Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...