Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...