Homeಮುಖಪುಟಮಾನನಷ್ಟ ಮೊಕದ್ದಮೆ : ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಾನನಷ್ಟ ಮೊಕದ್ದಮೆ : ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮತ್ತು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿ ದೆಹಲಿಯ ನ್ಯಾಯಾಲಯ ಆದೇಶಿಸಿದೆ.

ದೆಹಲಿಯ ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮ್ ಅವರು ಪಾಟ್ಕರ್ ಅವರಿಗೆ ಶಿಕ್ಷೆ ಪ್ರಕಟಿಸಿದ್ದು, ವಿ.ಕೆ ಸಕ್ಸೇನಾಗೆ 10 ಲಕ್ಷ ರೂಪಾಯಿ ಪಾವತಿಸುವಂತೆಯೂ ಸೂಚಿಸಿದ್ದಾರೆ.

ಆದರೆ, ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389 (3) ರ ಅಡಿಯಲ್ಲಿ ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಆಗಸ್ಟ್ 1 ರವರೆಗೆ ತಡೆ ಹಿಡಿಯಲಾಗಿದೆ.

ಷರತ್ತಿನ ಮೇಲೆ ತನ್ನನ್ನು ಬಿಡುಗಡೆ ಮಾಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು, “ವಾಸ್ತವಾಂಶಗಳು, ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ, ನಾನು ಹೆಚ್ಚಿನ ಶಿಕ್ಷೆ ನೀಡಲು ಭಯಸುವುದಿಲ್ಲ” ಎಂದಿದ್ದಾರೆ.

ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಪಾಟ್ಕರ್, “ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾವು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಕಳೆದ ಮೇ 24ರಂದು ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 500ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿದ್ದರು.

2001ರಲ್ಲಿ ಸಕ್ಸೇನಾ ಪಾಟ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಇದನ್ನೂ ಓದಿ : ಮಾನನಷ್ಟ ಮೊಕದ್ದಮೆ: ₹50 ಲಕ್ಷ ಪಾವತಿಸುವಂತೆ ಟಿಎಂಸಿ ಸಂಸದನಿಗೆ ದೆಹಲಿ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...