Homeಮುಖಪುಟಮಾನನಷ್ಟ ಮೊಕದ್ದಮೆ : ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಾನನಷ್ಟ ಮೊಕದ್ದಮೆ : ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮತ್ತು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿ ದೆಹಲಿಯ ನ್ಯಾಯಾಲಯ ಆದೇಶಿಸಿದೆ.

ದೆಹಲಿಯ ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮ್ ಅವರು ಪಾಟ್ಕರ್ ಅವರಿಗೆ ಶಿಕ್ಷೆ ಪ್ರಕಟಿಸಿದ್ದು, ವಿ.ಕೆ ಸಕ್ಸೇನಾಗೆ 10 ಲಕ್ಷ ರೂಪಾಯಿ ಪಾವತಿಸುವಂತೆಯೂ ಸೂಚಿಸಿದ್ದಾರೆ.

ಆದರೆ, ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389 (3) ರ ಅಡಿಯಲ್ಲಿ ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಆಗಸ್ಟ್ 1 ರವರೆಗೆ ತಡೆ ಹಿಡಿಯಲಾಗಿದೆ.

ಷರತ್ತಿನ ಮೇಲೆ ತನ್ನನ್ನು ಬಿಡುಗಡೆ ಮಾಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು, “ವಾಸ್ತವಾಂಶಗಳು, ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ, ನಾನು ಹೆಚ್ಚಿನ ಶಿಕ್ಷೆ ನೀಡಲು ಭಯಸುವುದಿಲ್ಲ” ಎಂದಿದ್ದಾರೆ.

ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಪಾಟ್ಕರ್, “ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾವು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಕಳೆದ ಮೇ 24ರಂದು ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 500ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿದ್ದರು.

2001ರಲ್ಲಿ ಸಕ್ಸೇನಾ ಪಾಟ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಇದನ್ನೂ ಓದಿ : ಮಾನನಷ್ಟ ಮೊಕದ್ದಮೆ: ₹50 ಲಕ್ಷ ಪಾವತಿಸುವಂತೆ ಟಿಎಂಸಿ ಸಂಸದನಿಗೆ ದೆಹಲಿ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...