Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...