Homeಅಂಕಣಗಳುಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

ಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

- Advertisement -
- Advertisement -

| ಡಾ. ವಾಸು ಎಚ್.ವಿ |

‘ಮುಖ್ಯವಾಹಿನಿ’ ಮಾಧ್ಯಮಗಳ ಕೊಳಕುತನವನ್ನು ನೋಡಿ ಅಪಹಾಸ್ಯ ಮಾಡಿಕೊಂಡು ನಗುವುದು ಒಮ್ಮೊಮ್ಮೆ ಅಪಾಯಕಾರಿಯಾದುದು. ಏಕೆಂದರೆ ಇಂತಹ ಮಾಧ್ಯಮಗಳು ಜೀವವಿರೋಧಿಯಾಗಿದ್ದು ಪ್ರಜಾತಂತ್ರದ ಬುಡಕ್ಕೆ ಕೊಳ್ಳಿಯಿಡುತ್ತಿವೆ. ಆದರೆ ಅವನ್ನು ಬಯ್ದುಕೊಳ್ಳುತ್ತಾ, ಆತಂಕ ಪಡುತ್ತಾ, ವ್ಯಕ್ತಿಗತವಾಗಿ ಯಾರನ್ನೋ ಗುರಿ ಮಾಡುತ್ತಾ ಕಾಲವ್ಯಯ ಮಾಡುವುದು ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತವೆ. ಪರ್ಯಾಯದ ನಿರ್ಮಾಣ ಮಾತ್ರ ಈ ವಿಷವ್ಯೂಹದಿಂದ ನಮ್ಮೆಲ್ಲರನ್ನು ಮೇಲೆತ್ತಬಹುದು.

ಇದರಲ್ಲಿ ಒಂದು ತೊಡಕಿದೆ. ಪರ್ಯಾಯದ ಮಾತಾಡುವವರು ಸಮಾಜದ ಮುಖ್ಯವಾಹಿನಿಯಲ್ಲಿ ಅಂತಹ ದೊಡ್ಡ ಪರಿಣಾಮ ಬೀರದ, ಶುದ್ಧ ಮತ್ತು ರ್ಯಾಡಿಕಲ್ ಕಂಟೆಂಟ್ ಹೊಂದಿರುವ ಪುಟ್ಟ ಪ್ರಯತ್ನದ ಕಡೆಗೆ ಒತ್ತು ಕೊಡುತ್ತಾರೆ. ಮೊದಲೇ ಅಂಚಿನಲ್ಲಿರುವುದನ್ನು, ಪರ್ಯಾಯದ ಹೆಸರಿನಲ್ಲಿ ಅಂಚಿನಲ್ಲೇ ಉಳಿಸುವುದು ಪರ್ಯಾಯವಾಗಲಾರದು. ಮುಖ್ಯವಾಹಿನಿಯ ಘಾತುಕ ಗಾತ್ರವನ್ನು ಹಿಮ್ಮೆಟ್ಟಿಸಿ, ಅದೇ ಮುಖ್ಯವಾಹಿನಿಯಲ್ಲಿ ತನ್ನನ್ನು ತಾನು ಪ್ರತಿಷ್ಠಾಪಿಸಿಕೊಳ್ಳುವ ಸೃಜನಶೀಲ ಮಾರ್ಗವನ್ನು ಶೋಧಿಸಿ, ಸಾಕಾರಗೊಳಿಸಿ ಜಯಿಸುವುದೇ ನಿಜವಾದ ಪರ್ಯಾಯ.

ಈವರೆಗಿನ ಪರಿಭಾಷೆಯು ತಪ್ಪು ಅರ್ಥ ಕೊಡುವುದೆಂಬ ಕಾರಣಕ್ಕೆ, ಪರ್ಯಾಯ ಮಾಧ್ಯಮದ ಬದಲಿಗೆ ಹೊಸ ಮಾಧ್ಯಮ ಎಂಬ ಪದವನ್ನು ಶೀರ್ಷಿಕೆಯಲ್ಲಿ ಬಳಸಲಾಗಿದೆ. ಮಾಧ್ಯಮಗಳು ಉಳ್ಳವರ ಕಪಿಮುಷ್ಟಿಯಲ್ಲಿ ಸೇರುವುದು ಮತ್ತು ಹಳತಾಗುವುದು ಒಟ್ಟಿಗೇ ನಡೆಯುತ್ತಿರುತ್ತದೆ. ಆ ನಂತರ ಹೊಸ ಮಾಧ್ಯಮ ಹುಟ್ಟಿಕೊಳ್ಳುತ್ತದೆ. ಸಾಮಾಜಿಕ ಜಾಲತಾಣಗಳನ್ನು ಹೊಸ ಮಾಧ್ಯಮಗಳೆಂದು ಕರೆಯಲಾಗುತ್ತದಾದರೂ, ಅಲ್ಲೊಂದು ವಿಪರ್ಯಾಸವಿದೆ. Social media is not so social ಎಂಬ ಮಾತಿದೆ. ಏಕೆಂದರೆ, ಅದೂ ಸಹಾ ಕಾರ್ಪೋರೇಟ್ ಲಾಭವನ್ನು ಹಿಗ್ಗಿಸಲೆಂದೇ ಹೆಚ್ಚೆಚ್ಚು ಪುನರ್ರೂಪಿತಗೊಳ್ಳುತ್ತಿದೆ.

ಅಂದರೆ, ಹೊಸ ಮಾಧ್ಯಮವು ಬಹುಬೇಗ ಹಳತಾಗುತ್ತಿರುವ ಕಾಲದಲ್ಲಿ ನಾವು ನವನವೀನ ದಾರಿಯನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಲಂಕೇಶರು 90ರ ದಶಕದ ಮಧ್ಯಭಾಗದಲ್ಲೇ ‘ಪತ್ರಿಕೆ’ಯ ಬರಹದಲ್ಲಿ ಅದನ್ನು ಹೇಳಿದ್ದರು. ಆಗಿಂದಾಗ್ಗೆ ಪೊರೆ ಕಳಚದೇ ಮಾಧ್ಯಮವು ಉಳಿದುಕೊಳ್ಳುವುದು ಸಾಧ್ಯವಿಲ್ಲ ಎಂಬುದು ಅವರ ಮಾತಾಗಿತ್ತು. ಲಂಕೇಶರು ರಾಜಕೀಯ ಮತ್ತು ಸಾಹಿತ್ಯಗಳನ್ನು ಪತ್ರಿಕೆಯ ಪ್ರಮುಖ ಭಾಗಗಳನ್ನಾಗಿಸಿ ಜಾಣ ಜಾಣೆಯರನ್ನು ಓರಿಯೆಂಟ್ ಮಾಡಲು ಟ್ಯಾಬ್ಲಾಯ್ಡ್ ವಾರಪತ್ರಿಕೆಯನ್ನು ಪ್ರಭಾವೀ ಹತಾರವಾಗಿ ಬಳಸಿದರು.

ಟ್ಯಾಬ್ಲಾಯ್ಡ್ ಪತ್ರಿಕೆಗಳು ತಳಮುಟ್ಟಿ, ಮುದ್ರಣ ಮಾಧ್ಯಮ ತನ್ನ ಬಿರುಸು ಕಳೆದುಕೊಳ್ಳುತ್ತಿರುವ ಯುಗದಲ್ಲಿ ‘ನ್ಯಾಯಪಥ’ ಆರಂಭವಾಗಿದೆ. ಹಾಗಾದರೆ, ಇದು ಕೇವಲ ಒಂದು ಸಾಂಕೇತಿಕ ಪ್ರಯತ್ನವಾಗಿ ಮುಂದುವರೆಯಬೇಕೆಂಬುದೇ ನಮ್ಮ ಯೋಜನೆಯೇ? ಖಂಡಿತಾ ಅಲ್ಲ. ನಷ್ಟದಲ್ಲೇ ನಡೆಯುತ್ತಿರುವ ಬಹುಪಾಲು ಟಿವಿ ಚಾನೆಲ್‍ಗಳು ಮುಂದೆಂದೋ ಕ್ಲಿಕ್ ಆಗುತ್ತೇವೆಂಬ ಭ್ರಾಂತಿಯಲ್ಲಿ ಕಾಲು ಎಳೆದುಕೊಂಡು ನಡೆಯುತ್ತವಲ್ಲಾ ಹಾಗೆ ಇದನ್ನು ನಡೆಸಲಾಗುತ್ತಿದೆಯೇ? ಇಲ್ಲವೇ ಇಲ್ಲ. ನ್ಯಾಯಪಥ ಪತ್ರಿಕೆ ಅಥವಾ ಈಗ ಚುರುಕು ಹಾಗೂ ವ್ಯಾಪಕತೆ ಪಡೆದುಕೊಳ್ಳುತ್ತಿರುವ ವೆಬ್ ಪೋರ್ಟಲ್‍ಗಳು ಹೊಸ ಮಾಧ್ಯಮ ರೂಪಿಸಲು ಬೇಕಾದ ಜನರನ್ನು ಒಟ್ಟುಗೂಡಿಸುವ ವೇದಿಕೆಗಳಷ್ಟೇ.

ಎಲ್ಲಾ ಕಾಲದಲ್ಲೂ ಅತ್ಯಂತ ಪ್ರಬಲವಾದ ಮಾಧ್ಯಮ ಯಾವುದು? ಅದು ಜನರೇ ವಾಹಕರಾಗಿ ಪ್ರಸಾರ ಮಾಡುವ ಮಾಧ್ಯಮ. ಜನರೇ ತಮಗೆ ಬೇಕಾದ ಕಥನವನ್ನೂ ಕಟ್ಟಿಕೊಳ್ಳುವಂತಾದರೆ? ಅಂತಹ ಮಾಧ್ಯಮವನ್ನು ಯಾವುದೂ ಸರಿಗಟ್ಟಲಾರದು. ವಿವಿಧ ದೇಶಗಳಲ್ಲಿ ತಮ್ಮ ಸ್ಥಾವರಗಳನ್ನು ಹೊಂದಿ, ವಚ್ರ್ಯುಯಲ್ ಜಗತ್ತಿನಲ್ಲಿ ಜಂಗಮವಾಗಿರುವ ಸಾಮಾಜಿಕ ಜಾಲತಾಣಗಳು ಜನರ ಆಲೋಚನೆಗಳು ಹರಳುಗಟ್ಟಿ ಪ್ರಸಾರಗೊಳ್ಳಲು ವೇದಿಕೆಯನ್ನು ಒದಗಿಸಿವೆ. ಮೇಲೆ ಹೇಳಿದಂತೆ ಇದಕ್ಕೆ ಮಿತಿಗಳಿವೆಯಾದರೂ, ಈ ಸದ್ಯ ಅವು ಇನ್ನೂ ವಿಸ್ತಾರಗೊಳ್ಳುವ ಹಂತದಲ್ಲೇ ಇವೆ. ಮುಂದೊಂದು ದಿನ (ಇಂದು ಕಾಶ್ಮೀರದಲ್ಲಿ ಆಗಿರುವಂತೆ) ಸ್ಥಗಿತಗೊಳ್ಳುವ ಅಥವಾ ಸಂಪೂರ್ಣ ಸೆಲೆಕ್ಟಿವ್ ಆಗುವುದಕ್ಕೆ ಮುಂಚೆ ಬದಲೀ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗುತ್ತದಾದರೂ, ಅಲ್ಲಿಯವರೆಗೆ ಅವು ನಮಗೆ ಕೆಲವು ಸಾಧ್ಯತೆಗಳನ್ನು ಒದಗಿಸುತ್ತವೆ.

ಬಲವಾದ ಹೊಸ ಮುಖ್ಯವಾಹಿನಿ ರೂಪಿಸಲು ಮೊದಲು ನಾವು ಓದುಗರ ಅಂದರೆ ಸಾಮಾನ್ಯ ಜನರ ಮುಂಚೂಣಿ ವಿಭಾಗದ ಹಿತಾಸಕ್ತಿಯನ್ನು ರೂಪಿಸುವುದು ಮುಖ್ಯ. ಆಗ ಅವರೇ ಸುದ್ದಿಯನ್ನು ರೂಪಿಸುತ್ತಾರೆ ಮತ್ತು ಅದರ ಪ್ರಸಾರಕ್ಕೂ ಕಾರಣರಾಗುತ್ತಾರೆ. ಎಲ್ಲಾ ಕಾಲದಲ್ಲೂ ಇವರೇ, ಅಂದರೆ ಈ ಸಾಮಾನ್ಯ ಜನರೇ, ಭಾರೀ ಬಹುಸಂಖ್ಯಾತರಾದ್ದರಿಂದ (overwhelming majority) ಅವರು ಸುದ್ದಿಯನ್ನು ರೂಪಿಸುವುದು ಮತ್ತು ಪ್ರಸಾರ ಮಾಡುವುದಕ್ಕೆ ಇಳಿದರೆ ಅದನ್ನು ಯಾರಾದರೂ ಹೇಗೆ ಸರಿಗಟ್ಟಬಲ್ಲರು. ಅವರೇ ಅದಕ್ಕೆ ಬೇಕಾದ ಸಂಪನ್ಮೂಲವನ್ನೂ ರೂಢಿಸಿಕೊಳ್ಳುತ್ತಾರೆ. ಅಂದರೆ ಬಹಳ ಹೆಚ್ಚಿನ ಜನರು ಅದನ್ನು ಓದಿದರೆ ಜಾಹೀರಾತಿನ ಮೂಲಕ ಅಥವಾ ನೇರವಾಗಿ ಹಣ ನೀಡುವ ಮೂಲಕ.

ಈ ಬಹುಸಂಖ್ಯಾತ ಜನರನ್ನು ಅವರ ಹಿತಾಸಕ್ತಿಗೆ ಪೂರಕವಾಗಿ ಚಿಂತಿಸಲು, ಕಥನ ರೂಪಿಸಲು, ಸುದ್ದಿ ಕಟ್ಟಲು ಓರಿಯೆಂಟ್ ಮಾಡುವುದೆಂದರೆ, ಅದು ಹೊಸ ಮಾಧ್ಯಮ ಕಟ್ಟಲು ಬೇಕಾದ ಸೃಜನಶೀಲ ದಾರಿಗಳನ್ನು ಕಂಡುಕೊಳ್ಳುವ ಕೆಲಸ. ಆ ಸವಾಲನ್ನು ನಾವೀಗ ಕೈಗೆತ್ತಿಕೊಳ್ಳಬೇಕಿದೆ.

ದೇಶದ ಬಹುಸಂಖ್ಯೆಯ ಜನರು ಪರ್ಯಾಯ ಚಿಂತನೆ, ಪ್ರಜ್ಞೆಯನ್ನು ಪಡೆದುಕೊಳ್ಳಲು ಸಾಧ್ಯವಾಗುವುದು ಅವರೇ ಪಾಲ್ಗೊಳ್ಳುವ ಗುದ್ದಾಟದಿಂದ ಪಡೆಯುವ ಅನುಭವದ ಮೂಲಕವೇ. ಆ ರೀತಿಯಲ್ಲಿ ಬಹುಸಂಖ್ಯೆಯ ಜನರೆಲ್ಲರೂ ಒಂದಾಗಿ ನಿರ್ಮಿಸಹೊರಡುವ ಪರ್ಯಾಯ ಬೆಳೆಯದೇ, ಮಾಧ್ಯಮ ಮಾತ್ರ ಬೆಳೆದುಬಿಡುತ್ತದೆಯೇ ಎಂಬ ಪ್ರಶ್ನೆಯನ್ನು ಕೆಲವು ಶಾಶ್ವತ ಸಿನಿಕರು ಕೇಳಬಹುದು. ಹೌದು, ಬೆಳೆಯುತ್ತದೆ ಎಂಬ ವಿಶ್ವಾಸ ನಮ್ಮದು. ಅದು ಇಂದಿನ ಎಲ್ಲಾ ಮುಖ್ಯವಾಹಿನಿ ಮಾಧ್ಯಮಗಳನ್ನು ಗಾತ್ರದಲ್ಲಿ ಮೀರದಿದ್ದರೂ, ಪರಿಣಾಮದಲ್ಲಿ ಬೀರುತ್ತದೆ. ಏಕೆಂದರೆ

ಮಾಧ್ಯಮವೆನ್ನುವುದು ಸಮಾಜದಲ್ಲಿ ವೇಗವರ್ಧಕದ ಕೆಲಸ ಮಾಡುತ್ತದೆಯೇ ಹೊರತು, ತಾನೇ ಸಮಾಜವಲ್ಲ.
ಅಂತಹ ‘ಮುಖ್ಯವಾಹಿನಿ’ ಮಾಧ್ಯಮವನ್ನು ಕಟ್ಟಿ ನಿಲ್ಲಿಸುವ ಯೋಚನೆಯನ್ನು ನಾವು ಹೊಂದಿದ್ದೇವೆ. ಹೇಗೆ ಎಂಬ ಯೋಜನೆಯನ್ನು ಜೊತೆಗೂಡಿ ರೂಪಿಸೋಣ. ಈ ನಿಟ್ಟಿನಲ್ಲಿ ನೀವೇನು ಜವಾಬ್ದಾರಿ ತೆಗೆದುಕೊಳ್ಳಬಹುದು ಎಂಬುದನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...