Homeಕರ್ನಾಟಕಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಹೊನ್ನಾವರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‌ (ಎಐಸಿಸಿಟಿಯು), ಫ್ರೈಡೇಸ್ ಫಾರ್ ಫ್ಯೂಚರ್-ಕರ್ನಾಟಕ (ಎಫ್‍ಎಫ್‍ಎಫ್-ಕೆ) ಹಾಗೂ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಹೊನ್ನಾವರ ಬಂದರು ಯೋಜನೆ ಕುರಿತ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೊನ್ನಾವರ ಬಂದರು ಯೋಜನೆ ವಿರೋಧಿಸಿ ಹೋರಾಟ ಮಾಡುತ್ತಿದ್ದ ಮೀನುಗಾರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಕಾಳ ವೈದ್ಯ ಯಾವುದೇ ಕಾರಣಕ್ಕೂ ಬಂದರು ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈಗ ಅವರು ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆ ಮಾಡಿದ್ದಾರೆ. ಆದರೆ, ಈ ಯೋಜನೆಯನ್ನು ನಿಲ್ಲಿಸುವ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ? ಜನರ ಬದುಕಿನ ಹಕ್ಕನ್ನು ಕಸಿದುಕೊಳ್ಳುವ ಯೋಜನೆಗಳ ವಿರುದ್ಧ ಧ್ವನಿ ಎತ್ತಿದರೆ ನಮ್ಮನ್ನು ಅಭಿವೃದ್ಧಿ ವಿರೋಧಿಗಳು, ನಗರ ನಕ್ಸಲರು ಎನ್ನುತ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಬದುಕು ಕಳೆದುಕೊಳ್ಳುತ್ತಿದ್ದೇವೆ. ಹೊನ್ನಾವರ ಬಂದರು ಯೋಜನೆ ಇದಕ್ಕೆ ಉತ್ತಮ ಉದಾಹರಣೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಈ ಯೋಜನೆಗೆ ಅಗತ್ಯವಿರುವ ಪರಿಸರ ಇಲಾಖೆಯ ಅನುಮತಿಯನ್ನು ಸಮರ್ಪಕವಾಗಿ ಪಡೆಯಲಾಗಿಲ್ಲ. ಅಲ್ಲದೇ, ಈ ಯೋಜನೆಯ ಅನುಷ್ಠಾನದಿಂದ ಸಾಮಾಜಿಕವಾಗಿ ಹಾಗೂ ಪರಿಸರದ ಮೇಲೆ ಆಗುವಂತಹ ಪರಿಣಾಮಗಳ ಕುರಿತು ವೈಜ್ಞಾನಿಕ ಮೌಲ್ಯಮಾಪನ ಮಾಡಿಲ್ಲ. ರಸ್ತೆ ನಿರ್ಮಾಣಕ್ಕಾಗಿ ನಡೆದ ಭೂಮಾಪನ ಕ್ರಿಯೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿ, 45 ಜನರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ ಎಂದರು.

ಪೊಲೀಸರ ದೌರ್ಜನ್ಯ ಖಂಡಿಸಿ ಸುಮಾರು 40 ಮಂದಿ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಒಂದು ದಶಕದಿಂದ ಬಂದರು ವಿರೋಧಿಸಿ ಹೋರಾಟ ನಡೆಯುತ್ತಿದೆ. ಮೀನು ಒಣಗಿಸುವ ಕಟ್ಟಡಗಳನ್ನು ನೆಲಸಮ ಮಾಡಿದ್ದಾರೆ. ವಿಶೇಷವಾಗಿ ಮಹಿಳೆಯರು ಒಣ ಮೀನು ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. 2019ರಿಂದ ಮೀನು ಒಣಗಿಸುವ ಭೂಮಿಗೆ ಬೇಲಿ ಹಾಕಲಾಗಿದೆ. ಅವರ ಪರಿಸ್ಥಿತಿ ಹೇಳಲು ಆಗುವುದಿಲ್ಲ ಎಂದು ಮೇಧಾ ಪಾಟ್ಕರ್ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನಮಗೆ ವಿಶ್ವಾಸವಿದೆ. ಈ ಸಮಸ್ಯೆಯನ್ನು ಆದ್ಯತೆ ಮೇಲೆ ಪರಿಗಣಿಸಿ, ಹೊನ್ನಾವರ ಬಂದರು ಯೋಜನೆಯನ್ನು ಕೈ ಬಿಟ್ಟು, ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಅವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸತ್ಯಶೋಧನಾ ವರದಿಯ ಮುಖ್ಯಾಂಶಗಳು 

2010 ರಲ್ಲಿ ಹೊನ್ನಾವರ ಪೋರ್ಟ್ ಪ್ರೈವೆಟ್ ಲಿಮಿಟೆಡ್ (ಹೆಚ್‌ಪಿಪಿಎಲ್‌) ಗೆ ಕಾಸರಕೋಡ್ ವಾಣಿಜ್ಯ ಬಂದರನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಿದಾಗಿನಿಂದಲೂ, ಈ ಪ್ರದೇಶದಲ್ಲಿ ವಿರೋಧಗಳು ವ್ಯಕ್ತವಾಗುತ್ತಿದ್ದು, ಮೀನುಗಾರರೇ ಹೆಚ್ಚಿರುವ ಟೋಂಕಾ-1, ಟೋಂಕಾ-2, ಪಾವಿನ್ ಕುರ್ವ, ಮಲ್ಲುಕುರ್ವ ಮತ್ತು ಹೊನ್ನಾವರ ಗ್ರಾಮೀಣ-ಈ ಐದು ಗ್ರಾಮಗಳಿಗೆ ಸೇರಿದ 44 ಹೆಕ್ಟೇರ್ ಭೂಮಿಯಲ್ಲಿ ಈ ಬಂದರು ಸ್ಥಾಪಿಸಲು ಯೋಜಿಸಲಾಗಿದೆ. ಸ್ಥಳೀಯ ಸಮುದಾಯಗಳಿಂದ ಒಪ್ಪಿಗೆ ಪಡೆದುಕೊಳ್ಳದೆಯೇ ಮತ್ತು ಸಂವಿಧಾನದಡಿಯಲ್ಲಿ ಪಾಸಲಿಬೇಕಿರುವ ಪರಿಸರ ಸುರಕ್ಷತಾ ಕ್ರಮಗಳನ್ನು ಪ್ರಸ್ತುತ ಯೋಜನೆಯು ಗಾಳಿಗೆ ತೋರಿದೆ ಎಂದು ಸತ್ಯಶೋಧನಾ ವರದಿ ಹೇಳಿದೆ.

ಪ್ರಸ್ತಾವಿತ ಬಂದರಿನಲ್ಲಿ ಎರಡು ಮುಖ್ಯ ಘಟಕಗಳಿವೆ. ಒಂದು 44 ಎಕರೆಯಲ್ಲಿ ಬಂದರು ನಿರ್ಮಿಸುವುದು, ಎರಡನೆಯದ್ದು ಅದಕ್ಕೆ ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸಲು ಚತುಷ್ಪತ ರಸ್ತೆ ನಿರ್ಮಿಸುವುದು. ಬಂದರು ನಿರ್ಮಾಣದ ವಿರುದ್ದ ಸ್ಥಳೀಯ ಮೀನುಗಾರ ಸಮುದಾಯ ಹಮ್ಮಿಕೊಂಡಿದ್ದ ಶಾಂತಿಯುತ ಪ್ರತಿಭಟನೆಯನ್ನು ಕ್ರೂರವಾಗಿ ಹತ್ತಿಕ್ಕಿದ ನಂತರವಷ್ಟೇ ರಸ್ತೆ ಯೋಜನೆಯ ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಸಮೀಕ್ಷೆಯ ಹಿಂದಿನ ದಿನ ರಾತ್ರಿ ಬಿಎನ್‌ಎಸ್‌ ಸೆಕ್ಷನ್ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮರುದಿನ ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿ, ಅಧಿಕಾರಿಗಳು ಸಮೀಕ್ಷೆಗೆ ಮುಂದಾದರು. ಈ ವೇಳೆ ಪ್ರತಿಭಟಿಸಿದ ಸ್ಥಳೀಯರನ್ನು ಪೊಲೀಸರು ಹಿಂಸಿಸಿದರು, ಮಾತ್ರವಲ್ಲ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಿದರು. ಹೀಗೆ ಪೊಲೀಸರ ದೌರ್ಜನ್ಯದಿಂದ ಗಾಯಗೊಂಡಿದ್ದ ಜನರು ಚಿಕಿತ್ಸೆ ಪಡೆಯುವಾಗ ಆಸ್ಪತ್ರೆಯಲ್ಲಿ ಪೊಲೀಸರು ಹಾಜರಿದ್ದರು. ಪೊಲೀಸ್ ದೌರ್ಜನ್ಯದಿಂದ ಗಾಯಗಳಾಗಿವೆ ಎಂದು ದಾಖಲಿಸಲು ವೈದ್ಯರು ನಿರಾಕರಿಸಿದರು. ಪೊಲೀಸರ ದೌರ್ಜನ್ಯ ಈಗಲೂ ಮುಂದುವರಿದಿದ್ದರು, ಹೆಚ್ಚಿನ ಪೊಲೀಸರನ್ನು ನೇಮಿಸಿ ಸ್ಥಳೀಯರ ಚಲನವಲನಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ವರದಿ ವಿವರಿಸಿದೆ.

ಬಂದರು ಯೋಜನೆಗಾಗಿ ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಬಂದರು ನಿರ್ಮಾಣವು ಅವರ ಜೀವನೋಪಾಯಕ್ಕೂ, ಅಲ್ಲಿನ ಪರಿಸರ ಸಮತೋಲನಕ್ಕೂ ಅಪಾಯವನ್ನು ತಂದಿಟ್ಟಿದೆ. ಬ್ರೇಕ್ ವಾಟರ್‌ಗಳ ನಿರ್ಮಾಣವು ನಿಧಾನವಾಗಿ ಕರಾವಳಿಯ ಸವೆತಕ್ಕೆ ಕಾರಣವಾಗುತ್ತದೆ. ಶರಾವತಿ ನದಿಯು ವಿವಿಧ ಮೀನುಗಳ ಪ್ರಬೇಧಗಳಿಗೆ, ಅದರಲ್ಲೂ ಮುಖ್ಯವಾಗಿ ನದಿ ಮುಖದಲ್ಲಿ ಮಾತ್ರವೇ ಕಂಡು ಬರುವ ಮೀನು ಪ್ರಬೇಧಗಳಿಗೆ ನೆಲೆಯಾಗಿದೆ. ಅಲ್ಲದೆ, ಕಡಲ ತೀರ ಪ್ರದೇಶವು ಅಳಿವಿನಂಚಿನಲ್ಲಿರುವ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಶೆಡ್ಯೂಲ್ ರ ಅಡಿಯಲ್ಲಿ ಸಂರಕ್ಷಿಸಲ್ಪಟ್ಟ ಪ್ರಬೇಧವಾದ ಆಲಿವ್ ರಿಡ್ಲೆ ಟರ್ಟಲ್ (ಆಮೆ) ಗಳು ಗೂಡುಗಳನ್ನು ಕಟ್ಟಿಕೊಳ್ಳುವ ತಾಣವಾಗಿದೆ. ಹೆಚ್‌ಪಿಪಿಎಲ್‌ ಅನುಮೋದನೆ ಮತ್ತು ಅನುಮತಿ ಪಡೆವ ಪ್ರಿಕ್ರಿಯೆಯನ್ನೂ ಗಾಳಿಗೆ ತೂರಿದೆ ಎಂದು ವರದಿ ತಿಳಿಸಿದೆ. ಎನ್‌ಜಿಟಿ ಮತ್ತು ಹೈಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವರದಿ ಒದಗಿಸುತ್ತದೆ.

ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರ ಮೇಲೆ ಹಿಂಸಾಚಾರ ನಡೆಸಿದ ಪೊಲೀಸರಿಗೆ ಶಿಕ್ಷೆಯಾಗಬೇಕು. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲೆಂದೇ ದಾಖಲಿಸಲಾಗಿರುವ ಎಲ್ಲಾ ಸುಳ್ಳು ಪ್ರಕರಣಗಳನ್ನು ಕೈಬಿಡಬೇಕು ಎಂದು ವರದಿ ಆಗ್ರಹಿಸಿದೆ. ಬಂದರು ಯೋಜನೆಯ ನಿರ್ಮಾಣಕ್ಕಾಗಿ ನೀಡಲಾಗಿರುವ ಅನುಮೋದನೆಗಳನ್ನೂ ಪರಿಸರ ಸಂಬಂಧಿತ ಅನುಮತಿಗಳನ್ನೂ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ.

ಹೊನ್ನಾವರದ ಕಾರ್ಪೊರೇಟ್ ಬಂದರಿನ ಭೂತ ಚೇಷ್ಟೆಯೂ… ಬೆಸ್ತರಿಗೆ ಬೀದಿ ಪಾಲಾಗುವ ಭಯವೂ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...