Homeಕರ್ನಾಟಕಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‌ (ಎಐಸಿಸಿಟಿಯು), ಫ್ರೈಡೇಸ್ ಫಾರ್ ಫ್ಯೂಚರ್-ಕರ್ನಾಟಕ (ಎಫ್‍ಎಫ್‍ಎಫ್-ಕೆ) ಹಾಗೂ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಹೊನ್ನಾವರ ಬಂದರು ಯೋಜನೆ ಕುರಿತ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೊನ್ನಾವರ ಬಂದರು ಯೋಜನೆ ವಿರೋಧಿಸಿ ಹೋರಾಟ ಮಾಡುತ್ತಿದ್ದ ಮೀನುಗಾರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಕಾಳ ವೈದ್ಯ ಯಾವುದೇ ಕಾರಣಕ್ಕೂ ಬಂದರು ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈಗ ಅವರು ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆ ಮಾಡಿದ್ದಾರೆ. ಆದರೆ, ಈ ಯೋಜನೆಯನ್ನು ನಿಲ್ಲಿಸುವ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ? ಜನರ ಬದುಕಿನ ಹಕ್ಕನ್ನು ಕಸಿದುಕೊಳ್ಳುವ ಯೋಜನೆಗಳ ವಿರುದ್ಧ ಧ್ವನಿ ಎತ್ತಿದರೆ ನಮ್ಮನ್ನು ಅಭಿವೃದ್ಧಿ ವಿರೋಧಿಗಳು, ನಗರ ನಕ್ಸಲರು ಎನ್ನುತ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಬದುಕು ಕಳೆದುಕೊಳ್ಳುತ್ತಿದ್ದೇವೆ. ಹೊನ್ನಾವರ ಬಂದರು ಯೋಜನೆ ಇದಕ್ಕೆ ಉತ್ತಮ ಉದಾಹರಣೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಈ ಯೋಜನೆಗೆ ಅಗತ್ಯವಿರುವ ಪರಿಸರ ಇಲಾಖೆಯ ಅನುಮತಿಯನ್ನು ಸಮರ್ಪಕವಾಗಿ ಪಡೆಯಲಾಗಿಲ್ಲ. ಅಲ್ಲದೇ, ಈ ಯೋಜನೆಯ ಅನುಷ್ಠಾನದಿಂದ ಸಾಮಾಜಿಕವಾಗಿ ಹಾಗೂ ಪರಿಸರದ ಮೇಲೆ ಆಗುವಂತಹ ಪರಿಣಾಮಗಳ ಕುರಿತು ವೈಜ್ಞಾನಿಕ ಮೌಲ್ಯಮಾಪನ ಮಾಡಿಲ್ಲ. ರಸ್ತೆ ನಿರ್ಮಾಣಕ್ಕಾಗಿ ನಡೆದ ಭೂಮಾಪನ ಕ್ರಿಯೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿ, 45 ಜನರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ ಎಂದರು.

ಪೊಲೀಸರ ದೌರ್ಜನ್ಯ ಖಂಡಿಸಿ ಸುಮಾರು 40 ಮಂದಿ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಒಂದು ದಶಕದಿಂದ ಬಂದರು ವಿರೋಧಿಸಿ ಹೋರಾಟ ನಡೆಯುತ್ತಿದೆ. ಮೀನು ಒಣಗಿಸುವ ಕಟ್ಟಡಗಳನ್ನು ನೆಲಸಮ ಮಾಡಿದ್ದಾರೆ. ವಿಶೇಷವಾಗಿ ಮಹಿಳೆಯರು ಒಣ ಮೀನು ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. 2019ರಿಂದ ಮೀನು ಒಣಗಿಸುವ ಭೂಮಿಗೆ ಬೇಲಿ ಹಾಕಲಾಗಿದೆ. ಅವರ ಪರಿಸ್ಥಿತಿ ಹೇಳಲು ಆಗುವುದಿಲ್ಲ ಎಂದು ಮೇಧಾ ಪಾಟ್ಕರ್ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನಮಗೆ ವಿಶ್ವಾಸವಿದೆ. ಈ ಸಮಸ್ಯೆಯನ್ನು ಆದ್ಯತೆ ಮೇಲೆ ಪರಿಗಣಿಸಿ, ಹೊನ್ನಾವರ ಬಂದರು ಯೋಜನೆಯನ್ನು ಕೈ ಬಿಟ್ಟು, ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಅವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸತ್ಯಶೋಧನಾ ವರದಿಯ ಮುಖ್ಯಾಂಶಗಳು 

2010 ರಲ್ಲಿ ಹೊನ್ನಾವರ ಪೋರ್ಟ್ ಪ್ರೈವೆಟ್ ಲಿಮಿಟೆಡ್ (ಹೆಚ್‌ಪಿಪಿಎಲ್‌) ಗೆ ಕಾಸರಕೋಡ್ ವಾಣಿಜ್ಯ ಬಂದರನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಿದಾಗಿನಿಂದಲೂ, ಈ ಪ್ರದೇಶದಲ್ಲಿ ವಿರೋಧಗಳು ವ್ಯಕ್ತವಾಗುತ್ತಿದ್ದು, ಮೀನುಗಾರರೇ ಹೆಚ್ಚಿರುವ ಟೋಂಕಾ-1, ಟೋಂಕಾ-2, ಪಾವಿನ್ ಕುರ್ವ, ಮಲ್ಲುಕುರ್ವ ಮತ್ತು ಹೊನ್ನಾವರ ಗ್ರಾಮೀಣ-ಈ ಐದು ಗ್ರಾಮಗಳಿಗೆ ಸೇರಿದ 44 ಹೆಕ್ಟೇರ್ ಭೂಮಿಯಲ್ಲಿ ಈ ಬಂದರು ಸ್ಥಾಪಿಸಲು ಯೋಜಿಸಲಾಗಿದೆ. ಸ್ಥಳೀಯ ಸಮುದಾಯಗಳಿಂದ ಒಪ್ಪಿಗೆ ಪಡೆದುಕೊಳ್ಳದೆಯೇ ಮತ್ತು ಸಂವಿಧಾನದಡಿಯಲ್ಲಿ ಪಾಸಲಿಬೇಕಿರುವ ಪರಿಸರ ಸುರಕ್ಷತಾ ಕ್ರಮಗಳನ್ನು ಪ್ರಸ್ತುತ ಯೋಜನೆಯು ಗಾಳಿಗೆ ತೋರಿದೆ ಎಂದು ಸತ್ಯಶೋಧನಾ ವರದಿ ಹೇಳಿದೆ.

ಪ್ರಸ್ತಾವಿತ ಬಂದರಿನಲ್ಲಿ ಎರಡು ಮುಖ್ಯ ಘಟಕಗಳಿವೆ. ಒಂದು 44 ಎಕರೆಯಲ್ಲಿ ಬಂದರು ನಿರ್ಮಿಸುವುದು, ಎರಡನೆಯದ್ದು ಅದಕ್ಕೆ ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸಲು ಚತುಷ್ಪತ ರಸ್ತೆ ನಿರ್ಮಿಸುವುದು. ಬಂದರು ನಿರ್ಮಾಣದ ವಿರುದ್ದ ಸ್ಥಳೀಯ ಮೀನುಗಾರ ಸಮುದಾಯ ಹಮ್ಮಿಕೊಂಡಿದ್ದ ಶಾಂತಿಯುತ ಪ್ರತಿಭಟನೆಯನ್ನು ಕ್ರೂರವಾಗಿ ಹತ್ತಿಕ್ಕಿದ ನಂತರವಷ್ಟೇ ರಸ್ತೆ ಯೋಜನೆಯ ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಸಮೀಕ್ಷೆಯ ಹಿಂದಿನ ದಿನ ರಾತ್ರಿ ಬಿಎನ್‌ಎಸ್‌ ಸೆಕ್ಷನ್ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮರುದಿನ ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿ, ಅಧಿಕಾರಿಗಳು ಸಮೀಕ್ಷೆಗೆ ಮುಂದಾದರು. ಈ ವೇಳೆ ಪ್ರತಿಭಟಿಸಿದ ಸ್ಥಳೀಯರನ್ನು ಪೊಲೀಸರು ಹಿಂಸಿಸಿದರು, ಮಾತ್ರವಲ್ಲ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಿದರು. ಹೀಗೆ ಪೊಲೀಸರ ದೌರ್ಜನ್ಯದಿಂದ ಗಾಯಗೊಂಡಿದ್ದ ಜನರು ಚಿಕಿತ್ಸೆ ಪಡೆಯುವಾಗ ಆಸ್ಪತ್ರೆಯಲ್ಲಿ ಪೊಲೀಸರು ಹಾಜರಿದ್ದರು. ಪೊಲೀಸ್ ದೌರ್ಜನ್ಯದಿಂದ ಗಾಯಗಳಾಗಿವೆ ಎಂದು ದಾಖಲಿಸಲು ವೈದ್ಯರು ನಿರಾಕರಿಸಿದರು. ಪೊಲೀಸರ ದೌರ್ಜನ್ಯ ಈಗಲೂ ಮುಂದುವರಿದಿದ್ದರು, ಹೆಚ್ಚಿನ ಪೊಲೀಸರನ್ನು ನೇಮಿಸಿ ಸ್ಥಳೀಯರ ಚಲನವಲನಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ವರದಿ ವಿವರಿಸಿದೆ.

ಬಂದರು ಯೋಜನೆಗಾಗಿ ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಬಂದರು ನಿರ್ಮಾಣವು ಅವರ ಜೀವನೋಪಾಯಕ್ಕೂ, ಅಲ್ಲಿನ ಪರಿಸರ ಸಮತೋಲನಕ್ಕೂ ಅಪಾಯವನ್ನು ತಂದಿಟ್ಟಿದೆ. ಬ್ರೇಕ್ ವಾಟರ್‌ಗಳ ನಿರ್ಮಾಣವು ನಿಧಾನವಾಗಿ ಕರಾವಳಿಯ ಸವೆತಕ್ಕೆ ಕಾರಣವಾಗುತ್ತದೆ. ಶರಾವತಿ ನದಿಯು ವಿವಿಧ ಮೀನುಗಳ ಪ್ರಬೇಧಗಳಿಗೆ, ಅದರಲ್ಲೂ ಮುಖ್ಯವಾಗಿ ನದಿ ಮುಖದಲ್ಲಿ ಮಾತ್ರವೇ ಕಂಡು ಬರುವ ಮೀನು ಪ್ರಬೇಧಗಳಿಗೆ ನೆಲೆಯಾಗಿದೆ. ಅಲ್ಲದೆ, ಕಡಲ ತೀರ ಪ್ರದೇಶವು ಅಳಿವಿನಂಚಿನಲ್ಲಿರುವ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಶೆಡ್ಯೂಲ್ ರ ಅಡಿಯಲ್ಲಿ ಸಂರಕ್ಷಿಸಲ್ಪಟ್ಟ ಪ್ರಬೇಧವಾದ ಆಲಿವ್ ರಿಡ್ಲೆ ಟರ್ಟಲ್ (ಆಮೆ) ಗಳು ಗೂಡುಗಳನ್ನು ಕಟ್ಟಿಕೊಳ್ಳುವ ತಾಣವಾಗಿದೆ. ಹೆಚ್‌ಪಿಪಿಎಲ್‌ ಅನುಮೋದನೆ ಮತ್ತು ಅನುಮತಿ ಪಡೆವ ಪ್ರಿಕ್ರಿಯೆಯನ್ನೂ ಗಾಳಿಗೆ ತೂರಿದೆ ಎಂದು ವರದಿ ತಿಳಿಸಿದೆ. ಎನ್‌ಜಿಟಿ ಮತ್ತು ಹೈಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವರದಿ ಒದಗಿಸುತ್ತದೆ.

ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರ ಮೇಲೆ ಹಿಂಸಾಚಾರ ನಡೆಸಿದ ಪೊಲೀಸರಿಗೆ ಶಿಕ್ಷೆಯಾಗಬೇಕು. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲೆಂದೇ ದಾಖಲಿಸಲಾಗಿರುವ ಎಲ್ಲಾ ಸುಳ್ಳು ಪ್ರಕರಣಗಳನ್ನು ಕೈಬಿಡಬೇಕು ಎಂದು ವರದಿ ಆಗ್ರಹಿಸಿದೆ. ಬಂದರು ಯೋಜನೆಯ ನಿರ್ಮಾಣಕ್ಕಾಗಿ ನೀಡಲಾಗಿರುವ ಅನುಮೋದನೆಗಳನ್ನೂ ಪರಿಸರ ಸಂಬಂಧಿತ ಅನುಮತಿಗಳನ್ನೂ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ.

ಹೊನ್ನಾವರದ ಕಾರ್ಪೊರೇಟ್ ಬಂದರಿನ ಭೂತ ಚೇಷ್ಟೆಯೂ… ಬೆಸ್ತರಿಗೆ ಬೀದಿ ಪಾಲಾಗುವ ಭಯವೂ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...