Homeಮುಖಪುಟಕೇರಳದಲ್ಲಿ ಸದ್ದು ಮಾಡಿದ 'MEC-7' : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

- Advertisement -
- Advertisement -

ಉತ್ತರ ಕೇರಳದಲ್ಲಿ ಹಲವು ಶಾಖೆಗಳನ್ನು ಹೊಂದಿರುವ ದೈಹಿಕ ವ್ಯಾಯಾಮ ಕ್ಲಬ್ ‘MEC-7’ ಪ್ರಸ್ತುತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಕೇರಳದ ಆಡಳಿತಾರೂಢ ಸಿಪಿಐ(ಎಂ)ನ ತಳಿಪರಂಬ ಪ್ರದೇಶ ಸಮಿತಿ ಸಮ್ಮೇಳನದಲ್ಲಿ ಪಕ್ಷದ ಕೋಝಿಕೋಡ್ ಜಿಲ್ಲಾ ಕಾರ್ಯದರ್ಶಿ ಪಿ.ಮೋಹನನ್ ಅವರು MEC-7 ಜಮಾತ್-ಎ-ಇಸ್ಲಾಮಿ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಪರ್ಕ ಹೊಂದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು. ಆ ಬಳಿಕ MEC-7 ಸುತ್ತ ಚರ್ಚೆ ಹೆಚ್ಚಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ (ಎಪಿ ವಿಭಾಗ) ಕೂಡ MEC-7 ವಿರುದ್ದ ಹೇಳಿಕೆ ನೀಡಿದೆ.

“MEC-7 ಹಿಂದೆ ದೇಶ ವಿರೋಧಿ ಶಕ್ತಿಗಳಿವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಆರೋಪಿಸಿದ್ದು, ರಾಜ್ಯ ಸರ್ಕಾರ ಈ ಗುಂಪಿನ ಕುರಿತು ಕೇಂದ್ರ ಸರ್ಕಾರಕ್ಕೆ ಏಕೆ ವರದಿ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ. MEC-7 ಜಮಾತೆ ಇಸ್ಲಾಮಿಯೊಂದಿಗೆ ಸಂಪರ್ಕ ಹೊಂದಿದೆ ಎಂದು ಆರೋಪಿಸಿರುವ ಸಮಸ್ತ (ಎಪಿ ವಿಭಾಗ) ಸುನ್ನಿಗಳು ಅದರಿಂದ ದೂರ ಇರುವಂತೆ ಎಚ್ಚರಿಕೆ ನೀಡಿದೆ. ಇತರ ಗುಂಪುಗಳು ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿವೆ. ಈ ಬೆನ್ನಲ್ಲೇ ಕೇರಳ ಪೊಲೀಸ್ ಇಲಾಖೆಯ ವಿಶೇಷ ವಿಭಾಗ ಈ ಕ್ಲಬ್ ಬಗ್ಗೆ ತನಿಖೆ ಪ್ರಾರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ.

ತಮ್ಮ ವಿರುದ್ದದ ಎಲ್ಲಾ ಆರೋಪಗಳನ್ನು MEC-7 ತಂಡ ಅಲ್ಲಗಳೆದಿದ್ದು, “ದೈಹಿಕ ವ್ಯಾಯಾಮಗಳನ್ನು ಮಾಡಿಸುವ ಮೂಲಕ ಆರೋಗ್ಯ ವೃದ್ದಿಯ ಕೆಲಸ ಮಾಡಿಸುವುದು ಮಾತ್ರ ನಮ್ಮ ಗುರಿ” ಎಂದಿದೆ.

“MEC-7 ಎಲ್ಲರಿಗೂ ಮುಕ್ತ”

MEC-7 ಎಂದು ಕರೆಯಲ್ಪಡುವ ‘ಮಲ್ಟಿ-ಎಕ್ಸರ್ಸೈಸ್ ಕಾಂಬಿನೇಶನ್’ (Multi-Exercise Combination) ಎಂಬ ತಂಡವನ್ನು ಮಾಜಿ ಮಿಲಿಟರಿ ಅಧಿಕಾರಿ ಸಲಾಹುದ್ದೀನ್. ಪಿ 2012ರಲ್ಲಿ ಸ್ಥಾಪಿಸಿದರು. ಇದು ಯೋಗ, ಧ್ಯಾನ ಸೇರಿದಂತೆ ಏಳು ಪ್ರಕಾರದ ವ್ಯಾಯಾಮಗಳನ್ನು ಸುಮಾರು 21-25 ನಿಮಿಷಗಳ ಕಾಲ ಮಾಡುವ ಗುಂಪಾಗಿದೆ. ಆರಂಭದ ಹತ್ತು ವರ್ಷಗಳ ಕಾಲ ಕೊಂಡೊಟ್ಟಿಯಲ್ಲಿ ಒಂದು ಗುಂಪಿಗೆ ಮಾತ್ರ MEC-7 ಸೀಮಿತವಾಗಿತ್ತು. ನಂತರ, ಇದು ಕೇರಳದ ವಿವಿಧ ಭಾಗಗಳಿಗೆ ವಿಸ್ತರಿಸಿತು.

“MEC-7 ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದೆ ಎನ್ನುವುದು ಅದರ ವಿರುದ್ದ ಆರೋಪಗಳು ಕೇಳಿ ಬರಲು ಕಾರಣ. ಆದರೆ, ನಮ್ಮ ತಂಡ ಧರ್ಮ, ಜಾತಿ, ಲಿಂಗ ರಹಿತವಾಗಿ ಆಸಕ್ತಯುಳ್ಳ ಎಲ್ಲರಿಗೂ ಮುಕ್ತವಾಗಿದೆ” ಎಂದು MEC-7 ಕ್ಲಬ್ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಸಿಪಿಐ(ಎಂ), ಆರ್‌ಎಸ್‌ಎಸ್‌ ಸೇರಿದಂತೆ ಎಲ್ಲಾ ಹಿನ್ನೆಲೆಯ ಜನರು ನಮ್ಮ ವ್ಯಾಯಾಮ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ನಾವು ಯಾವುದೇ ರಾಜಕೀಯ ಚರ್ಚೆ ನಡೆಸುವುದಿಲ್ಲ. ನಮ್ಮ ಗುರಿ ಕೇವಲ ಆರೋಗ್ಯದ ವಿಚಾರ ಮಾತ್ರ” ಎಂದು ಕೋಝಿಕ್ಕೋಡ್‌ನ ಸ್ಥಳೀಯ ನಿವಾಸಿ ಎಸ್‌.ಪಿ ರಶೀದ್ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ರಶೀದ್ ಒಂಬತ್ತು ತಿಂಗಳ ಹಿಂದೆ MEC-7ಗೆ ಸೇರಿಕೊಂಡಿದ್ದು, ಪ್ರಸ್ತುತ ಅವರು ವಾಸಿಸುತ್ತಿರುವ ಚೆರುವನ್ನೂರಿನಲ್ಲಿ ಇತರರಿಗೆ ತರಬೇತಿ ನೀಡುತ್ತಿದ್ದಾರೆ.

“ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನೀವು MEC-7ಗೆ ಸೇರಬಹುದು. ಯಾರೂ ಬರುವಂತೆ ಒತ್ತಡ ಹೇರುವುದಿಲ್ಲ. ನಿಮಗೆ ಕಷ್ಟವಾದರೆ ಬರುವುದನ್ನು ನಿಲ್ಲಿಸಬಹುದು. ಅಂತಿಮವಾಗಿ, ನೀವು ಆರೋಗ್ಯಕರ ಜೀವನವನ್ನು ಬಯಸುತ್ತೀರೋ ಇಲ್ಲವೋ ಎಂಬುವುದು ನಿಮ್ಮ ಆಯ್ಕೆಯಾಗಿದೆ. ನಮ್ಮ ತಂಡ ಸೇರಲು ಯಾವುದೇ ಪ್ರವೇಶ ಶುಲ್ಕ ಮತ್ತು ಪ್ರಕ್ರಿಯೆ ಇಲ್ಲ” ಎಂದು ರಶೀದ್ ಹೇಳಿದ್ದಾರೆ.

“ಕೆಲವು ತಿಂಗಳ ತರಬೇತಿಯ ನಂತರ, MEC-7 ತುಂಬಾ ಪ್ರಯೋಜನಕಾರಿ ಎಂದು ನಾನು ಕಂಡುಕೊಂಡೆ. ಹಾಗಾಗಿ, ನಾನು ಕೋಝಿಕ್ಕೋಡ್‌ನಲ್ಲಿರುವ ನನ್ನ ಪ್ರದೇಶದ ಬಳಿ ಒಂದು ಗುಂಪನ್ನು ಪ್ರಾರಂಭಿಸಿದೆ. ಈಗ ನನ್ನೊಂದಿಗೆ ಸುಮಾರು 100 ಮಂದಿ ವ್ಯಾಯಾಮದಲ್ಲಿ ಭಾಗವಹಿಸುತ್ತಿದ್ದಾರೆ” ಎಂದು ರಶೀದ್ ತಿಳಿಸಿದ್ದಾರೆ.

“ಸಿಪಿಐ(ಎಂ) ಮುಸ್ಲಿಮರ ವಿರುದ್ಧ ಪೂರ್ವಗ್ರಹ ಪೀಡಿತವಾಗಿದೆ”

ಸಿಪಿಐ(ಎಂ) ನಾಯಕ ಮೋಹನನ್ ಅವರ MEC-7 ಕುರಿತ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಕೂಟಗಳ ಬಗ್ಗೆ ಸಿಪಿಐ(ಎಂ) ಪೂರ್ವಾಗ್ರಹ ಪೀಡಿತ ದೃಷ್ಟಿಕೋನವನ್ನು ಪ್ರಸಾರ ಮಾಡುವ ಮೂಲಕ ಸಂಘ ಪರಿವಾರದ ಸಂಘಟನೆಗಳ ಕಾರ್ಯಸೂಚಿಗೆ ನೆರವು ನೀಡುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

“ರಾಜ್ಯದಲ್ಲಿ ಆರ್‌ಎಸ್‌ಎಸ್‌ನ ಶಾಖೆಗಳು ನಿರಾತಂಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಅದರ ಬಗ್ಗೆ ಯಾವುದೇ ತಕರಾರು ಇಲ್ಲದಿರುವಾಗ ವ್ಯಾಯಾಮದ ಗುಂಪೊಂದು ಕೆಂಗಣ್ಣಿಗೆ ಗುರಿಯಾಗಿರುವುದು ಏಕೆ? ಎಂದು ರಾಜ್ಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಅಭಿನ್ ವರ್ಕಿ ಪ್ರಶ್ನಿಸಿದ್ದಾರೆ. ಡಿಸೆಂಬರ್ 17 ರಂದು ಮಲಪ್ಪುರಂನಲ್ಲಿ MEC-7 ಗುಂಪಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿನ್ ವರ್ಕಿ, “MEC-7 ವಿರುದ್ದ ವಿವಾದ ಅನಗತ್ಯ” ಎಂದಿದ್ದಾರೆ.

ಇದಕ್ಕೂ ಎರಡು ದಿನಗಳ ಮೊದಲು, ಡಿಸೆಂಬರ್ 15 ರಂದು, ಕಾಂಗ್ರೆಸ್‌ನ ಪಾಲಕ್ಕಾಡ್ ಸಂಸದ ವಿಕೆ ಶ್ರೀಕಂದನ್ MEC-7 ಪಟ್ಟಾಂಬಿ ಗುಂಪನ್ನು ಉದ್ಘಾಟಿಸಿ ಬೆಂಬಲ ವ್ಯಕ್ತಪಡಿಸಿದ್ದರು.

ಸಿಪಿಐ(ಎಂ)ನ ಮೋಹನನ್ ಅವರ ಹೇಳಿಕೆಯನ್ನು ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್‌) ರಾಜ್ಯ ಉಪಾಧ್ಯಕ್ಷ ಸತ್ತಾರ್ ಪಂದಲ್ಲೂರ್ ವಿರೋಧಿಸಿದ್ದು, “ಮುಸ್ಲಿಮರು ಅಥವಾ ಮುಸ್ಲಿಮರ ಗುಂಪುಗಳನ್ನು ಅನುಮಾನದ ಕಣ್ಣಿನಿಂದ ನೋಡುವುದು ಸ್ವೀಕಾರ್ಹವಲ್ಲ” ಎಂದಿದ್ದಾರೆ.

ಸಿಪಿಐ(ಎಂ) ತೊರೆದು ಕಾಂಗ್ರೆಸ್‌ ಸೇರಿದ ಮುಸ್ಲಿಂ ಮುಖಂಡ

ಅಲ್ಪಸಂಖ್ಯಾತರ ಮೇಲೆ ಅನುಮಾನ ವ್ಯಕ್ತಪಡಿಸಿ ಮೋಹನನ್ ಹೇಳಿಕೆ ನೀಡಿದ್ದಾರೆ ಎಂದಿರುವ ಸಿಪಿಐ(ಎಂ) ನಡುವನ್ನೂರು ಶಾಖೆಯ ಕಾರ್ಯದರ್ಶಿ ಅಕ್ಬರ್ ಅಲಿ ಅವರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಕ್ಬರ್ ಅವರು ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನ ಮಾಜಿ ನಾಯಕರೂ ಆಗಿದ್ದರು.

ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿದ್ದು, “ಸಿಪಿಐ(ಎಂ) MEC-7 ಅನ್ನು ವಿರೋಧಿಸುವುದಿಲ್ಲ” ಎಂದು ಹೇಳಿದ್ದಾರೆ.

“ಜಮಾತ್-ಎ-ಇಸ್ಲಾಮಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಮತ್ತು ಸಂಘ ಪರಿವಾರ ಸೇರಿದಂತೆ ಧಾರ್ಮಿಕ ದ್ವೇಷವನ್ನು ಹರಡುವ ಗುಂಪುಗಳಿವೆ. ಈ ಸಂಸ್ಥೆಗಳು ತಮ್ಮ ಕೋಮುವಾದಿ ಕಾರ್ಯಸೂಚಿಯನ್ನು ಉತ್ತೇಜಿಸಲು MEC-7ನಂತಹ ಗುಂಪುಗಳಿಗೆ ನುಸುಳುತ್ತವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು. ನನ್ನ ಹೇಳಿಕೆಯ ಉದ್ದೇಶವೂ ಇದೇ ಆಗಿತ್ತು” ಎಂದು ಮೋಹನನ್ ಅವರು ಡಿಸೆಂಬರ್ 15ರಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಮಸ್ತ (ಎಪಿ ವಿಭಾಗ) ಕೂಡ ತನ್ನ ಹೇಳಿಕೆಯನ್ನು ಬದಲಿಸಿದ್ದು, ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸುವ ಉದ್ದೇಶವಿಲ್ಲ ಎಂದು ಸಮರ್ಥಿಸಿಕೊಂಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಮಸ್ತ (ಎಪಿ ವಿಭಾಗ) ನಾಯಕ ಅಬ್ದುಲ್ ಹಕ್ಕಿಂ ಅಝ್ಹರಿ, “ನಮ್ಮ ಸಂಘಟನೆ ಮಹಿಳೆಯರ ದೇಹದ ಅಸಭ್ಯ ಪ್ರದರ್ಶನವನ್ನು ಮಾತ್ರ ವಿರೋಧಿಸಿದೆ” ಎಂದು ಹೇಳಿದ್ದಾರೆ.

ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಸುರೇಂದ್ರನ್, “ಸಿಪಿಐ(ಎಂ) ಧಾರ್ಮಿಕ ಉಗ್ರಗಾಮಿಗಳಿಗೆ ಹೆದರಿ ತನ್ನ ನಿಲುವು ಬದಲಿಸಿದೆ” ಎಂದು ಹೇಳಿದ್ದಾರೆ. ಮೋಹನನ್ ಎತ್ತಿರುವ ವಿಚಾರ ಗಂಭೀರವಾಗಿದ್ದು, ತನಿಖೆ ನಡೆಸಬೇಕು ಎಂದು ಅವರು ತಮ್ಮ ಆಗ್ರವನ್ನು ಪುನರುಚ್ಚರಿಸಿದ್ದಾರೆ.

ಕೃಪೆ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...