Homeಮುಖಪುಟಮೇಧಾ ಪಾಟ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಮಾಣವನ್ನು ಜುಲೈ 1ಕ್ಕೆ ಕಾಯ್ದಿರಿಸಿದ ಕೋರ್ಟ್‌

ಮೇಧಾ ಪಾಟ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಮಾಣವನ್ನು ಜುಲೈ 1ಕ್ಕೆ ಕಾಯ್ದಿರಿಸಿದ ಕೋರ್ಟ್‌

- Advertisement -
- Advertisement -

ಗುಜರಾತ್‌ನಲ್ಲಿ ಎನ್‌ಜಿಒ ಮುಖ್ಯಸ್ಥರಾಗಿದ್ದಾಗ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ದೆಹಲಿಯ ನ್ಯಾಯಾಲಯವು ಜುಲೈ 1 ಕ್ಕೆ ಕಾಯ್ದಿರಿಸಿದೆ.

ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಸಂತ್ರಸ್ತರ ಪರಿಣಾಮದ ವರದಿಯನ್ನು (ವಿಐಆರ್) ಸಲ್ಲಿಸಿರುವುದನ್ನು ಗಮನಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಆದೇಶವನ್ನು ಕಾಯ್ದಿರಿಸಿದ್ದಾರೆ.

ಆರೋಪಿಗೆ ಶಿಕ್ಷೆಯಾದ ನಂತರ ಸಂತ್ರಸ್ತರು ಅನುಭವಿಸಿದ ನಷ್ಟದ ಪ್ರಮಾಣವನ್ನು ನಿರ್ಣಯಿಸಲು ವರದಿಯನ್ನು ಸಿದ್ಧಪಡಿಸಲಾಗುತ್ತದೆ. ಅಪರಾಧವು ಗರಿಷ್ಠ ಎರಡು ವರ್ಷಗಳವರೆಗೆ ಸರಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ಒಳಗೊಳ್ಳುತ್ತದೆ.

ಈ ಹಿಂದೆ ಮೇ 24 ರಂದು, ವಿಕೆ ಸಕ್ಸೇನಾ ಅವರನ್ನು “ಹೇಡಿ” ಎಂದು ಕರೆದ ಮೇಧಾ ಪಾಟ್ಕರ್ ಅವರ ಹೇಳಿಕೆಗಳು ಮತ್ತು ಹವಾಲಾ ವಹಿವಾಟಿನಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವುದು ಮಾನಹಾನಿಕರ ಮಾತ್ರವಲ್ಲದೆ, ಅವರ ಬಗ್ಗೆ ನಕಾರಾತ್ಮಕ ಗ್ರಹಿಕೆಗಳನ್ನು ಹುಟ್ಟುಹಾಕಲು ರಚಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿತ್ತು.

ಅಲ್ಲದೆ, ದೂರುದಾರರು ಗುಜರಾತ್‌ನ ಜನರು ಮತ್ತು ಅವರ ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನವಿಟ್ಟಿದ್ದಾರೆ ಎಂಬ ಆರೋಪವು ಅವರ ಸಮಗ್ರತೆ ಮತ್ತು ಸಾರ್ವಜನಿಕ ಸೇವೆಯ ಮೇಲಿನ ನೇರ ದಾಳಿಯಾಗಿದೆ ಎಂದು ಅದು ಹೇಳಿದೆ. ಮೇ 30 ರಂದು ಶಿಕ್ಷೆಯ ಕುರಿತು ವಾದಗಳು ಪೂರ್ಣಗೊಂಡಿವೆ.

ಮೇಧಾ ಪಾಟ್ಕರ್ ಮತ್ತು ವಿಕೆ ಸಕ್ಸೇನಾ ಅವರು ತಮ್ಮ ಮತ್ತು ನರ್ಮದಾ ಬಚಾವೋ ಆಂದೋಲನ (ಎನ್‌ಬಿಎ) ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಅವರ ವಿರುದ್ಧ ಮೊಕದ್ದಮೆ ಹೂಡಿದ ನಂತರ 2000 ರಿಂದ ಕಾನೂನು ಕು ಣಿಕೆಯಲ್ಲಿ ಸಿಲುಕಿದ್ದಾರೆ.

ಆಗ ಅಹಮದಾಬಾದ್ ಮೂಲದ ‘ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್’ ಹೆಸರಿನ ಎನ್‌ಜಿಒ ಮುಖ್ಯಸ್ಥರಾಗಿದ್ದ ವಿಕೆ ಸಕ್ಸೇನಾ ಅವರು ಟಿವಿ ಚಾನೆಲ್‌ನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಮಾನಹಾನಿಕರ ಪತ್ರಿಕಾ ಹೇಳಿಕೆಯನ್ನು ನೀಡಿದ್ದಕ್ಕಾಗಿ ಪಾಟ್ಕರ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು.

ಇದನ್ನೂ ಓದಿ; ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಅಮಾನತು, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...