Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...