್ತು.

ಅಲ್ಲದೆ, ಸಂತ್ರಸ್ತ ವಿದ್ಯಾರ್ಥಿಯ ತಾಯಿ ಅದೇ ಶಾಲೆಗೆ ಮೂವರು ಮಕ್ಕಳನ್ನು ಸೇರಿಸಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. “ಆ ದಿನ ಶಾಲೆಯಲ್ಲಿ ನಡೆದ ಘಟನೆಯು ನನ್ನ ಎಲ್ಲ ಮಕ್ಕಳನ್ನು ಎಷ್ಟು ಬೆಚ್ಚಿಬೀಳಿಸಿದೆ ಎಂದರೆ ಅವರು ಈಗ ಶಾಲೆಗೆ ಹೋಗಲು ಸಹ ಹೆದರುತ್ತಾರೆ” ಎಂದು ಹೇಳಿದ್ದಾರೆ. ನನ್ನ ಮಕ್ಕಳಿಗೆ ನ್ಯಾಯ ಕೊಡಿಸಲು ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...