Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...