Homeಮುಖಪುಟನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ನಾಳೆ ಬೆಂಗಳೂರಿಗೆ ಮೇದಾ ಪಾಟ್ಕರ್‌‌ ಭೇಟಿ; ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿ

ಮೇಕೆದಾಟು ಕುರಿತು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಲಿದ್ದಾರೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಜನವರಿ 14ರಂದು (ನಾಳೆ) ಬೆಂಗಳೂರಿಗೆ ಬರಲಿದ್ದು, ಐಟಿಐ ಕಾರ್ಮಿಕರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ಅವರು ಆದಿವಾಸಿ, ದಲಿತ, ರೈತ ಮತ್ತು ಕಾರ್ಮಿಕ ಚಳವಳಿಗಳ ದಿಟ್ಟ ದನಿ. ನರ್ಮದಾ ಬಚಾವೋ ಆಂದೋಲನ ಮತ್ತು ನ್ಯಾಷನಲ್ ಅಲಯನ್ಸ್ ಫಾರ್ ಪೀಪಲ್ಸ್ ಮೂವ್ಮೆಂಟ್ ಸಂಸ್ಥಾಪಕರೂ ಹೌದು. ಮೇಧಾ ಪಾಟ್ಕರ್ ಅವರು ಸತತವಾಗಿ ಕಾರ್ಮಿಕರ ಹೋರಾಟಗಳಿಗೆ ಬೆಂಬಲವನ್ನು ಸೂಚಿಸುತ್ತಿದ್ದು, ಅವರು ಐಟಿಐ ಕಾರ್ಮಿಕರನ್ನು ಭೇಟಿ ಮಾಡಿ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಲಿದ್ದಾರೆ.

ಕಾನೂನು ಬಾಹಿರವಾಗಿ ವಜಾಗೊಳಿಸಿರುವ ಕುರಿತು ಐಟಿಐ ಕಾರ್ಮಿಕರು 45ನೇ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರೊಂದಿಗೆ ತಮ್ಮ ಬೆಂಬಲ ಸೂಚಿಸಲು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಆಗಮಿಸಲಿದ್ದಾರೆ ಎಂದು ಎಐಸಿಸಿಟಿಯು ತಿಳಿಸಿದೆ.

1ನೇ ಡಿಸೆಂಬರ್ 2021ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‍ನಲ್ಲಿ 5-30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 80 ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆ ಕಟ್ಟಿ ತಮ್ಮ ಕಾನೂನು ಬದ್ಧ ಹಕ್ಕುಗಳಿಗೆ ಒತ್ತಾಯ ಮಾಡಿದ್ದರೆಂಬ ಒಂದೇ ಒಂದು ಕಾರಣಕ್ಕೆ ಐಟಿಐ ಆಡಳಿತ ಮಂಡಳಿಯು ಕೆಲಸ ನಿರಾಕರಿಸಿದೆ.

ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಮುಖ್ಯವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಮಿಕರು ಈ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಗಡಿಗಳಿಗೂ ಆನ್-ಸೈಟ್ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‍ಗಳು ಮತ್ತು ಫೇಸ್‍ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗಿಯಾಗಿದ್ದರು.

ಸುದೀರ್ಘ ವರ್ಷಗಳ ಸೇವೆಯ ಹೊರತಾಗಿಯೂ, ಕಾರ್ಮಿಕರನ್ನು “ಗುತ್ತಿಗೆ ಕಾರ್ಮಿಕರು” ಎಂದು ಬಿಂಬಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ನಿರಾಕರಿಸಲಾಗಿದೆ. ಅವರಲ್ಲಿ ಹೆಚ್ಚಿನವರು ದಲಿತರು ಮತ್ತು ಮಹಿಳೆಯರಾಗಿದ್ದಾರೆ. ಕಾರ್ಮಿಕ ಇಲಾಖೆಯು ನಡೆಸಿದ ಸಂಧಾನ ಪ್ರಕ್ರಿಯೆಯಲ್ಲಿ, ಪ್ರಾದೇಶಿಕ ಕಾರ್ಮಿಕ ಆಯುಕ್ತರು, ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‍ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ತಮ್ಮನ್ನು ಖಾಯಂಗೊಳಿಸುವಂತೆ, ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲಾಗದ ಆಡಳಿತ ಮಂಡಳಿಯು, ಕಾರ್ಮಿಕ ಆಯುಕ್ತರ ಸೂಚನೆಯನ್ನು ಪಾಲಿಸಲು ವಿಫಲವಾಗಿದೆ ಎಂದು ಕಾರ್ಮಿಕ ಮುಖಂಡರು ದೂರಿದ್ದಾರೆ.

ಮೇಕೆದಾಟು ಉಳಿವಿಗಾಗಿ ಪತ್ರಿಕಾಗೋಷ್ಠಿ: ಮೇಕೆದಾಟು ಯೋಜನೆಯನ್ನ ಕೈಬಿಟ್ಟು ಮೇಕೆದಾಟು ಪರಿಸರವನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ಸಮಿತಿ ಜ.14ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌‌ನಲ್ಲಿ ಹಮ್ಮಿಕೊಂಡಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮೇದಾ ಪಾಟ್ಕರ್‌ ಪಾಲ್ಗೊಳ್ಳಲಿದ್ದಾರೆ. ನಟ ಚೇತನ್‌ ಅಹಿಂಸಾ, ಪರಿಸರ ಪತ್ರಕರ್ತರಾದ ನಾಗೇಶ್‌ ಹೆಗಡೆ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನದಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...