Homeಕರ್ನಾಟಕಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‌ (ಎಐಸಿಸಿಟಿಯು), ಫ್ರೈಡೇಸ್ ಫಾರ್ ಫ್ಯೂಚರ್-ಕರ್ನಾಟಕ (ಎಫ್‍ಎಫ್‍ಎಫ್-ಕೆ) ಹಾಗೂ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಹೊನ್ನಾವರ ಬಂದರು ಯೋಜನೆ ಕುರಿತ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೊನ್ನಾವರ ಬಂದರು ಯೋಜನೆ ವಿರೋಧಿಸಿ ಹೋರಾಟ ಮಾಡುತ್ತಿದ್ದ ಮೀನುಗಾರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಕಾಳ ವೈದ್ಯ ಯಾವುದೇ ಕಾರಣಕ್ಕೂ ಬಂದರು ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈಗ ಅವರು ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆ ಮಾಡಿದ್ದಾರೆ. ಆದರೆ, ಈ ಯೋಜನೆಯನ್ನು ನಿಲ್ಲಿಸುವ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ? ಜನರ ಬದುಕಿನ ಹಕ್ಕನ್ನು ಕಸಿದುಕೊಳ್ಳುವ ಯೋಜನೆಗಳ ವಿರುದ್ಧ ಧ್ವನಿ ಎತ್ತಿದರೆ ನಮ್ಮನ್ನು ಅಭಿವೃದ್ಧಿ ವಿರೋಧಿಗಳು, ನಗರ ನಕ್ಸಲರು ಎನ್ನುತ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಬದುಕು ಕಳೆದುಕೊಳ್ಳುತ್ತಿದ್ದೇವೆ. ಹೊನ್ನಾವರ ಬಂದರು ಯೋಜನೆ ಇದಕ್ಕೆ ಉತ್ತಮ ಉದಾಹರಣೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಈ ಯೋಜನೆಗೆ ಅಗತ್ಯವಿರುವ ಪರಿಸರ ಇಲಾಖೆಯ ಅನುಮತಿಯನ್ನು ಸಮರ್ಪಕವಾಗಿ ಪಡೆಯಲಾಗಿಲ್ಲ. ಅಲ್ಲದೇ, ಈ ಯೋಜನೆಯ ಅನುಷ್ಠಾನದಿಂದ ಸಾಮಾಜಿಕವಾಗಿ ಹಾಗೂ ಪರಿಸರದ ಮೇಲೆ ಆಗುವಂತಹ ಪರಿಣಾಮಗಳ ಕುರಿತು ವೈಜ್ಞಾನಿಕ ಮೌಲ್ಯಮಾಪನ ಮಾಡಿಲ್ಲ. ರಸ್ತೆ ನಿರ್ಮಾಣಕ್ಕಾಗಿ ನಡೆದ ಭೂಮಾಪನ ಕ್ರಿಯೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿ, 45 ಜನರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ ಎಂದರು.

ಪೊಲೀಸರ ದೌರ್ಜನ್ಯ ಖಂಡಿಸಿ ಸುಮಾರು 40 ಮಂದಿ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಒಂದು ದಶಕದಿಂದ ಬಂದರು ವಿರೋಧಿಸಿ ಹೋರಾಟ ನಡೆಯುತ್ತಿದೆ. ಮೀನು ಒಣಗಿಸುವ ಕಟ್ಟಡಗಳನ್ನು ನೆಲಸಮ ಮಾಡಿದ್ದಾರೆ. ವಿಶೇಷವಾಗಿ ಮಹಿಳೆಯರು ಒಣ ಮೀನು ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. 2019ರಿಂದ ಮೀನು ಒಣಗಿಸುವ ಭೂಮಿಗೆ ಬೇಲಿ ಹಾಕಲಾಗಿದೆ. ಅವರ ಪರಿಸ್ಥಿತಿ ಹೇಳಲು ಆಗುವುದಿಲ್ಲ ಎಂದು ಮೇಧಾ ಪಾಟ್ಕರ್ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನಮಗೆ ವಿಶ್ವಾಸವಿದೆ. ಈ ಸಮಸ್ಯೆಯನ್ನು ಆದ್ಯತೆ ಮೇಲೆ ಪರಿಗಣಿಸಿ, ಹೊನ್ನಾವರ ಬಂದರು ಯೋಜನೆಯನ್ನು ಕೈ ಬಿಟ್ಟು, ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಅವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸತ್ಯಶೋಧನಾ ವರದಿಯ ಮುಖ್ಯಾಂಶಗಳು 

2010 ರಲ್ಲಿ ಹೊನ್ನಾವರ ಪೋರ್ಟ್ ಪ್ರೈವೆಟ್ ಲಿಮಿಟೆಡ್ (ಹೆಚ್‌ಪಿಪಿಎಲ್‌) ಗೆ ಕಾಸರಕೋಡ್ ವಾಣಿಜ್ಯ ಬಂದರನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಿದಾಗಿನಿಂದಲೂ, ಈ ಪ್ರದೇಶದಲ್ಲಿ ವಿರೋಧಗಳು ವ್ಯಕ್ತವಾಗುತ್ತಿದ್ದು, ಮೀನುಗಾರರೇ ಹೆಚ್ಚಿರುವ ಟೋಂಕಾ-1, ಟೋಂಕಾ-2, ಪಾವಿನ್ ಕುರ್ವ, ಮಲ್ಲುಕುರ್ವ ಮತ್ತು ಹೊನ್ನಾವರ ಗ್ರಾಮೀಣ-ಈ ಐದು ಗ್ರಾಮಗಳಿಗೆ ಸೇರಿದ 44 ಹೆಕ್ಟೇರ್ ಭೂಮಿಯಲ್ಲಿ ಈ ಬಂದರು ಸ್ಥಾಪಿಸಲು ಯೋಜಿಸಲಾಗಿದೆ. ಸ್ಥಳೀಯ ಸಮುದಾಯಗಳಿಂದ ಒಪ್ಪಿಗೆ ಪಡೆದುಕೊಳ್ಳದೆಯೇ ಮತ್ತು ಸಂವಿಧಾನದಡಿಯಲ್ಲಿ ಪಾಸಲಿಬೇಕಿರುವ ಪರಿಸರ ಸುರಕ್ಷತಾ ಕ್ರಮಗಳನ್ನು ಪ್ರಸ್ತುತ ಯೋಜನೆಯು ಗಾಳಿಗೆ ತೋರಿದೆ ಎಂದು ಸತ್ಯಶೋಧನಾ ವರದಿ ಹೇಳಿದೆ.

ಪ್ರಸ್ತಾವಿತ ಬಂದರಿನಲ್ಲಿ ಎರಡು ಮುಖ್ಯ ಘಟಕಗಳಿವೆ. ಒಂದು 44 ಎಕರೆಯಲ್ಲಿ ಬಂದರು ನಿರ್ಮಿಸುವುದು, ಎರಡನೆಯದ್ದು ಅದಕ್ಕೆ ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸಲು ಚತುಷ್ಪತ ರಸ್ತೆ ನಿರ್ಮಿಸುವುದು. ಬಂದರು ನಿರ್ಮಾಣದ ವಿರುದ್ದ ಸ್ಥಳೀಯ ಮೀನುಗಾರ ಸಮುದಾಯ ಹಮ್ಮಿಕೊಂಡಿದ್ದ ಶಾಂತಿಯುತ ಪ್ರತಿಭಟನೆಯನ್ನು ಕ್ರೂರವಾಗಿ ಹತ್ತಿಕ್ಕಿದ ನಂತರವಷ್ಟೇ ರಸ್ತೆ ಯೋಜನೆಯ ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಸಮೀಕ್ಷೆಯ ಹಿಂದಿನ ದಿನ ರಾತ್ರಿ ಬಿಎನ್‌ಎಸ್‌ ಸೆಕ್ಷನ್ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮರುದಿನ ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿ, ಅಧಿಕಾರಿಗಳು ಸಮೀಕ್ಷೆಗೆ ಮುಂದಾದರು. ಈ ವೇಳೆ ಪ್ರತಿಭಟಿಸಿದ ಸ್ಥಳೀಯರನ್ನು ಪೊಲೀಸರು ಹಿಂಸಿಸಿದರು, ಮಾತ್ರವಲ್ಲ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಿದರು. ಹೀಗೆ ಪೊಲೀಸರ ದೌರ್ಜನ್ಯದಿಂದ ಗಾಯಗೊಂಡಿದ್ದ ಜನರು ಚಿಕಿತ್ಸೆ ಪಡೆಯುವಾಗ ಆಸ್ಪತ್ರೆಯಲ್ಲಿ ಪೊಲೀಸರು ಹಾಜರಿದ್ದರು. ಪೊಲೀಸ್ ದೌರ್ಜನ್ಯದಿಂದ ಗಾಯಗಳಾಗಿವೆ ಎಂದು ದಾಖಲಿಸಲು ವೈದ್ಯರು ನಿರಾಕರಿಸಿದರು. ಪೊಲೀಸರ ದೌರ್ಜನ್ಯ ಈಗಲೂ ಮುಂದುವರಿದಿದ್ದರು, ಹೆಚ್ಚಿನ ಪೊಲೀಸರನ್ನು ನೇಮಿಸಿ ಸ್ಥಳೀಯರ ಚಲನವಲನಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ವರದಿ ವಿವರಿಸಿದೆ.

ಬಂದರು ಯೋಜನೆಗಾಗಿ ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಬಂದರು ನಿರ್ಮಾಣವು ಅವರ ಜೀವನೋಪಾಯಕ್ಕೂ, ಅಲ್ಲಿನ ಪರಿಸರ ಸಮತೋಲನಕ್ಕೂ ಅಪಾಯವನ್ನು ತಂದಿಟ್ಟಿದೆ. ಬ್ರೇಕ್ ವಾಟರ್‌ಗಳ ನಿರ್ಮಾಣವು ನಿಧಾನವಾಗಿ ಕರಾವಳಿಯ ಸವೆತಕ್ಕೆ ಕಾರಣವಾಗುತ್ತದೆ. ಶರಾವತಿ ನದಿಯು ವಿವಿಧ ಮೀನುಗಳ ಪ್ರಬೇಧಗಳಿಗೆ, ಅದರಲ್ಲೂ ಮುಖ್ಯವಾಗಿ ನದಿ ಮುಖದಲ್ಲಿ ಮಾತ್ರವೇ ಕಂಡು ಬರುವ ಮೀನು ಪ್ರಬೇಧಗಳಿಗೆ ನೆಲೆಯಾಗಿದೆ. ಅಲ್ಲದೆ, ಕಡಲ ತೀರ ಪ್ರದೇಶವು ಅಳಿವಿನಂಚಿನಲ್ಲಿರುವ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಶೆಡ್ಯೂಲ್ ರ ಅಡಿಯಲ್ಲಿ ಸಂರಕ್ಷಿಸಲ್ಪಟ್ಟ ಪ್ರಬೇಧವಾದ ಆಲಿವ್ ರಿಡ್ಲೆ ಟರ್ಟಲ್ (ಆಮೆ) ಗಳು ಗೂಡುಗಳನ್ನು ಕಟ್ಟಿಕೊಳ್ಳುವ ತಾಣವಾಗಿದೆ. ಹೆಚ್‌ಪಿಪಿಎಲ್‌ ಅನುಮೋದನೆ ಮತ್ತು ಅನುಮತಿ ಪಡೆವ ಪ್ರಿಕ್ರಿಯೆಯನ್ನೂ ಗಾಳಿಗೆ ತೂರಿದೆ ಎಂದು ವರದಿ ತಿಳಿಸಿದೆ. ಎನ್‌ಜಿಟಿ ಮತ್ತು ಹೈಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವರದಿ ಒದಗಿಸುತ್ತದೆ.

ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರ ಮೇಲೆ ಹಿಂಸಾಚಾರ ನಡೆಸಿದ ಪೊಲೀಸರಿಗೆ ಶಿಕ್ಷೆಯಾಗಬೇಕು. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲೆಂದೇ ದಾಖಲಿಸಲಾಗಿರುವ ಎಲ್ಲಾ ಸುಳ್ಳು ಪ್ರಕರಣಗಳನ್ನು ಕೈಬಿಡಬೇಕು ಎಂದು ವರದಿ ಆಗ್ರಹಿಸಿದೆ. ಬಂದರು ಯೋಜನೆಯ ನಿರ್ಮಾಣಕ್ಕಾಗಿ ನೀಡಲಾಗಿರುವ ಅನುಮೋದನೆಗಳನ್ನೂ ಪರಿಸರ ಸಂಬಂಧಿತ ಅನುಮತಿಗಳನ್ನೂ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ.

ಹೊನ್ನಾವರದ ಕಾರ್ಪೊರೇಟ್ ಬಂದರಿನ ಭೂತ ಚೇಷ್ಟೆಯೂ… ಬೆಸ್ತರಿಗೆ ಬೀದಿ ಪಾಲಾಗುವ ಭಯವೂ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...