Homeಮುಖಪುಟಕೇರಳದಲ್ಲಿ ಸದ್ದು ಮಾಡಿದ 'MEC-7' : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

- Advertisement -
- Advertisement -

ಉತ್ತರ ಕೇರಳದಲ್ಲಿ ಹಲವು ಶಾಖೆಗಳನ್ನು ಹೊಂದಿರುವ ದೈಹಿಕ ವ್ಯಾಯಾಮ ಕ್ಲಬ್ ‘MEC-7’ ಪ್ರಸ್ತುತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಕೇರಳದ ಆಡಳಿತಾರೂಢ ಸಿಪಿಐ(ಎಂ)ನ ತಳಿಪರಂಬ ಪ್ರದೇಶ ಸಮಿತಿ ಸಮ್ಮೇಳನದಲ್ಲಿ ಪಕ್ಷದ ಕೋಝಿಕೋಡ್ ಜಿಲ್ಲಾ ಕಾರ್ಯದರ್ಶಿ ಪಿ.ಮೋಹನನ್ ಅವರು MEC-7 ಜಮಾತ್-ಎ-ಇಸ್ಲಾಮಿ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಪರ್ಕ ಹೊಂದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು. ಆ ಬಳಿಕ MEC-7 ಸುತ್ತ ಚರ್ಚೆ ಹೆಚ್ಚಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ (ಎಪಿ ವಿಭಾಗ) ಕೂಡ MEC-7 ವಿರುದ್ದ ಹೇಳಿಕೆ ನೀಡಿದೆ.

“MEC-7 ಹಿಂದೆ ದೇಶ ವಿರೋಧಿ ಶಕ್ತಿಗಳಿವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಆರೋಪಿಸಿದ್ದು, ರಾಜ್ಯ ಸರ್ಕಾರ ಈ ಗುಂಪಿನ ಕುರಿತು ಕೇಂದ್ರ ಸರ್ಕಾರಕ್ಕೆ ಏಕೆ ವರದಿ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ. MEC-7 ಜಮಾತೆ ಇಸ್ಲಾಮಿಯೊಂದಿಗೆ ಸಂಪರ್ಕ ಹೊಂದಿದೆ ಎಂದು ಆರೋಪಿಸಿರುವ ಸಮಸ್ತ (ಎಪಿ ವಿಭಾಗ) ಸುನ್ನಿಗಳು ಅದರಿಂದ ದೂರ ಇರುವಂತೆ ಎಚ್ಚರಿಕೆ ನೀಡಿದೆ. ಇತರ ಗುಂಪುಗಳು ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿವೆ. ಈ ಬೆನ್ನಲ್ಲೇ ಕೇರಳ ಪೊಲೀಸ್ ಇಲಾಖೆಯ ವಿಶೇಷ ವಿಭಾಗ ಈ ಕ್ಲಬ್ ಬಗ್ಗೆ ತನಿಖೆ ಪ್ರಾರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ.

ತಮ್ಮ ವಿರುದ್ದದ ಎಲ್ಲಾ ಆರೋಪಗಳನ್ನು MEC-7 ತಂಡ ಅಲ್ಲಗಳೆದಿದ್ದು, “ದೈಹಿಕ ವ್ಯಾಯಾಮಗಳನ್ನು ಮಾಡಿಸುವ ಮೂಲಕ ಆರೋಗ್ಯ ವೃದ್ದಿಯ ಕೆಲಸ ಮಾಡಿಸುವುದು ಮಾತ್ರ ನಮ್ಮ ಗುರಿ” ಎಂದಿದೆ.

“MEC-7 ಎಲ್ಲರಿಗೂ ಮುಕ್ತ”

MEC-7 ಎಂದು ಕರೆಯಲ್ಪಡುವ ‘ಮಲ್ಟಿ-ಎಕ್ಸರ್ಸೈಸ್ ಕಾಂಬಿನೇಶನ್’ (Multi-Exercise Combination) ಎಂಬ ತಂಡವನ್ನು ಮಾಜಿ ಮಿಲಿಟರಿ ಅಧಿಕಾರಿ ಸಲಾಹುದ್ದೀನ್. ಪಿ 2012ರಲ್ಲಿ ಸ್ಥಾಪಿಸಿದರು. ಇದು ಯೋಗ, ಧ್ಯಾನ ಸೇರಿದಂತೆ ಏಳು ಪ್ರಕಾರದ ವ್ಯಾಯಾಮಗಳನ್ನು ಸುಮಾರು 21-25 ನಿಮಿಷಗಳ ಕಾಲ ಮಾಡುವ ಗುಂಪಾಗಿದೆ. ಆರಂಭದ ಹತ್ತು ವರ್ಷಗಳ ಕಾಲ ಕೊಂಡೊಟ್ಟಿಯಲ್ಲಿ ಒಂದು ಗುಂಪಿಗೆ ಮಾತ್ರ MEC-7 ಸೀಮಿತವಾಗಿತ್ತು. ನಂತರ, ಇದು ಕೇರಳದ ವಿವಿಧ ಭಾಗಗಳಿಗೆ ವಿಸ್ತರಿಸಿತು.

“MEC-7 ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದೆ ಎನ್ನುವುದು ಅದರ ವಿರುದ್ದ ಆರೋಪಗಳು ಕೇಳಿ ಬರಲು ಕಾರಣ. ಆದರೆ, ನಮ್ಮ ತಂಡ ಧರ್ಮ, ಜಾತಿ, ಲಿಂಗ ರಹಿತವಾಗಿ ಆಸಕ್ತಯುಳ್ಳ ಎಲ್ಲರಿಗೂ ಮುಕ್ತವಾಗಿದೆ” ಎಂದು MEC-7 ಕ್ಲಬ್ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಸಿಪಿಐ(ಎಂ), ಆರ್‌ಎಸ್‌ಎಸ್‌ ಸೇರಿದಂತೆ ಎಲ್ಲಾ ಹಿನ್ನೆಲೆಯ ಜನರು ನಮ್ಮ ವ್ಯಾಯಾಮ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ನಾವು ಯಾವುದೇ ರಾಜಕೀಯ ಚರ್ಚೆ ನಡೆಸುವುದಿಲ್ಲ. ನಮ್ಮ ಗುರಿ ಕೇವಲ ಆರೋಗ್ಯದ ವಿಚಾರ ಮಾತ್ರ” ಎಂದು ಕೋಝಿಕ್ಕೋಡ್‌ನ ಸ್ಥಳೀಯ ನಿವಾಸಿ ಎಸ್‌.ಪಿ ರಶೀದ್ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ರಶೀದ್ ಒಂಬತ್ತು ತಿಂಗಳ ಹಿಂದೆ MEC-7ಗೆ ಸೇರಿಕೊಂಡಿದ್ದು, ಪ್ರಸ್ತುತ ಅವರು ವಾಸಿಸುತ್ತಿರುವ ಚೆರುವನ್ನೂರಿನಲ್ಲಿ ಇತರರಿಗೆ ತರಬೇತಿ ನೀಡುತ್ತಿದ್ದಾರೆ.

“ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನೀವು MEC-7ಗೆ ಸೇರಬಹುದು. ಯಾರೂ ಬರುವಂತೆ ಒತ್ತಡ ಹೇರುವುದಿಲ್ಲ. ನಿಮಗೆ ಕಷ್ಟವಾದರೆ ಬರುವುದನ್ನು ನಿಲ್ಲಿಸಬಹುದು. ಅಂತಿಮವಾಗಿ, ನೀವು ಆರೋಗ್ಯಕರ ಜೀವನವನ್ನು ಬಯಸುತ್ತೀರೋ ಇಲ್ಲವೋ ಎಂಬುವುದು ನಿಮ್ಮ ಆಯ್ಕೆಯಾಗಿದೆ. ನಮ್ಮ ತಂಡ ಸೇರಲು ಯಾವುದೇ ಪ್ರವೇಶ ಶುಲ್ಕ ಮತ್ತು ಪ್ರಕ್ರಿಯೆ ಇಲ್ಲ” ಎಂದು ರಶೀದ್ ಹೇಳಿದ್ದಾರೆ.

“ಕೆಲವು ತಿಂಗಳ ತರಬೇತಿಯ ನಂತರ, MEC-7 ತುಂಬಾ ಪ್ರಯೋಜನಕಾರಿ ಎಂದು ನಾನು ಕಂಡುಕೊಂಡೆ. ಹಾಗಾಗಿ, ನಾನು ಕೋಝಿಕ್ಕೋಡ್‌ನಲ್ಲಿರುವ ನನ್ನ ಪ್ರದೇಶದ ಬಳಿ ಒಂದು ಗುಂಪನ್ನು ಪ್ರಾರಂಭಿಸಿದೆ. ಈಗ ನನ್ನೊಂದಿಗೆ ಸುಮಾರು 100 ಮಂದಿ ವ್ಯಾಯಾಮದಲ್ಲಿ ಭಾಗವಹಿಸುತ್ತಿದ್ದಾರೆ” ಎಂದು ರಶೀದ್ ತಿಳಿಸಿದ್ದಾರೆ.

“ಸಿಪಿಐ(ಎಂ) ಮುಸ್ಲಿಮರ ವಿರುದ್ಧ ಪೂರ್ವಗ್ರಹ ಪೀಡಿತವಾಗಿದೆ”

ಸಿಪಿಐ(ಎಂ) ನಾಯಕ ಮೋಹನನ್ ಅವರ MEC-7 ಕುರಿತ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಕೂಟಗಳ ಬಗ್ಗೆ ಸಿಪಿಐ(ಎಂ) ಪೂರ್ವಾಗ್ರಹ ಪೀಡಿತ ದೃಷ್ಟಿಕೋನವನ್ನು ಪ್ರಸಾರ ಮಾಡುವ ಮೂಲಕ ಸಂಘ ಪರಿವಾರದ ಸಂಘಟನೆಗಳ ಕಾರ್ಯಸೂಚಿಗೆ ನೆರವು ನೀಡುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

“ರಾಜ್ಯದಲ್ಲಿ ಆರ್‌ಎಸ್‌ಎಸ್‌ನ ಶಾಖೆಗಳು ನಿರಾತಂಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಅದರ ಬಗ್ಗೆ ಯಾವುದೇ ತಕರಾರು ಇಲ್ಲದಿರುವಾಗ ವ್ಯಾಯಾಮದ ಗುಂಪೊಂದು ಕೆಂಗಣ್ಣಿಗೆ ಗುರಿಯಾಗಿರುವುದು ಏಕೆ? ಎಂದು ರಾಜ್ಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಅಭಿನ್ ವರ್ಕಿ ಪ್ರಶ್ನಿಸಿದ್ದಾರೆ. ಡಿಸೆಂಬರ್ 17 ರಂದು ಮಲಪ್ಪುರಂನಲ್ಲಿ MEC-7 ಗುಂಪಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿನ್ ವರ್ಕಿ, “MEC-7 ವಿರುದ್ದ ವಿವಾದ ಅನಗತ್ಯ” ಎಂದಿದ್ದಾರೆ.

ಇದಕ್ಕೂ ಎರಡು ದಿನಗಳ ಮೊದಲು, ಡಿಸೆಂಬರ್ 15 ರಂದು, ಕಾಂಗ್ರೆಸ್‌ನ ಪಾಲಕ್ಕಾಡ್ ಸಂಸದ ವಿಕೆ ಶ್ರೀಕಂದನ್ MEC-7 ಪಟ್ಟಾಂಬಿ ಗುಂಪನ್ನು ಉದ್ಘಾಟಿಸಿ ಬೆಂಬಲ ವ್ಯಕ್ತಪಡಿಸಿದ್ದರು.

ಸಿಪಿಐ(ಎಂ)ನ ಮೋಹನನ್ ಅವರ ಹೇಳಿಕೆಯನ್ನು ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್‌) ರಾಜ್ಯ ಉಪಾಧ್ಯಕ್ಷ ಸತ್ತಾರ್ ಪಂದಲ್ಲೂರ್ ವಿರೋಧಿಸಿದ್ದು, “ಮುಸ್ಲಿಮರು ಅಥವಾ ಮುಸ್ಲಿಮರ ಗುಂಪುಗಳನ್ನು ಅನುಮಾನದ ಕಣ್ಣಿನಿಂದ ನೋಡುವುದು ಸ್ವೀಕಾರ್ಹವಲ್ಲ” ಎಂದಿದ್ದಾರೆ.

ಸಿಪಿಐ(ಎಂ) ತೊರೆದು ಕಾಂಗ್ರೆಸ್‌ ಸೇರಿದ ಮುಸ್ಲಿಂ ಮುಖಂಡ

ಅಲ್ಪಸಂಖ್ಯಾತರ ಮೇಲೆ ಅನುಮಾನ ವ್ಯಕ್ತಪಡಿಸಿ ಮೋಹನನ್ ಹೇಳಿಕೆ ನೀಡಿದ್ದಾರೆ ಎಂದಿರುವ ಸಿಪಿಐ(ಎಂ) ನಡುವನ್ನೂರು ಶಾಖೆಯ ಕಾರ್ಯದರ್ಶಿ ಅಕ್ಬರ್ ಅಲಿ ಅವರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಕ್ಬರ್ ಅವರು ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನ ಮಾಜಿ ನಾಯಕರೂ ಆಗಿದ್ದರು.

ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿದ್ದು, “ಸಿಪಿಐ(ಎಂ) MEC-7 ಅನ್ನು ವಿರೋಧಿಸುವುದಿಲ್ಲ” ಎಂದು ಹೇಳಿದ್ದಾರೆ.

“ಜಮಾತ್-ಎ-ಇಸ್ಲಾಮಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಮತ್ತು ಸಂಘ ಪರಿವಾರ ಸೇರಿದಂತೆ ಧಾರ್ಮಿಕ ದ್ವೇಷವನ್ನು ಹರಡುವ ಗುಂಪುಗಳಿವೆ. ಈ ಸಂಸ್ಥೆಗಳು ತಮ್ಮ ಕೋಮುವಾದಿ ಕಾರ್ಯಸೂಚಿಯನ್ನು ಉತ್ತೇಜಿಸಲು MEC-7ನಂತಹ ಗುಂಪುಗಳಿಗೆ ನುಸುಳುತ್ತವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು. ನನ್ನ ಹೇಳಿಕೆಯ ಉದ್ದೇಶವೂ ಇದೇ ಆಗಿತ್ತು” ಎಂದು ಮೋಹನನ್ ಅವರು ಡಿಸೆಂಬರ್ 15ರಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಮಸ್ತ (ಎಪಿ ವಿಭಾಗ) ಕೂಡ ತನ್ನ ಹೇಳಿಕೆಯನ್ನು ಬದಲಿಸಿದ್ದು, ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸುವ ಉದ್ದೇಶವಿಲ್ಲ ಎಂದು ಸಮರ್ಥಿಸಿಕೊಂಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಮಸ್ತ (ಎಪಿ ವಿಭಾಗ) ನಾಯಕ ಅಬ್ದುಲ್ ಹಕ್ಕಿಂ ಅಝ್ಹರಿ, “ನಮ್ಮ ಸಂಘಟನೆ ಮಹಿಳೆಯರ ದೇಹದ ಅಸಭ್ಯ ಪ್ರದರ್ಶನವನ್ನು ಮಾತ್ರ ವಿರೋಧಿಸಿದೆ” ಎಂದು ಹೇಳಿದ್ದಾರೆ.

ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಸುರೇಂದ್ರನ್, “ಸಿಪಿಐ(ಎಂ) ಧಾರ್ಮಿಕ ಉಗ್ರಗಾಮಿಗಳಿಗೆ ಹೆದರಿ ತನ್ನ ನಿಲುವು ಬದಲಿಸಿದೆ” ಎಂದು ಹೇಳಿದ್ದಾರೆ. ಮೋಹನನ್ ಎತ್ತಿರುವ ವಿಚಾರ ಗಂಭೀರವಾಗಿದ್ದು, ತನಿಖೆ ನಡೆಸಬೇಕು ಎಂದು ಅವರು ತಮ್ಮ ಆಗ್ರವನ್ನು ಪುನರುಚ್ಚರಿಸಿದ್ದಾರೆ.

ಕೃಪೆ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...