Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...