Homeಮುಖಪುಟಮೇದಕ್ ಹಿಂಸಾಚಾರ: ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ 9 ಮಂದಿಯ ಬಂಧನ

ಮೇದಕ್ ಹಿಂಸಾಚಾರ: ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ 9 ಮಂದಿಯ ಬಂಧನ

- Advertisement -
- Advertisement -

ಮೇದಕ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬಿಜೆಪಿ ಮೇದಕ್ ಜಿಲ್ಲಾಧ್ಯಕ್ಷ ಗದ್ದಂ ಶ್ರೀನಿವಾಸ್, ಮೇದಕ್ ಟೌನ್ ಅಧ್ಯಕ್ಷ ಎಂ ನಯಮ್ ಪ್ರಸಾದ್ ಮತ್ತು ಕೋಮು ಘರ್ಷಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಏಳು ಮಂದಿ ಬಂಧಿತರು.

ಮೇದಕ್ ಪಟ್ಟಣದ ಮಿನ್‌ಹಾಜುನ್ ಉಲೂಮ್ ಮದ್ರಸದ ಆಡಳಿತ ಸಮಿತಿಯು ಜಾನುವಾರೊಂದನ್ನು ಖರೀದಿಸಿತ್ತು. ಜೂನ್‌ 15ರಂದು ಸಂಜೆ ಅದನ್ನು ಮದ್ರಸದ ಆವರಣದೊಳಗೆ ತಂದ ಬೆನ್ನಲ್ಲೇ, ಅಲ್ಲಿ ಜಮಾಯಿಸಿದ ಸಂಘ ಪರಿವಾರದ ಸಂಘಟನೆಯೊಂದರ ಸದಸ್ಯರು, ಜಾನುವಾರು ಹತ್ಯೆ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚುದುರಿಸಿದ್ದರು.

ಒಂದು ಗಂಟೆಯ ಬಳಿಕ ಮತ್ತೆ ಸ್ಥಳಕ್ಕೆ ಆಗಮಿಸಿದ್ದ ಗುಂಪು ಮದ್ರಸಾ ಮೇಲೆ ದಾಳಿ ನಡೆಸಿತ್ತು. ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ.

ಮದ್ರಸಾ ಮೇಲಿನ ದಾಳಿಯ ನಂತರ, ಗುಂಪು ಘರ್ಷಣೆಯಲ್ಲಿ ಗಾಯಗೊಂಡ ಜನರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಹಿಂದೂ ವಾಹಿನಿ ಮತ್ತು ಬಿಜೆಪಿ ಸದಸ್ಯರು ಮೇದಕ್ ಪೊಲೀಸ್ ಠಾಣೆ ಬಳಿಯ ಆಸ್ಪತ್ರೆಯನ್ನು ಸುತ್ತುವರಿದು ದಾಂಧಲೆ ನಡೆಸಿದ್ದಾರೆ ಎಂದು ಕಾರವಾನ್ ಶಾಸಕ ಕೌಸರ್ ಮೊಹಿಯುದ್ದೀನ್ ಹೇಳಿದ್ದಾರೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಾ.ನವೀನ್, “ಘರ್ಷಣೆಯ ನಂತರ ಮಾನವೀಯತೆಯ ಆಧಾರದಲ್ಲಿ ಗಾಯಗೊಂಡ ಜನರಿಗೆ ನಾವು ಚಿಕಿತ್ಸೆ ನೀಡುತ್ತಿದ್ದೆವು. ಈ ವೇಳೆ ಗುಂಪೊಂದು ದಾಳಿ ನಡೆಸಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಗುಂಪು ವೈದ್ಯರ ಕಾರನ್ನೂ ಜಖಂಗೊಳಿಸಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಪಟ್ಟಣದಾದ್ಯಂತ ಹಬ್ಬಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘರ್ಷಣೆಯ ವೇಳೆ ಬಿಜೆಪಿ ಮೇದಕ್ ಜಿಲ್ಲಾಧ್ಯಕ್ಷ ಗದ್ದಂ ಶ್ರೀನಿವಾಸ್ ಶಸ್ತ್ರಾಸ್ತ್ರದೊಂರಿಗೆ ಕಾಣಿಸಿಕೊಂಡಿದ್ದ. ಅಲ್ಲದೆ ಎರಡು ಗುಂಪುಗಳು ಘರ್ಷಣೆಯಲ್ಲಿ ಭಾಗಿಯಾಗಿವೆ. ಹಾಗಾಗಿ ಎರಡೂ ಕಡೆಯವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಬಿಜೆಪಿ ಸದಸ್ಯರು ಮತ್ತು ಮುಸ್ಲಿಂ ಸಮುದಾಯದ ಜನರನ್ನು ಬಂಧಿಸಿದ್ದೇವೆ. ಎರಡೂ ಗುಂಪಿನ ಇಬ್ಬರಂತೆ ನಾಲ್ವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಿ ಕಾಪಾಡಲು ಕಾಮರೆಡ್ಡಿ, ಸಿದ್ದಿಪೇಟೆಯಿಂದ ಹೆಚ್ಚುವರಿ ಪಡೆಯನ್ನು ನಿಯೋಜಿಸಿದ್ದೇವೆ” ಎಂದು ಮೇದಕ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಮಹೇಂದರ್ ಮಾಹಿತಿ ನೀಡಿದ್ದಾರೆ.

ಶಾಸಕ ರಾಜಾ ಸಿಂಗ್ ವಶಕ್ಕೆ

ಮುನ್ನೆಚ್ಚರಿಕಾ ಕ್ರಮವಾಗಿ ಹೈದರಾಬಾದ್‌ನ ಗೋಶಮಹಲ್ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಶಂಶಾಬಾದ್‌ನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಾ ಸಿಂಗ್ ಹಿಂಸಾಚಾರ ನಡೆದಿರುವ ಮೇದಕ್‌ಗೆ ಭೇಟಿ ನೀಡಲು ಮುಂದಾಗಿದ್ದರು.

ಇದನ್ನೂ ಓದಿ : ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...